ಮನೆಯ ಹಿತ್ತಲಲ್ಲೇ ಗಾಂಜಾ ಬೆಳೆದು ಸಿಕ್ಕಿಬಿದ್ದ ಭೂಪ!
ಚಾಮರಾಜನಗರ, ಡಿಸೆಂಬರ್ 31: ವ್ಯಕ್ತಿಯೊಬ್ಬ ತನ್ನ ಮನೆಯ ಹಿತ್ತಲಲ್ಲೇ ಗಾಂಜಾ ಬೆಳೆಸಿ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಪಾಲಾದ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದ ಹೊಸ ಬಡಾವಣೆಯಲ್ಲಿ ನಡೆದಿದೆ.
ಗ್ರಾಮದ ನಿವಾಸಿ ದೊಡ್ಡಸಿದ್ದ ಅಲಿಯಾಸ್ ಕರಡಿ ಎಂಬಾತನೇ ಗಾಂಜಾ ಬೆಳೆದು ಪೊಲೀಸರ ಅತಿಥಿಯಾದವನು.[ಹೈದರಾಬಾದಿನಲ್ಲಿ 81.44 ಲಕ್ಷ ಮೌಲ್ಯದ 814 ಕೆಜಿ ಗಾಂಜಾ ವಶ]

ಗಾಂಜಾಕ್ಕೆ ಹೆಚ್ಚಿನ ಬೆಲೆ ಸಿಗುತ್ತದೆ ಎಂಬ ಕಾರಣಕ್ಕೆ ದೊಡ್ಡಸಿದ್ದ ಇದನ್ನು ತನ್ನ ಮನೆಯ ಹಿತ್ತಲಲ್ಲೇ ಬೆಳೆದಿದ್ದನು. ಗಿಡ ಹುಲುಸಾಗಿ ಬೆಳೆದಿತ್ತು. ಗಿಡಗಳು ಚಿಕ್ಕದಾಗಿದ್ದಾಗ ನೋಡಲು ಚೆಂಡು ಹೂವಿನ ಗಿಡದಂತೆಯೇ ಇದ್ದ ಕಾರಣ ಯಾರಿಗೂ ಅನುಮಾನ ಬಂದಿರಲಿಲ್ಲ. ಆದರೆ ಬೆಳೆದು ದೊಡ್ಡದಾಗುತ್ತಿದ್ದಂತೆಯೇ ವಿಭಿನ್ನವಾಗಿದ್ದರಿಂದ ಇದು ಯಾವ ಹೂವಿನ ಗಿಡ ಎಂದು ಜನ ಕೇಳುತ್ತಿದ್ದರು. ಆಗ ಆತ ಒಂದೊಂದು ರೀತಿಯ ಹೇಳಿಕೆ ನೀಡಿಕೊಂಡು ಜಾರಿಕೊಳ್ಳುತ್ತಿದ್ದನು.
ಹೆಚ್ಚಿನವರಿಗೆ ಗಾಂಜಾ ಗಿಡದ ಪರಿಚಯ ಇಲ್ಲದ ಕಾರಣ ಆ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಈ ನಡುವೆ ಸ್ಥಳೀಯರಿಗೆ ಗಾಂಜಾ ಗಿಡದ ಬಗ್ಗೆ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮನೆಯ ಹಿತ್ತಲಿನಲ್ಲಿಯೇ ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆದಿರುವ ಬಗ್ಗೆ ಖಚಿತಪಡಿಸಿಕೊಂಡ ಬಳಿಕ ಎಸ್ಪಿ ಕುಲದೀಪ್ ಕುಮಾರ್ ಆರ್. ಜೈನ್ ಹಾಗೂ ಕೊಳ್ಳೇಗಾಲ ಪೊಲೀಸ್ ಉಪ ಅಧೀಕ್ಷಕಿ ಸ್ನೇಹಾ ಅವ ಸಿಪಿಐ ಅಮರನಾರಾಯಣ್ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣಾ ಪಿಎಸ್ ಐ ವನರಾಜು ನೇತೃತ್ವದಲ್ಲಿ ತಂಡ ದಾಳಿ ನಡೆಸಿ ಹಿತ್ತಲಿನಲ್ಲಿ ಬೆಳೆದಿದ್ದ ಸುಮಾರು ಐದೂವರೆ ಕೆಜಿಯ ರು 15 ಸಾವಿರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು ದೊಡ್ಡಸಿದ್ದನನ್ನು ಬಂಧಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications