ಇನ್ಮುಂದೆ ಹುಲಿಯನ್ನು "ನರಭಕ್ಷಕ" ಎನ್ನುವಂತಿಲ್ಲ!
ಚಾಮರಾಜನಗರ, ನವೆಂಬರ್ 16: ಮನುಷ್ಯರ ಮೇಲೆ ದಾಳಿ ಮಾಡಿ ಕೊಂದ ಹುಲಿಯನ್ನು ನರಭಕ್ಷಕ ಎಂದು ಕರೆಯುವುದನ್ನು ಜನ ರೂಢಿ ಮಾಡಿಕೊಂಡಿದ್ದರು. ಆದರೆ ಇನ್ನು ಮುಂದೆ ಹುಲಿಯನ್ನು ಈ ರೀತಿ ಕರೆಯುವಂತಿಲ್ಲ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಭಾರತದ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯನ್ನು "ನರಭಕ್ಷಕ" ಎಂದು ಸಂಬೋಧಿಸದಂತೆ ಆದೇಶ ಹೊರಡಿಸಿದ್ದು, ಅದನ್ನು ಪಾಲಿಸಲೇಬೇಕಾಗಿದೆ.
ಈ ಬಾರಿಯ ಪರಿಷ್ಕೃತ ಕಾರ್ಯವಿಧಿಯಲ್ಲಿ ಈ ಅಂಶವನ್ನು ಪ್ರಾಧಿಕಾರ ಸೇರ್ಪಡೆ ಮಾಡಿದ್ದು, ಹುಲಿಗಳು ಆಕಸ್ಮಾತ್ ಆಗಿ ಮನುಷ್ಯರನ್ನು ಕೊಂದಿರುತ್ತವೆಯಷ್ಟೆ. ಹೀಗೆ ಮನುಷ್ಯನನ್ನು ಆಕಸ್ಮಾತ್ ಆಗಿ ಕೊಲ್ಲುವ ಹುಲಿಗಳೆಲ್ಲವೂ ನರಭಕ್ಷಕವಾಗಿ ಪರಿವರ್ತನೆಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನರಭಕ್ಷಕ ಎಂದು ಸಂಭೋದಿಸುವುದು ಸೂಕ್ತವಲ್ಲ ಎಂದು ಪ್ರಾಧಿಕಾರ ಅಭಿಪ್ರಾಯಪಟ್ಟಿದೆ. ಜತೆಗೆ ನರಭಕ್ಷಕ ಎನ್ನುವ ಬದಲು ನರ ಕಂಟಕ ಅಥವಾ ಮನುಷ್ಯರಿಗೆ ಅಪಾಯಕಾರಿಯಾದ ಪ್ರಾಣಿ ಎಂದು ಕರೆಯಬಹುದೆಂದು ಹೇಳಿದೆ.
ಇನ್ನು ಹುಲಿಯೊಂದು ಮನುಷ್ಯರಿಗೆ ಕಾಟ ಕೊಡುತ್ತಿದೆ ಎನ್ನುವುದು ಗೊತ್ತಾದರೆ, ಅದನ್ನು ತಕ್ಷಣ ಹಿಡಿಯುವ ಪ್ರಯತ್ನ ನಡೆಸಬೇಕು, ಜತೆಗೆ ಹುಲಿ ಹಿಡಿಯುವ ಕಾರ್ಯಾಚರಣೆಯಲ್ಲಿ ಯಾವುದೇ ಖಾಸಗಿ ವ್ಯಕ್ತಿಗಳು, ಅಂದರೆ ಶಾರ್ಪ್ ಶೂಟರ್ ಗಳನ್ನು ಕೂಡ ಅರಣ್ಯ ಇಲಾಖೆ ನಿರ್ಬಂಧಿಸಿದೆ. ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಅವನಿ ಎಂಬ ಹುಲಿ ಗುಂಡಿಗೆ ಬಲಿಯಾಗಿದ್ದರ ಹಿನ್ನೆಲೆ ಈ ನಿರ್ಧಾರಕ್ಕೆ ಮುಖ್ಯ ಕಾರಣ.

ಈ ಹುಲಿ ಕಾಡಿನ ಸುತ್ತಮುತ್ತಲ 13 ಗ್ರಾಮಸ್ಥರನ್ನು ಕೊಂದು ಹಾಕಿದ್ದ ಕಾರಣಕ್ಕೆ ನರಭಕ್ಷಕ ಎಂಬ ಪಟ್ಟ ಕಟ್ಟಲಾಗಿತ್ತು. ಆದರೆ ಅಷ್ಟೂ ಜನರೂ ಇದೇ ಹುಲಿಯನ್ನು ಕೊಂದಿರುವ ಪುರಾವೆಯಿರಲಿಲ್ಲ. ಆದರೆ ವದಂತಿ ಹೆಚ್ಚಾದಾಗ ಸುಪ್ರೀಂಕೋರ್ಟ್ ಗುಂಡಿಕ್ಕಿ ಕೊಲ್ಲುವಂತೆ ಆದೇಶ ನೀಡಿತ್ತು. ನಿಯಮದ ಪ್ರಕಾರ ಇದನ್ನು ಸಾಯಿಸಿಲ್ಲ ಎಂಬುದು ಪರಿಸರವಾದಿಗಳ ಅಭಿಪ್ರಾಯ.
ಹೊಸ ಎನ್ಟಿಸಿಎ ಮಾರ್ಗಸೂಚಿಗಳನ್ನು ಅನುಸರಿಸಿದರೆ ಕೊಲ್ಲುವುದರಲ್ಲಿ ಕೊನೆಗೊಳ್ಳುವುದಕ್ಕಿಂತ ಹೆಚ್ಚಿನ ಪ್ರಾಣಿಗಳನ್ನು ಉಳಿಸಬಹುದು, ತರಬೇತಿ ಪಡೆದ ಪಶುವೈದ್ಯಕೀಯ ವೈದ್ಯರು ಮಾತ್ರ ಪ್ರಾಣಿಗಳನ್ನು ತೊಂದರೆಗೊಳಿಸದೆ ದೊಡ್ಡ ಪ್ರಾಣಿಗಳನ್ನು ಯಶಸ್ವಿಯಾಗಿ ಸೆರೆಹಿಡಿಯಬಹುದಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications