ಶಾಸಕರ ತೇಜೋವಧೆ ಮಾಡುತ್ತಿದ್ದ 7 ಜನರ ಬಂಧನ
ಬೆಂಗಳೂರು, ಆ. 22: ಸಾಮಾಜಿಕ ಜಾಲತಾಣದಲ್ಲಿ ಬೇಕಾಬಿಟ್ಟಿಯಾಗಿ ತೇಜೋವಧೆ ಪೋಸ್ಟ್ಗಳನ್ನು ಹಾಕುತ್ತಿದ್ದವರಿಗೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ಪೊಲೀಸರು ಪಾಠ ಕಲಿಸಿದ್ದಾರೆ. ಬಿಎಸ್ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ಅವರ ತೇಜೋವಧೆ ಮಾಡುತ್ತಿದ್ದವರನ್ನು ಕೊಳ್ಳೆಗಾಲ ಪೊಲೀಸರು ಬಂಧಿಸಿದ್ದಾರೆ. ಅತ್ಯಂತ ವ್ಯವಸ್ಥಿತವಾಗಿ ತಂಡ ಕಟ್ಟಿಕೊಂಡು ಕಳೆದ ಒಂದು ವರ್ಷದಿಂದ ಶಾಸಕ ಎನ್. ಮಹೇಶ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿತ್ತು. ಈ ಬಗ್ಗೆ ದೂರು ಕೊಟ್ಟರೂ ಯಾವುದೇ ಪ್ರಯೋಜವಾಗಿರಲಿಲ್ಲ. ಹೀಗಾಗಿ ನ್ಯಾಯಾಲಯದ ಮೂಲಕ ಶಾಸಕ ಮಹೇಶ್ ಅವರ ಬೆಂಬಲಿಗ ದೂರು ದಾಖಲಿಸಿದ್ದರು.
Recommended Video
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಜೆ.ಎಂ.ಎಫ್.ಸಿ ನ್ಯಾಯಾಲಯದ ಸೂಚನೆಯಂತೆ ತೇಜೋವಧೆ ಹಾಗೂ ಅವಹೇಳನಕಾರಿ ಪೋಸ್ಟ್ಗಳ ಕುರಿತು ಶಾಸಕ ಎನ್. ಮಹೇಶ್ ಬೆಂಬಲಿಗ ಸಿದ್ದರಾಜು ಎಂಬುವರು ದೂರು ದಾಖಲಿಸಿದ್ದರು. ನ್ಯಾಯಾಲಯದ ಸೂಚನೆಯಂತೆ ತನಿಖೆ ನಡೆಸಿದ್ದ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಎನ್. ಮಹೇಶ್ ಮೇಲೆ ತೇಜೋವಧೆ, ಅವಹೇಳನಕಾರಿ ಪೋಸ್ಟ್ ಮಾಡುತ್ತಿದ್ದ ಏಳು ಜನರ ಮೇಲೆ ಎಫ್.ಐ.ಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಕಳೆದ ಒಂದು ವರ್ಷದಿಂದ ವಾಟ್ಸ್ಆ್ಯಪ್, ಫೇಸ್ಬುಕ್ಗಳಲ್ಲಿ ಕೆಟ್ಟ ಪದಗಳಿಂದ ನಿಂದನೆ ಮಾಡುತ್ತಿದ್ದರು. ಹೀಗೆ ಪೋಸ್ಟ್ ಮಾಡುತ್ತಿದ್ದ ಶ್ರೀಕಾಂತ್ ಅಪ್ಪಗೆರೆ, ಮಹಿಮಹೀಷ, ಮೋಹನ್ ಮೂಕನಾಯಕ, ಸದಾಶಿವ ರಾವಣ್, ಮುರುಳೀಧರ ಮೌರ್ಯ ಹಾಗೂ ರವಿಕುಮಾರ್ ಎಂಬುವರ ಮೇಲೆ ದೂರು ದಾಖಲಾಗಿತ್ತು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ನ್ಯಾಯಾಲಯದ ಸೂಚನೆಯಂತೆ ಎನ್. ಮಹೇಶ್ ಅಭಿಮಾನಿ ಬಳಗದ ಸಿದ್ದರಾಜು ಪ್ರಕರಣ ದಾಖಲಿಸಿದ್ದರು.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications