Heavy Rain: ಭಾರೀ ಮಳೆಯಿಂದ ಹನೂರು ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತ
Heavy Rain: ಫೆಂಗಲ್ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಕಳೆದ ಎರಡು ದಿನಗಳಿಂದ ಸತತವಾಗಿ ಬಾರಿ ಮಳೆಯಾಗುತ್ತಿರುವ ಹಿನ್ನೆಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹಾಗಾದರೆ ಏನೆಲ್ಲಾ ಅವಾತರಗಳು ಸೃಷ್ಟಿಯಾಗಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳೆದ ಎರಡು ದಿನಗಳಿಂದ ಬೀಳುತ್ತಿರುವ ಬಾರಿ ಮಳೆಯಿಂದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ತಂಬಡಗೇರಿ ಸಮೀಪದ ಪುಟ್ಟಸ್ವಾಮಿ ಹಾಗೂ ರಾಜೇಶ್ವರಿ ಎಂಬ ದಂಪತಿಗೆ ಸೇರಿದ ಮನೆಯ ಗೋಡೆ ಕುಸಿತು ಅಪಾರ ಪ್ರಮಾಣದ ಪಾತ್ರೆ ಸಾಮಾಗ್ರಿಗಳು ನೆಲಕಚ್ಚಿದೆ. ಪಾತ್ರೆ ಸಾಮಾಗ್ರಿಗಳ ಜೊತೆಗೆ ಗೋಡೆ ಕುಸಿದಿರುವುದರಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಇದಲ್ಲದೆ, ಸತತ ಮಳೆ ಆಗುತ್ತಿರುವ ಹಿನ್ನೆಲೆ ಸಂಪೂರ್ಣ ಒಂದು ಭಾಗ ಗೋಡೆ ಕುಸಿಯುವ ಭೀತಿಯಲ್ಲಿ ದಂಪತಿಗಳಿದ್ದಾರೆ.

ಸೂಕ್ತ ಪರಿಹಾರಕ್ಕೆ ಒತ್ತಾಯ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ತಂಬಡಿಗೇರಿ ನಿವಾಸಿಗಳಾದ ರಾಜೇಶ್ವರಿ ಹಾಗೂ ಪುಟ್ಟಸ್ವಾಮಿ ಬಡವರಾಗಿದ್ದು, ಇರುವ ಮನೆಯ ಗೋಡೆ ಕುಸಿದಿರುವುದರಿಂದ ಹೆದರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಕಳೆದ ಎರಡು ವರ್ಷಗಳಿಂದ ಸಮರ್ಪಕ ಮಳೆಯಾಗದ ಹಿನ್ನೆಲೆ ಬರಗಾಲದಿಂದ ತತ್ತರಿಸಿದ್ದ ರೈತರಿಗೆ ಈ ಬಾರಿ ಸಮರ್ಪಕ ಮಳೆಯಾದ ಹಿನ್ನೆಲೆ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದರು. ಆದರೆ, ಕಳೆದೆರಡು ದಿನಗಳಿಂದ ಬೀಳುತ್ತಿರುವ ಫೆಂಗಲ್ ಚಂಡಮಾರುತದ ಮಳೆಗೆ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಸಲನತ್ತ ಗ್ರಾಮದ ರೈತ ನಾಗರಾಜರವರಿಗೆ ಸೇರಿದ ರಾಗಿ ಹಾಗೂ ತೊಗರಿ ಬೆಳೆ ಸಂಪೂರ್ಣವಾಗಿ ನೆಲೆ ಕಚ್ಚಿದೆ.
ರೈತ ನಾಗರಾಜುರವರು ತಮಗೆ ಸೇರಿದ ಎರಡೂವರೆ ಎಕರೆ ಜಮೀನಿನಲ್ಲಿ ರಾಗಿ, ತೊಗರಿ ಬೆಳೆದಿದ್ದರು. ಸಮರ್ಪಕ ಮಳೆಯಾಗಿದ್ದ ಹಿನ್ನೆಲೆ ಉತ್ತಮ ಬೆಳೆ ಬೆಳೆದು ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಫೆಂಗಲ್ ಚಂಡಮಾರುತ ಬರಸಿಡಿಲು ಬಡಿದು ಕೈಗೆ ಬಂದ ತುತ್ತು ಬಾಯಿಗೆ ಬಾರದ ರೀತಿ ಆಗಿದೆ. ಸತತವಾಗಿ ಎರಡು ದಿನಗಳಿಂದ ಬೀಳುತ್ತಿರುವ ಭಾರಿ ಮಳೆಗೆ ರಾಗಿ ಬೆಳೆ ಸಂಪೂರ್ಣ ನೆಲೆ ಕಚ್ಚಿರುವುದರಿಂದ ಸಂಪೂರ್ಣ ನಷ್ಟವಾಗಿದೆ. ಸತತವಾಗಿ ಬೀಸುತ್ತಿರುವ ಬಿರುಗಾಳಿಗೆ ತೊಗರಿ ಬೆಳೆಗಳು ಸಹ ಬಾಗಿರುವುದರಿಂದ ಈ ಬೆಳೆಯು ನಷ್ಟವಾಗಿದೆ. ಈ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ಕೊಡಬೇಕೆಂದು ರೈತ ನಾಗರಾಜು ಮನವಿ ಮಾಡಿದ್ದಾರೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications