ಕೊಳ್ಳೇಗಾಲ: ಪಾರಿವಾಳ ಬೇಟೆಯಾಡಿದ ಮೊಸಳೆ-ವಿಡಿಯೋ ವೈರಲ್
ಚಾಮರಾಜನಗರ, ಮೇ, 22: ಕೊಳ್ಳೇಗಾಲ ತಾಲೂಕಿನ ಯಡಕೂರಿಯ ಗ್ರಾಮದ ಸಮೀಪವಿರುವ ಕಾವೇರಿ ನದಿ ತಟದಲ್ಲಿ ಪರಿವಾಳವನ್ನು ಮೊಸಳೆಯೊಂದು ಹಿಡಿದು ನೀರೊಳಗೆ ಎಳೆದೊಯ್ದಿರುವ ಘಟನೆ ನಡೆದಿದೆ.
ಗ್ರಾಮ ಸಂಪರ್ಕಿಸಲು ನಿರ್ಮಿಸಿರುವ ಸೇತುವೆ ಸಮೀಪದ ನದಿ ತಟದಲ್ಲಿ ಮೊಸಳೆ ಪರಿವಾಳವನ್ನು ಹಿಡಿದು ಎಳೆದೊಯ್ದ ಘಟನೆ ನಡೆದಿದೆ. ಈ ದೃಶ್ಯವನ್ನು ಗ್ರಾಮದ ಯುವಕ ಅರುಣ್ ಎಂಬಾತ ಸೆರೆ ಹಿಡಿದಿದ್ದು, ಭಾರೀ ವೈರಲ್ ಆಗುತ್ತಿದೆ.

ಅರುಣ್ ನದಿ ತಟದಲ್ಲಿರುವ ಶ್ರೀ ಸಿದ್ದಪ್ಪಾಜಿ ದೇವಾಲಯ ಸಮೀಪದ ಜಗಳಿಕಟ್ಟೆಯಲ್ಲಿ ಕುಳಿತ್ತಿದ್ದರು. ಈ ವೇಳೆ ಮೊಸಳೆಯೊಂದು ನದಿಯ ದಡದಲ್ಲಿದ್ದ ಕೊಕ್ಕರೆಯನ್ನು ಹಿಡಿಯಲು ದಡ್ಡಕ್ಕೆ ಶರವೇಗದಲ್ಲಿ ಬಂದಿದ್ದನ್ನು ಗಮನಿಸಿದ್ದಾರೆ. ಕೊಕ್ಕರೆ ಮೊಸಳೆ ದಾಳಿಗೆ ಸಿಗದೆ ಹಾರಿ ಹೋಗಿದೆ. ಇದನ್ನು ಕಂಡ ಅರುಣ್ ಮತ್ತೆ ಮೊಸಳೆ ಆಹಾರಕ್ಕೆ ಹೊರ ಬರುವುದೆಂದು ಕಾದು ಕುಳಿತ್ತಿದ್ದಾಗ ಎರಡ್ಮೂರು ಪಾರಿವಾಳಗಳು ನೀರನ್ನು ಕುಡಿಯುತ್ತಾ ನದಿ ತಟದಲ್ಲಿ ಆಟ ಆಡುತ್ತಿದ್ದವು.
ಆಗ ಇದನ್ನು ಕಂಡ ಮೊಸಳೆ ನೀರಿನಿಂದ ಹೊರ ಬರುವುದನ್ನು ಅರುಣ್ ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ನೋಡು ನೋಡುತ್ತಿದಂತೆ 1 ಪಾರಿವಾಳವನ್ನು ಮೊಸಳೆ ಎಳೆದೊಯ್ದಿದೆ.
ಗ್ರಾಮಸ್ಥರಲ್ಲಿ ಆತಂಕ: ಇದು ಗ್ರಾಮದ ಜನರು ತಮ್ಮ ದನ, ಕರುಗಳನ್ನು ತೊಳೆಯುವ ಸ್ಥಳವಾಗಿದೆ. ಆರೆ ಇದೀಗ ಮೊಸಳೆ ಪ್ರತ್ಯಕ್ಷವಾಗಿ ಪಾರಿವಾಳವನ್ನು ಎಳೆದೊಯ್ದಿರುವುದನ್ನು ಕಣ್ಣಾರೆ ಕಂಡ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ನಮ್ಮ ಗ್ರಾಮದ ಸುತ್ತಲಲ್ಲಿರುವ ನದಿಯಲ್ಲಿ ಐದಾರು ಮೊಸಳೆಗಳನ್ನು ನಾವು ಕಂಡಿದ್ದೇವೆ. ಇದುವರೆಗೂ ಅವು ಯಾರಿಗೂ ತೊಂದರೆ ಮಾಡಿಲ್ಲ. ಆದರೆ, ಇದೇ ಮೊದಲ ಬಾರಿ ದಡದಲ್ಲಿದ್ದ ಪರಿವಾಳವನ್ನು ಕಣ್ಣೆದುರೆ ಎಳೆದೊಯ್ದಿರುವುದು ಆತಂಕ ಮೂಡಿಸಿದೆ. ಮಕ್ಕಳು ಈ ಸ್ಥಳದಲ್ಲಿಯೇ ಈಜುವುದು, ಸ್ನಾನ ಮಾಡುವುದನ್ನು ಮಾಡುತ್ತಾರೆ. ರೈತರು ದನ, ಕರುಗಳನ್ನು ತೊಳೆಯುತ್ತೇವೆ ಎಂದು ಅರುಣ್ ಆತಂಕ ಹೊರಹಾಕಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications