ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ ವಿಷ ಪ್ರಸಾದ ಸೇವನೆ: ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿದೆ

|
Google Oneindia Kannada News

ಚಾಮರಾಜನಗರ, ಡಿಸೆಂಬರ್ 21: ಚಾಮರಾಜನಗರದ ಸುಳವಾಡಿ ಹನೂರಿನ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ಮೃತಪಟ್ಟಿರುವವರ ಸಂಖ್ಯೆ 16ಕ್ಕೆ ಏರಿದೆ.

ಮಾರ್ಟಳ್ಳಿ ನಿವಾಸಿ ನಾಗೇಶ್(45) ಚಿಕಿತ್ಸೆ ಫಲಿಸದೆ ಶುಕ್ರವಾರ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಎಂಟು ದಿನಗಳ ಹಿಂದೆ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ನೂರಕ್ಕೂ ಹೆಚ್ಚು ಮಂದಿಯನ್ನು ಮೈಸೂರು ಹಾಗೂ ಚಾಮರಾಜನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ 16 ಮಂದಿ ಮೃತಪಟ್ಟಿದ್ದು, ಇನ್ನೂ 10ಕ್ಕೂ ಹೆಚ್ಚುಮಂದಿ ಸ್ಥಿತಿ ಚಿಂತಾಜನಕವಾಗಿದೆ.

ಪೊಲೀಸರು ಸುಳ್ವಾಡಿ ವಿಷಪ್ರಸಾದ ಪ್ರಕರಣ ಭೇದಿಸಿದ್ದು ಹೇಗೆ ? ಪೊಲೀಸರು ಸುಳ್ವಾಡಿ ವಿಷಪ್ರಸಾದ ಪ್ರಕರಣ ಭೇದಿಸಿದ್ದು ಹೇಗೆ ?

ಇಮ್ಮಡಿ ಮಹದೇವಸ್ವಾಮಿ ಹಾಗೂ ಅಂಬಿಕಾ ಅವರನ್ನು ವಿಷಬೆರೆಸಿದ ಆರೋಪದ ಮೇಲೆ ಬಂಧಿಸಲಾಗಿದೆ.ಅಂಬಿಕಾ, ಮಹದೇವಸ್ವಾಮಿ ಇಬ್ಬರದ್ದೂ ಒಂದೇ ಊರು. ಅಂಬಿಕಾ, ವರಸೆಯಲ್ಲಿ ಇಮ್ಮಡಿ ಮಹದೇವಸ್ವಾಮಿಗೆ ಅಕ್ಕನ ಮಗಳು. ಮೊದಲಿನಿಂದಲೂ ಮಹದೇವಸ್ವಾಮಿಗೆ ಅಂಬಿಕಾ ಮೇಲೆ ಒಲವು ಇತ್ತಂತೆ.

Pesticide found in temple prasad that 16 lives

ವಿಷಪ್ರಸಾದ ಸೇವಿಸಿ ಇಂದಿಗೆ 7 ದಿನ: ಸುಳ್ವಾಡಿ ಜನರ ಸ್ಥಿತಿ ಹೇಗಿದೆ? ವಿಷಪ್ರಸಾದ ಸೇವಿಸಿ ಇಂದಿಗೆ 7 ದಿನ: ಸುಳ್ವಾಡಿ ಜನರ ಸ್ಥಿತಿ ಹೇಗಿದೆ?

ಈ ಹಿನ್ನೆಲೆ ಅಂಬಿಕಾ ಪತಿ ಮಾದೇಶ್ ಗೆ ಈ ಕಳ್ಳ ಸ್ವಾಮಿಯೇ ಕರೆದು ದೇವಸ್ತಾನದ ಮ್ಯಾನೇಜರ್ ಕೆಲಸ ನೀಡಿದ್ದ. ಮನೆಯಲ್ಲಿ ಅಂಬಿಕಾ ಹೇಳಿದ ಹಾಗೆಯೇ ಮಾದೇಶ್ ನಡೆದುಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

English summary
Days after 16 people died of poisoning after eating prasad at a temple in Chamarajanagar. a local seer and three others were arrested on Wednesday on charges of hatching a conspiracy to kill devotees in a bid to defame the management and take control of the shrine in this district in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X