ವೀರಪ್ಪನ್ ಗುಂಡೇಟು ತಿಂದಿದ್ದ ಸಬ್ ಇನ್ಸ್ಪೆಕ್ಟರ್ ವಿಧಿವಶ
ಚಾಮರಾಜನರ, ಮೇ 25; ಕಾಡುಗಳ್ಳ ವೀರಪ್ಪನ್ ಹಾರಿಸಿದ್ದ ಗುಂಡುಗಳನ್ನು ತಲೆಯಲ್ಲಿ ಇಟ್ಟುಕೊಂಡೇ ಕರ್ತವ್ಯ ನಿರ್ವಹಿಸಿದ್ದ ಸಬ್ ಇನ್ಸ್ಪೆಕ್ಟರ್ ಇಂದು ಮೃತಪಟ್ಟಿದ್ದಾರೆ. 1992 ಆಗಸ್ಟ್ 14ರಂದು ಗುಂಡೇಟು ತಿಂದಿದ್ದರು.
ಚಾಮರಾಜನಗರದ ಪಟ್ಟಣ ಪೊಲೀಸ್ ಠಾಣೆಯ ಅಪರಾಧ ವಿಭಾಗದಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜ ನಾಯಕ್ ಮಂಗಳವಾರ ಮೃತಪಟ್ಟಿದ್ದಾರೆ. ವೀರಪ್ಪನ್ ಹಿಡಿಯುವ ಕಾರ್ಯಾಚರಣೆ ವೇಳೆ ಮೀಣ್ಯಂನಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ ಸಿದ್ದರಾಜ ನಾಯಕ್ಗೆ ಗುಂಡು ತಗುಲಿತ್ತು.
1992ರಲ್ಲಿ ಎಸ್ಪಿ ಹರಿಕೃಷ್ಣ ಹಾಗೂ ಎಸ್ಐ ಶಕೀಲ್ ಅಹಮದ್ ಜೊತೆ ಕಾರ್ಯಾಚರಣೆಯಲ್ಲಿ ಸಿದ್ದರಾಜ ನಾಯಕ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ನಡೆದ ಚಕಮಕಿಯಲ್ಲಿ 7 ಗುಂಡುಗಳು ದೇಹ ಹೊಕ್ಕಿದ್ದವು. ಸಾವು ಬದುಕಿನ ನಡುವೆ ಹೋರಾಟ ಮಾಡಿ ಬದುಕುಳಿದಿದ್ದರು.

ಶಸ್ತ್ರ ಚಿಕಿತ್ಸೆ ನಡೆಸಿ 4 ಗುಂಡುಗಳನ್ನು ತೆಗೆಯಾಗಿತ್ತು. ಇನ್ನೂ ಮೂರು ಗುಂಡುಗಳು ತಲೆಯಲ್ಲಿಯೇ ಉಳಿದುಕೊಂಡಿದ್ದವು. ಕಳೆದ ವರ್ಷ ಕರೊನಾ ಸಮಯದಲ್ಲಿ 75 ದಿನಗಳ ಕಾಲ ರಜಾ ತೆಗೆದುಕೊಳ್ಳದೇ ಕೋವಿಡ್ ವಾರಿಯರ್ ಆಗಿ ಸಿದ್ದರಾಜು ನಾಯಕ್ ಕಾರ್ಯ ನಿರ್ವಹಣೆ ಮಾಡಿದ್ದರು.
ಸಿದ್ದರಾಜು ನಾಯಕ್ ಸೇವೆಯಿಂದ ನಿವೃತ್ತರಾಗಲು ಕೇವಲ 5 ದಿನ ಬಾಕಿ ಇತ್ತು. ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ಸಿಬ್ಭಂದಿ ಸಾವಿಗೆ ಸಂತಾಪ ಸೂಚಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications