ಹನೂರು: ಶವ ಹೂಳಲು ಸ್ಮಶಾನವಿಲ್ಲದೆ ಜಮೀನು ಮಾಲೀಕರಿಗೆ ಅಂಗಲಾಚಿದ ಕುಟುಂಬ
ಚಾಮರಾಜನಗರ, ಅಕ್ಟೋಬರ್, 10: ಹನೂರು ತಾಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಸ್ಮಶಾನ ಇಲ್ಲದ ಕಾರಣ, ಜಮೀನು ಮಾಲೀಕರೊಬ್ಬರನ್ನು ಅಂಗಲಾಚಿ ಮೃತ ರಾಚಶೆಟ್ಟಿ ಅವರ ಅಂತ್ಯಕ್ರಿಯೆ ನಡೆಸಿದ್ದಾರೆ. ಈ ದೃಶ್ಯ ಎಂಥವರ ಮನ ಕಲಕಿಬಿಡುತ್ತದೆ.
ಹನೂರು ತಾಲೂಕಿನ ಹುತ್ತೂರು ಗ್ರಾಪಂ ವ್ಯಾಪ್ತಿಯ ವೆಂಕಟಶೆಟ್ಟಿ ದೊಡ್ಡಿ ಗ್ರಾಮದಲ್ಲಿ ಇಂದು ರಾಚಶೆಟ್ಟಿ ಎಂಬವರು ಮೃತಪಟ್ಟಿದ್ದರು. ಗ್ರಾಮದಲ್ಲಿ ಸ್ಮಶಾನವಿಲ್ಲದ ಪರಿಣಾಮ ಮೃತನ ಕುಟುಂಬಸ್ಥರು ಖಾಸಗಿ ಜಮೀನಿನ ಮಾಲಿಕರೊಬ್ಬರನ್ನು ಅಂಗಲಾಚಿ, ಮೆಕ್ಕೆಜೋಳ ಫಸಲನ್ನು ಕಟಾವು ಮಾಡಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಸುಮಾರು 400 ಕುಟುಂಬಗಳು ವಾಸವಿರುವ ವಿ.ಎಸ್ ದೊಡ್ಡಿ ಗ್ರಾಮದಲ್ಲಿ ಸರ್ಕಾರಿ ಜಮೀನುಗಳು ಇವೆ. ಆದರೆ, ಸ್ಮಶಾನಕ್ಕೆ ಜಮೀನುಗಳು ಮಂಜುರಾಗದೇ ಇಲ್ಲಿನವರು ಶವಗಳನ್ನು ಹೂಳಲು ಪರದಾಡುವಂತೆ ಆಗಿದೆ. 3-4 ಬಾರಿ ಸ್ಮಶಾನಕ್ಕೆ ಜಾಗ ಮಂಜೂರಾತಿ ಮಾಡಿಸಿ ಎಂದು ಡಿಸಿ, ಸಿಇಒ ಸೇರಿದಂತೆ ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ ಎಂದು ಇಲ್ಲಿನ ಜನರು ಅಳಲು ತೋಡಿಕೊಂಡಿದ್ದಾರೆ. ಈ ಹಿಂದೆ ಅರಣ್ಯದ ಪ್ರದೇಶದಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತಿತ್ತು. ಆದರೆ ಅರಣ್ಯ ಇಲಾಖೆಯು ಅಂತ್ಯಕ್ರಿಯೆಗೆ ಅವಕಾಶ ಕೊಡದಿರುವುದರಿಂದ ಸತ್ತ ವ್ಯಕ್ತಿಗೆ ಮುಕ್ತಿ ಕಾಣಿಸಲು ಹೆಣಗಾಡಬೇಕಿದೆ.

ಸ್ಮಶಾನ ಇಲ್ಲದೆ ಹೆಣ ಹೂಳಲು ಪರದಾಟ
ಜಮೀನು ಇದ್ದವರು ಮಾತ್ರ ತಮ್ಮ ಜಮೀನಿನಲ್ಲೇ ಅಂತ್ಯಕ್ರಿಯೆ ನೆರವೇರಿಸುತ್ತಾರೆ. ಆದರೆ, ಜಮೀನು ಇಲ್ಲದವರ ಪಾಡು ಹೇಳತೀರದಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ಮಶಾನಕ್ಕೆ ಜಾಗ ಮಂಜೂರು ಮಾಡಿ ಸಮಸ್ಯೆಗೆ ಮುಕ್ತಿ ಕಾಣಿಸಬೇಕಿದೆ ಎಂದು ಸ್ಥಳೀಯರಾದ ಮಂಜುನಾಥ್ ಆಗ್ರಹಿಸಿದ್ದಾರೆ. ಇದು ಚಾಮರಾಜನಗರ ಜಿಲ್ಲೆಯೊಂದರ ಕತೆಯಲ್ಲ. ರಾಜ್ಯದ ಅನೇಕ ಜಿಲ್ಲೆಗಳ ಗ್ರಾಮಗಳಲ್ಲಿ ಸ್ಮಶಾನಗಳ ವ್ಯವಸ್ಥೆ ಇಲ್ಲದೇ ಶವಗಳನ್ನು ಹೂಳಲು ಜನರು ಪರದಾಡುತ್ತಿದ್ದಾರೆ. ಕೊನೆಗೆ ಯಾವುದೇ ಪರ್ಯಾಯ ವ್ಯವಸ್ಥೆ ಇಲ್ಲದೇ ಬೇರೆಯವರ ಜಮೀನಿನಲ್ಲಿ ಶವವನ್ನು ಹೂಳಲು ಅಂಗಲಾಚಬೇಕಾದ ಪರಿಸ್ಥಿತಿಗಳು ಎದುರಾಗಿಬಿಡುತ್ತವೆ. ಇದಕ್ಕೆಲ್ಲ ಕಾರಣ ಸ್ಥಳೀಯ ಅಧಿಕಾರಿಗಳ ಬೇಜವಾಬ್ದಾರಿತನವೇ ಆಗಿರುತ್ತದೆ. ಸ್ಮಶಾನಕ್ಕೆ ಸರ್ಕಾರದಿಂದ ಹಣ ಮಂಜೂರಾದರೂ ಕೂಡ ಕೆಲವೆಡೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications