ವರ್ಗಾವಣೆ ಆದೇಶದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ಟೇಬಲ್
ಚಾಮರಾಜನಗರ, ಜನವರಿ 21: ವರ್ಗಾವಣೆ ಆದೇಶದಿಂದ ಮನನೊಂದ ಪೊಲೀಸ್ ಕಾನ್ಸ್ಟೇಬಲ್ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಎಚ್.ಆರ್.ಮಹೇಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಹನೂರು ಠಾಣೆಗೆ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ವರ್ಗಾವಣೆ ಮಾಡಿದ್ದರು. ಜೊತೆಗೆ, ಇತರೆ ಠಾಣೆಗಳ 7 ಮಂದಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.
ಈ ವರ್ಗಾವಣೆಯಿಂದ ಮನನೊಂದು ಎಚ್.ಆರ್.ಮಹೇಶ್ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ. ಘಟನೆಯಲ್ಲಿ ಎಚ್.ಆರ್.ಮಹೇಶ್ ಅವರ ಪಕ್ಕೆಲುಬು, ಕೈ-ಕಾಲಿಗೆ ಸುಟ್ಟ ಗಾಯಗಳಾಗಿದ್ದು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು, ಈ ಸಂಬಂಧ, ಎಸ್ಪಿ ಶಿವಕುಮಾರ್ ಪ್ರತಿಕ್ರಿಯಿಸಿದ್ದು, "ವಿಚಾರ ಗಮನಕ್ಕೆ ಬಂದಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಯತ್ನಿಸಿದರು ಎಂದು ತಿಳಿದುಬಂದಿಲ್ಲ, ಕೆಲವರಿಗೆ ಎಚ್ಚರಿಕೆ ಕೊಡುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿತ್ತು, ಪರಿಶೀಲನೆ ನಡೆಸಿ ಬಳಿಕ ಹೆಚ್ಚಿನ ವಿವರ ಹಂಚಿಕೊಳ್ಳುತ್ತೇನೆ" ಎಂದು ತಿಳಿಸಿದ್ದಾರೆ.
ಸಾಯಿಮಂದಿರದ ಬಳಿ ಸರಗಳ್ಳತನ
ಸಂಚು ಹಾಕಿ ಕೂತಿದ್ದ ಖದೀಮನೊಬ್ಬ ಮಹಿಳೆಯ ಸರ ಕಸಿದು ಪದಾರಿಯಾಗಿರುವ ಘಟನೆ ಕೊಳ್ಳೇಗಾಲದ ಸಾಯಿಮಂದಿರ ರಸ್ತೆಯಲ್ಲಿ ನಡೆದಿದೆ. ನಗರದ ಸಾಯಿಮಂದಿರ ರಸ್ತೆಯ ನಿವಾಸಿ ನಾಗರತ್ನ ಸರ ಕಳೆದುಕೊಂಡವರು.
ನಾಗರತ್ನದಿನಸಿ ಅಂಗಡಿಗೆ ತೆರಳಿ ಪದಾರ್ಥಗಳನ್ನು ಖರೀದಿ ಮಾಡುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಕಿಡಿಗೇಡಿಗಳು 57 ಗ್ರಾಂ ತೂಕದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕೊಳ್ಳೇಗಾಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆದಿದೆ.

ಅನುಮಾನಸ್ಪದವಾಗಿ ನಿಂತಿದ್ದ ಆಟೋ ಪೊಲೀಸರ ವಶ
ಚಾಮರಾಜನಗರ ತಾಲೂಕಿನ ಚಿಕ್ಕಹೊಳೆ ಬಳಿ ಕಳೆದ ಮೂರು ದಿನಗಳಿಂದ ಅನುಮಾನಸ್ಪದವಾಗಿ ನಿಂತಿದ್ದ ಆಟೋವೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕಹೊಳೆ ಬಳಿ ಗುರುವಾರದಿಂದ ಪಾಸೆಂಜರ್ ಆಟೋವೊಂದು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ಮೂರು ದಿನ ಕಳೆದರೂ ಆಟೋ ಅಲ್ಲೇ ಇದೆ. ಹೊಯ್ಸಳ ಪೊಲೀಸರ ಗಮನಕ್ಕೆ ಈ ವಿಚಾರ ಶನಿವಾರ ತಿಳಿದು ಬಂದಿದ್ದು, ಆಟೋವನ್ನು ಚಾಮರಾಜನಗರ ಪೂರ್ವ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಆಟೋ ಮೈಸೂರು ನೋಂದಣಿಯಾಗಿದ್ದು ಆಟೋ ಗಾಜು ಹಾಗೂ ಸೀಟ್ ಗಳು ಹರಿದು ಹೋಗಿದ್ದು ಕಳೆದ 3 ದಿನಗಳಿಂದಲೂ ನಿಂತಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications