ಗುಂಡ್ಲುಪೇಟೆ: ಗ್ರಾಮ ಲೆಕ್ಕಾಧಿಕಾರಿಗೆ ನಿಂದಿಸಿದ್ದ ವ್ಯಕ್ತಿ-ಮುಂದೇನಾಯ್ತು ನೋಡಿ
ಚಾಮರಾಜನಗರ, ಆಗಸ್ಟ್, 21: ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ, ಗ್ರಾಮ ಲೆಕ್ಕಾಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ವ್ಯಕ್ತಿಗೆ ಗುಂಡ್ಲುಪೇಟೆ ಜೆಎಂಎಫ್ಸಿ ನ್ಯಾಯಾಲಯವು 3 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ವಡೆಯನಪುರ ಗ್ರಾಮದ ಶ್ರೀಕಂಠಸ್ವಾಮಿ ಎಂಬವರು ಶಿಕ್ಷೆಗೊಳಗಾದ ವ್ಯಕ್ತಿಯಾಗಿದ್ದಾರೆ.
2018ರ ಆಗಸ್ಟ್ 1ರಂದು ಬೊಮ್ಮಲಾಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಪುಜೇರಿ ಎಂಬವರಿಗೆ ಪೌತಿ ಖಾತೆ ಮಾಡಿಕೊಟ್ಟ ವಿಚಾರದಲ್ಲಿ ಶ್ರೀಕಂಠಸ್ವಾಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು.

3 ವರ್ಷ ಶಿಕ್ಷೆ, 10 ಸಾವಿರ ರೂ. ದಂಡ: ಈ ಬಗ್ಗೆ ಬಸವರಾಜು ಗುಂಡ್ಲುಪೇಟೆ ಠಾಣೆಯಲ್ಲಿ ಕಲಂ 353, 514 ರ ಅಡಿ ದೂರು ದಾಖಲಿಸಿದ್ದರು. ಪ್ರಕರಣದ ಬಗ್ಗೆ ವಾದ-ಪ್ರತಿವಾದ ನಡೆದು ನಿಂದನೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದು ಸಾಬೀತಾದ ಹಿನ್ನೆಲೆ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾ.ಜೆ.ಶಿವಕುಮಾರ್ ಅಪರಾಧಿಗೆ 3 ವರ್ಷ ಸಾದಾ ಶಿಕ್ಷೆ, 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ನೂರಾರು ಕೋಟಿ ಅಕ್ರಮ ಆಸ್ತಿ: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡುತ್ತಿದ್ದಂತೆ ಸಿಡಿದೆದ್ದಿರುವ ಕಾಂಗ್ರೆಸ್ ಪಡೆ ಇಂದು ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ಕೇಂದ್ರ ಸಚಿವ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಆಸ್ತಿ ಬಾಂಬ್ ಸಿಡಿಸಿದರು.
ಕೋಟಿ.. ಕೋಟಿ ಹಣ ಮಾಡುತ್ತಿದ್ದರು: ಡಿ ನೋಟಿಫೈ ವಿಚಾರವಾಗಿ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ನೂರಾರು ಹೆಕ್ಟೇರ್ ತೋಟಗಳನ್ನು ಡಿನೋಟಿಫೈ ಮಾಡಿ, ಕೋಟಿ.. ಕೋಟಿ ಹಣ ಮಾಡುತ್ತಿದ್ದರು. ಏನು ಸರ್ ಇವೆಲ್ಲಾ ಅಂತಾ ಕೇಳಿದ್ದಕ್ಕೆ ಏನು ಮಾಡೋದು ಪಕ್ಷಕ್ಕೆ ಹಣ ಬೇಕಲ್ಲ ಅಂತ ಹೇಳಿದ್ರು ಎಂದು ತಿಳಿಸಿದರು.
ಹಗರಣದ ವಿಚಾರವಾಗಿ ನನ್ನ ಬಳಿ ರೆಕಾರ್ಡ್ ಇದೆ: ಕೇಂದ್ರ ಸಚಿವ ಕುಮಾರಸ್ವಾಮಿ ಹಗರಣದ ದಾಖಲೆ ನನ್ನ ಬಳಿ ಇದೆ. ಡಿನೋಟಿಫೈ ಹಗರಣದ ವಿಚಾರವಾಗಿ ನನ್ನ ಬಳಿ ರೆಕಾರ್ಡ್ ಇದೆ. ಅದನ್ನು ಸಿಎಂ ಸಿದ್ದರಾಮಯ್ಯ ಇಲ್ಲವೇ ಡಿ.ಕೆ.ಶಿವಕುಮಾರ್ಗೆ ನೀಡಿ ದೂರು ದಾಖಲು ಮಾಡುವಂತೆ ಹೇಳುತ್ತೇನೆ ಎಂದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications