ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಕ್ಷಣಗಣನೆ?

By Coovercolly Indresh
|
Google Oneindia Kannada News

ಚಾಮರಾಜನಗರ, ಮೇ 5: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಮೈಸೂರು ಹಾಗೂ ಚಾಮರಾಜನಗರದ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವ ಕುರಿತು ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಮಹತ್ವದ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜತೆ ಸುದೀರ್ಘ ಮಾತುಕತೆಯಲ್ಲಿ ತೊಡಗಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, ಇಬ್ಬರೂ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಸಾಕಷ್ಟು ಒತ್ತಡ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಆರೋಪಕ್ಕೆ ಗದ್ಗದಿತರಾಗಿ ಪ್ರತಿಕ್ರಿಯಿಸಿದ ರೋಹಿಣಿ ಸಿಂಧೂರಿಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಆರೋಪಕ್ಕೆ ಗದ್ಗದಿತರಾಗಿ ಪ್ರತಿಕ್ರಿಯಿಸಿದ ರೋಹಿಣಿ ಸಿಂಧೂರಿ

ಈ ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿದಲ್ಲಿ ಸರ್ಕಾರದ ಮೇಲೆ ಜನತೆಯ ಆಕ್ರೋಶ ಕಡಿಮೆ ಆಗಬಹುದು ಎಂದು ಚಿಂತಿಸಲಾಗುತ್ತಿದೆ. ಎರಡು ಜಿಲ್ಲೆಗಳಲ್ಲಿ ಅಧಿಕಾರಿಗಳ ವಿರುದ್ಧ ಜನತೆ ಅಸಮಾಧಾನಗೊಂಡಿದ್ದು, ವಿಪಕ್ಷ ಶಾಸಕ ಸಾ.ರಾ ಮಹೇಶ್‌, ಹರ್ಷವರ್ಧನ್, ವಿಧಾನ ಪರಿಷತ್‌ ಸದಸ್ಯರಾದ ಮರಿ ತಿಬ್ಬೇಗೌಡ ಬಹಿರಂಗವಾಗಿಯೇ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕಟುವಾಗಿ ಟೀಕಿಸಿದ್ದರು.

Oxygen Tragedy: Charamarajanagar And Mysuru DC May Transferred

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ರಾಜ್ಯ ಸರ್ಕಾರಿ ಮಟ್ಟದಲ್ಲಿ ಪ್ರಭಾವಿಯೇ ಆಗಿದ್ದು, ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್‌ ರವಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಇಬ್ಬರೂ ವರ್ಗಾವಣೆಯಾದಲ್ಲಿ ಜನತೆಯ ಆಕ್ರೋಶ ಕಡಿಮೆ ಆಗಲಿದ್ದು, ಪರಿಸ್ಥಿತಿಯೂ ತಿಳಿ ಆಗಲಿದೆ. ಅಲ್ಲದೇ ಈ ಇಬ್ಬರ ತಲೆದಂಡ ಆದರೆ ಸರ್ಕಾರದ ಮೇಲಿರುವ ಆರೋಪದ ಪ್ರಭಾವವೂ, ಒತ್ತಡವೂ ಕಡಿಮೆ ಆಗಲಿದೆ ಎನ್ನಲಾಗಿದೆ.

ಎಲ್ಲಕ್ಕಿಂತ ಹೆಚ್ಚಾಗಿ ಮಂಗಳವಾರ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಅರ್ ರವಿ ಅವರು ದುರಂತಕ್ಕೆ ಮೈಸೂರು ಜಿಲ್ಲಾಧಿಕಾರಿಗಳೇ ನೇರ ಕಾರಣ ಎಂದು ಆರೋಪ ಹೊರಿಸಿ ಬಹಿರಂಗವಾಗಿಯೇ ಟೀಕಿಸಿದ್ದರು. ಇದಕ್ಕೆ ಬುಧವಾರ ಉತ್ತರ ನೀಡಿದ ರೋಹಿಣಿ ಸಿಂಧೂರಿ, ತಮ್ಮ ಮೇಲಿರುವ ಆರೋಪವನ್ನು ನಿರಾಕರಿಸಿದ್ದರು. ಈ ಇಬ್ಬರೂ ಅಧಿಕಾರಿಗಳ ಆರೋಪ, ಪ್ರತ್ಯಾರೋಪದಿಂದ ಮುಂದೆ ಆಡಳಿತದಲ್ಲೂ ಸಮಸ್ಯೆ ಆಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

Recommended Video

ಆಮ್ಲಜನಕ ಇಲ್ಲದೆ ಯಾರು ಕಷ್ಟ ಪಡಬಾರದು! | Oneindia Kannada

ಈ ಎಲ್ಲಾ ಕಾರಣಗಳಿಂದ ಇಬ್ಬರನ್ನೂ ವರ್ಗಾವಣೆ ಮಾಡುವುದು ಬಹುತೇಕ ಖಚಿತವಾಗಿದ್ದು, ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಜನಾನುರಾಗಿ ಅಧಿಕಾರಿಗಳನ್ನೇ ನೇಮಿಸುವ ಕುರಿತು ಚರ್ಚೆ ನಡೆದಿದೆ. ಮುಂದಿನ ಕೆಲ ಗಂಟೆಗಳಲ್ಲೇ ವರ್ಗಾವಣೆ ಆದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

English summary
Sources said that CM Yediyurappa has held a major meeting to decide on the transfer of Mysuru and Chamarajanagar DCs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X