ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ
ಚಾಮರಾಜನಗರ, ಮೇ 7: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ (ಸೋಮವಾರ, ಮೇ 8) ಬಹಿರಂಗ ಪ್ರಚಾರ ತೆರೆ ಬೀಳಲಿದ್ದು, ಅದಕ್ಕೂ ಮುನ್ನ ನಂಜನಗೂಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಕೊನೆಯ ಪ್ರಚಾರ ಸಮಾವೇಶ ನಡೆಸಿದರು. ಈ ಬಾರಿ ಕರ್ನಾಟಕದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರ್ಕಾರವನ್ನು ಚುನಾಯಿಸಲು ಜನತೆಗೆ ವಿಶೇಷ ಮನವಿ ಮಾಡಿದರು.
ಚುನಾವಣಾ ಪ್ರಚಾರದ ಸಮಾವೇಶ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಗೆ ತೆರಳಬೇಕಿತ್ತು. ಆದರೆ ಭಾಷಣದ ವೇಳೆ ನರೇಂದ್ರ ಮೋದಿ ಅವರು, ನಂಜನಗೂಡು ಕ್ಷೇತ್ರಕ್ಕೆ ಆಗಮಿಸಿರುವ ಹಿನ್ನಲೆ ದಕ್ಷಿಣ ಕಾಶಿ ಶ್ರೀಕಂಠೇಶ್ವರನ ದರ್ಶನ ಪಡೆಯುವುದಾಗಿ ಹೇಳಿದ್ದರು.

ಅದರಂತೆ ತಮ್ಮ ವೇಳಾಪಟ್ಟಿಯಲ್ಲಿ ದೇವಸ್ಥಾನ ಭೇಟಿ ಕಾರ್ಯಕ್ರಮವಿಲ್ಲದಿದ್ದರೂ, ಪ್ರಧಾನಿ ನರೇಂದ್ರ ಮೋದಿ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು ಮತ್ತು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ ಪ್ರವೇಶಿಸಿದ ಪ್ರಧಾನಿ ನರೇಂದ್ರ ಮೋದಿ, ಮಹಾಗಣಪತಿಗೆ ಮೊದಲ ಪೂಜೆ ನೆರವೇರಿಸಿದರು. ಬಳಿಕ ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಈ ವೇಳೆ ಬಿಲ್ವಪತ್ರೆ ಹಿಡಿದು ಪ್ರಧಾನಿ ಮೋದಿ ಲೋಕಕಲ್ಯಾಣಕ್ಕಾಗಿ ವಿಶೇಷ ಸಂಕಲ್ಪ ಮಾಡಿದರು.
ದೇವಸ್ಥಾನ ಅರ್ಚಕರು ಪ್ರಧಾನಿ ನರೇಂದ್ರ ಮೋದಿ ಹಣೆಗೆ ವಿಭೂತಿ ಇಟ್ಟು, ಶಾಲು ಹೊದಿಸಿ ಹೂವಿನ ಹಾರ ಹಾಕಿದರು. ಬಳಿಕ ದೇಗುಲದ ಪ್ರಧಾನ ಅರ್ಚಕ ನೀಲಕಂಠ ದೀಕ್ಷಿತ್ ಪೂಜೆ ನೆರವೇರಿಸಿದರು. ಲೋಕಕಲ್ಯಾಣಕ್ಕಾಗಿ ಪೂಜೆ ನಡೆಸಿದ ನರೇಂದ್ರ ಮೋದಿಗೆ ಪ್ರಸಾದ ವಿತರಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡು ಚುನಾವಣಾ ಪ್ರಚಾರ ಭಾಷಣದ ಮಧ್ಯೆ ಶ್ರೀಕಂಠೇಶ್ವರ ದೇಗುಲ ದರ್ಶನ ಮಾಡುವುದಾಗಿ ಹೇಳಿದ ಬೆನ್ನಲ್ಲೇ ದೇವಸ್ಥಾನದ ಆವರಣದಲ್ಲಿ ಭದ್ರತಾ ಪಡೆ ಮತ್ತು ಪೊಲೀಸರಿಂದ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಇದಕ್ಕೂ ಮೊದಲು ನಂಜನಗೂಡಿನ ಎಲಚಗೆರೆ ಗ್ರಾಮದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತ್ ಮಾತಾಕೀ, ಭಜರಂಗ ಬಲಿಕೀ ಎನ್ನುತ್ತಲೇ ಮಾತು ಶುರು ಮಾಡಿದರು. ದಕ್ಷಿಣ ಕಾಶಿ ನಂಜನಗೂಡು ಜನತೆಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿದರು.
ತಾಯಿ ಚಾಮುಂಡೇಶ್ವರಿ, ನಂಜುಂಡೇಶ್ವರ ಸ್ವಾಮಿ, ಮಲೆ ಮಹದೇಶ್ವರ ಸ್ವಾಮಿ, ಸುತ್ತೂರು ಮಠದ ಸ್ವಾಮೀಜಿ ಮತ್ತು ಆದಿಚುಂಚನಗಿರಿ ಸ್ವಾಮೀಜಿಗೆ ನನ್ನ ನಮನಗಳು ಎಂದು ಹೇಳಿದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಭಾಗವಾಗಿ 224 ಕ್ಷೇತ್ರಗಳಿಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಯಾವ ಪಕ್ಷ ನೂತನ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications