Get Updates
Get notified of breaking news, exclusive insights, and must-see stories!

ಮನ್ ಕಿ ಬಾತ್‌ನಲ್ಲಿ ಚಾಮರಾಜನಗರ "ಆ" ಮಹಿಳೆಯನ್ನು ಹಾಡಿ ಹೊಗಳಿದ ಪ್ರಧಾನಿ, ಏಕೆ ಗೊತ್ತಾ?- ಮಾಹಿತಿ

ಚಾಮರಾಜನಗರ, ನವೆಂಬರ್‌, 26: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡುವ ಮನ್ ಕಿ ಬಾತ್‌ನಲ್ಲಿ ತ್ಯಾಜ್ಯದಿಂದ ಕರಕುಶಲ ವಸ್ತುಗಳನ್ನು ತಯಾರಿಸುವ ಚಾಮರಾಜನಗರ ಮಹಿಳೆ ಕಾರ್ಯವನ್ನು ಹಾಡಿ ಹೊಗಳಿದ್ದಾರೆ.

ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ವರ್ಷಾ ಎಂಬುವವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ಇಂದು ಪ್ರಸ್ತಾಪಿಸಿ ವೋಕಲ್ ಫಾರ್ ಲೋಕಲ್ ಮಹತ್ವವನ್ನು ಸಾರಿದ್ದಾರೆ. ಮನ್ ಕಿ ಬಾತ್‌ನಿಂದ ಪ್ರೇರೇಪಣೆಗೊಂಡಿರುವ ವರ್ಷಾ ಅವರು, ಕರಕುಶಲ ಉದ್ಯಮ ಆರಂಭಿಸಿ, ಬಾಳೆಗಿಡದ ನಾರಿನಿಂದ ಕರಕುಶಲ ವಸ್ತುಗಳ ತಯಾರಿಸುತ್ತಿದ್ದಾರೆ. ಬಾಳೆ ದಿಂಡಿನಿಂದ ಉಪ್ಪಿನಕಾಯಿ, ಚಟ್ನಿಪುಡಿ ಸೇರಿದಂತೆ ವಿವಿಧ ತಿನಿಸು ತಯಾರಿಸುವ ಜೊತೆಗೆ ಐವರು ಮಹಿಳೆಯರು, ಇಬ್ಬರು ಪುರುಷರಿಗೆ ನೌಕರಿ ಕೊಟ್ಟಿದ್ದಾರೆ.

PM Modi appreciated to Chamarajanagar woman in Mann Ki Baat

ವೋಕಲ್ ಫಾರ್ ಲೋಕಲ್‌ನಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಪ್ರಧಾನಿ ತಮ್ಮ ರೇಡಿಯೋ ಭಾಷಣದಲ್ಲಿ ಹೇಳಿದ್ದಾರೆ. ಈ ಸಂಬಂಧ ವರ್ಷಾ ಪ್ರತಿಕ್ರಿಯೆ ನೀಡಿದ್ದು, ಚಾಮರಾಜನಗರದ ಉಮ್ಮತ್ತೂರಿನಲ್ಲಿ ನಾನು ಮಾಡುವ ಕೆಲಸವನ್ನು ಮೋದಿ ಅವರು ಗುರುತಿಸಿ ಪ್ರಸ್ತಾಪಿಸಿದ್ದು ಹೆಮ್ಮೆ ಎನಿಸುತ್ತದೆ ಎಂದರು.

ನಾನು ಎಂಟೆಕ್ ಪದವೀಧರಳಾಗಿದ್ದು ಮನ್ ಕಿ ಬಾತ್‌ನಿಂದ ಪ್ರೇರಣೆ ಪಡೆದು ಬಾಳೆ ನಾರು ಹಾಗೂ ದಿಂಡಿನಿಂದ ವಿವಿಧ ವಸ್ತುಗಳನ್ನು ತಯಾರಿಸಲು ಆರಂಭಿಸಿದೆ. ಮೇಳಗಳು, ಆನ್‌ಲೈನ್ ಮಳಿಗೆ, ಸಾವಯವ ಮಳಿಗೆಗಳಲ್ಲಿ ನಮ್ಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಪಿಎಂ ಸ್ಮರಣಿಕೆಗಳ ಹರಾಜಿನಲ್ಲಿ ಕಲಘಟಗಿ ತೊಟ್ಟಿಲು

ಹಾಗೆಯೇ ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾದ ಸ್ಮರಣಿಕೆಗಳ 5ನೇ ವಾರ್ಷಿಕ ಹರಾಜಿನಲ್ಲಿ ಹುಬ್ಬಳ್ಳಿ ಉಡುಗೊರೆಯಾಗಿ ನೀಡಿದ್ದ ಕಲಘಟಗಿ ತೊಟ್ಟಿಲು ಸ್ಥಾನ ಪಡೆದಿತ್ತು.

ಈ ಬಾರಿಯ ಹರಾಜು ಪ್ರಕ್ರಿಯೆ ಅಕ್ಟೋಬರ್‌ 2ರಂದು ಪ್ರಾರಂಭವಾಗಿದ್ದು, ನವೆಂಬರ್‌ 15 ರವರೆಗೆ ಇತ್ತು. ಜಿಲ್ಲೆಯಲ್ಲಿ ಕಳೆದ ಮಾರ್ಚ್‌ 12ರಂದು ನಡೆದ ಐಐಟಿ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದರು. ಅವರಿಗೆ ಕಲಘಟಗಿಯ ತೊಟ್ಟಿಲು ಕಲಾವಿದ ಶ್ರೀಧರ ಸಾವಕಾರ ಅವರು ತಯಾರಿಸಿದ ಕಲಘಟಗಿಯ ಪಾರಂಪರಿಕ ಹೆಮ್ಮೆಯ ಪ್ರತೀಕವಾದ ಕೆಮಿಕಲ್‌ ರಹಿತ ಬಣ್ಣದ ತೊಟ್ಟಿಲನ್ನು ಉಡುಗೊರೆಯಾಗಿ ನೀಡುವ ಮೂಲಕ ಜಿಲ್ಲೆಯ ಸಂಸ್ಕೃತಿ ಬಿಂಬಿಸಲಾಗಿತ್ತು.

ತೊಟ್ಟಿಲಿನ ವಿಶೇಷತೆ

ಕೃಷ್ಣಾವತಾರ, ದಶಾವತಾರ, ರಾಮಾಯಣ-ಮಹಾಭಾರತದ ಕಥೆಗಳ ಚಿತ್ರಗಳನ್ನು ತೊಟ್ಟಿಲಿನ ಮೇಲೆ ಬಿಡಿಸಲಾಗಿದೆ. ಮಗು ದೇವರ ಸನ್ನಿಧಾನದಲ್ಲಿ ಆಡಲಿ ಎಂಬ ಉದ್ದೇಶದಿಂದ ಈ ಚಿತ್ರಗಳನ್ನು ಬರೆಯಲಾಗಿದೆ. ಹಿಂದೂ- ಮುಸ್ಲಿಂ-ಕ್ರಿಶ್ಚಿಯನ್‌ ಸೇರಿದಂತೆ ಎಲ್ಲ ಧರ್ಮದವರು ಕಲಘಟಗಿ ತೊಟ್ಟಿಲು ತೆಗೆದುಕೊಂಡು ಹೋಗುತ್ತಾರೆ.

ಅರಗು ಮತ್ತು ನೈಸರ್ಗಿಕ ಬಣ್ಣ ಮಿಶ್ರಣ ಮಾಡಿ ಚಿತ್ರ ಬಿಡಿಸುತ್ತಾರೆ. ಕಲಘಟಗಿಯ ಚಿತ್ರಗಾರ ಗಲ್ಲಿಯಲ್ಲಿ ನೆಲೆಸಿರುವ ಸಾವುಕಾರ ಕುಟುಂಬ ನಾಲ್ಕು ತಲೆಮಾರುಗಳಿಂದಲೂ ಈ ಕೆಲಸದಲ್ಲಿ ತೊಡಗಿದೆ. ಇವರು ತಯಾರಿಸುವ ತೊಟ್ಟಿಲು ಬೆಂಗಳೂರು, ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ, ಅಮೆರಿಕ, ದುಬೈ, ಫ್ರಾನ್ಸ್‌ ದೇಶಗಳಲ್ಲೂ ತನ್ನ ವೈಶಿಷ್ಟ್ಯ ಸಾರಿದೆ.

https://pmmementos.gov.inದಲ್ಲಿ ಪ್ರೊಡಕ್ಟ್ ಕೋಡ್‌ 23A0617 ಅಂತಾ ಹುಡುಕಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಕೊನೆಯ ದಿನಾಂಕ ನವೆಂಬರ್‌ 15 ಆಗಿತ್ತು. ಈ ಬಾರಿಯ 912 ಸ್ಮರಣಿಕೆಗಳ(ಉಡುಗೊರೆ) "ಇ-ಹರಾಜಿ'ನಿಂದ ಬರುವ ಆದಾಯವು ಪವಿತ್ರ ಗಂಗಾ ನದಿ ಪುನರುಜ್ಜೀವನಗೊಳಿಸುವ "ನಮಾಮಿ ಗಂಗೆ' ಯೋಜನೆಗೆ ಹೋಗಲಿದೆ ಎನ್ನಲಾಗಿತ್ತು.

ನಮ್ಮ ತಂದೆ ಲಕ್ಷ್ಮಣ ಸಾವಕಾರ ಹಾಗೂ ದೊಡ್ಡಪ್ಪ ಗಂಗಾಧರ ಸಾವಕಾರ ಅವರ ಕಾಲದಿಂದ ಇಲ್ಲಿಯವರೆಗೂ ವಿವಿಧ ರಾಜಕಾರಣಿಗಳ ಮನೆಗಳಿಗೆ, ಅಧಿಕಾರಿಗಳ ಕುಟುಂಬಗಳಿಗೆ, ಡಾ.ರಾಜಕುಮಾರ್‌ ಅವರಂತಹ ಸಿನಿಮಾ ನಟರಿಗೆ ನಮ್ಮ ಕಲಘಟಗಿ ತೊಟ್ಟಿಲು ತಯಾರಿ ಮಾಡಿಕೊಡುತ್ತಾ ಬಂದಿದ್ದೇವೆ. ಆದರೆ ಈ ಬಾರಿ ಪ್ರಧಾನಿ ಮೋದಿಯವರಿಗೆ ನಮ್ಮ ಕಲಘಟಗಿಯ ತೊಟ್ಟಿ ಲು ನೀಡಿದ್ದೇ ಒಂದು ಸೌಭಾಗ್ಯವಾಗಿದೆ ಎಂದು ಬಣ್ಣಿಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+