ಮಾದಪ್ಪನ ಬೆಟ್ಟದ ಕಾರ್ಯದರ್ಶಿ v/s ಇಬ್ಬರು ಶಾಸಕರು: ವರ್ಗಾವಣೆ ಕುಸ್ತಿ, ಹಕ್ಕುಚ್ಯುತಿ ಮಂಡನೆ!?
ಚಾಮರಾಜನಗರ, ನವೆಂಬರ್, 28: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಕಾರ್ಯದರ್ಶಿ ವರ್ಗಾವಣೆ ವಿಚಾರ ರಾಜಕೀಯಗೊಂಡಿದ್ದು, ಇಬ್ಬರು ಶಾಸಕರು ಕೆಂಡಾಮಂಡಲರಾದ ಘಟನೆ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರನ್ನು ವರ್ಗಾವಣೆ ಮಾಡುವಂತೆ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರೇ, ಹನೂರು ಶಾಸಕ ಮಂಜುನಾಥ್ ಹಕ್ಕುಚ್ಯುತಿ ಮಂಡಿಸಲು ಮುಂದಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ಸ್ಥಾನಕ್ಕೆ ತಮ್ಮ ಅಪ್ತರ ನೇಮಕಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮುಂದಾಗಿದ್ದಾರೆ. ಜೆ.ಮಹೇಶ್ ಅವರನ್ನು ನೇಮಕ ಮಾಡುವಂತೆ ಸಿಎಂ ಅವರಿಗೆ ಪತ್ರ ಬರೆದಿದ್ದಾರೆ.

ಶಾಸಕರು ತಮಗೆ ಬೇಕಾದವರನ್ನು ಕಾರ್ಯದರ್ಶಿಯಾಗಿ ಮಾಡಲು ಮುಂದಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೂ ಚಾಮರಾಜನಗರ ಶಾಸಕರಿಗೂ ಏನು ಸಂಬಂಧ.? ಮಹದೇಶ್ವರ ಬೆಟ್ಟದ ಆದಾಯ ಮೇಲೂ ಕಣ್ಣಿಡಲು ಶಾಸಕರು ಮುಂದಾಗಿದ್ದಾರೆ. ಈಗಿರುವ ಕಾರ್ಯದರ್ಶಿ ಸರಸ್ವತಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರ ವಿರೋಧಿ ಆಡಳಿತ ನಡೆಸುತ್ತಿದ್ದಾರೆ. ಇದನ್ನೆಲ್ಲ ಸಹಿಸದೆ ಶಾಸಕರು ತಮ್ಮ ಆಪ್ತರನ್ನು ನೇಮಕ ಮಾಡಲು ಮುಂದಾಗಿದ್ದಾರೆ ಎಂದು ಕನ್ನಡಿಗರ ವಿಜಯಸೇನೆ ಜಿಲ್ಲಾಧ್ಯಕ್ಷ ನವೀನ್ ಕಿಡಿಕಾರಿದ್ದಾರೆ.
ಕಾರ್ಯದರ್ಶಿ ವಿರುದ್ಧ ಕೆಂಡಾಮಂಡಲ
ಇನ್ನು ಈ ಸಂಬಂದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾಧ್ಯಮವರೊಟ್ಟಿಗೆ ಮಾತನಾಡಿ, ಸರಸ್ವತಿ ಅವರು ಮೊದಲು ಜಿಲ್ಲಾ ಉಪ ಕಾರ್ಯದರ್ಶಿಯಾಗಿ ಬಂದರು. ನಂತರ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿಯಾದರು. ಅವರ ಬಗ್ಗೆ ಈಗಾಗಲೇ ಹನೂರು ಶಾಸಕ ಮಂಜುನಾಥ್ ಹಕ್ಕುಚ್ಯುತಿ ಮಂಡಿಸಿದ್ದಾರೆ. ಅಧಿಕಾರಿಯಾಗಿ ರಾಜಕೀಯ ಮಾಡಬಾರದು. ಕಾರ್ಯದರ್ಶಿ ಹುದ್ದೆ ಕೆಎಎಸ್ ಶ್ರೇಣಿಯದಾಗಿದ್ದು, ಅವರದು ಆ ಕೇಡರ್ ಅಲ್ಲ. ನಾನು ವರ್ಗಾವಣೆ ಮಾಡಿ ಎಂದ ಕೂಡಲೇ ವರ್ಗಾವಣೆ ಆಗಲ್ಲ, ರಾಜಕೀಯ ಮಾಡುವುದು ನಿಲ್ಲಿಸಲಿ ಎಂದು ಸಿಡಿಮಿಡಿಗೊಂಡರು.
ಇನ್ನು, ಹನೂರು ಶಾಸಕ ಮಂಜುನಾಥ್ ಅವರು ಶಿಷ್ಟಾಚಾರ ಪಾಲಿಸಿಲ್ಲ ಎಂದು ಹಕ್ಕುಚ್ಯುತಿ ಮಂಡಿಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಹನೂರು ಶಾಸಕ ಪ್ರತಿಕ್ರಿಯೆ ಕೊಡಲು ನಿರಾಕರಿಸಿದರು.
ಸರ್ಕಾರ ಅಕ್ಟೋಬರ್ 31ರಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯಾಗಿದ್ದ, ಸರಸ್ವತಿ ಅವರನ್ನು ಮಾತೃ ಇಲಾಖೆ ಸಮಾಜ ಕಲ್ಯಾಣ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಈ ವೇಳೆ ಸರಸ್ವತಿ ಅವರು ಪ್ರಾಧಿಕಾರದ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಬಾರದೆಂದು ಕೋರ್ಟ್ ಮೊರೆ ಹೋಗಿದ್ದರು.
ಈಗಾಗಲೇ ಡಿಸೆಂಬರ್ 20ರವರೆಗೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಕೋರ್ಟ್ ಆದೇಶ ನೀಡಿದೆ. ಆದ್ದರಿಂದ ಮುಖ್ಯಮಂತ್ರಿಗಳು ಸರಸ್ವತಿ ಅವರನ್ನೇ ಮುಂದುವರೆಸುವಂತೆ ಕನ್ನಡಪರ ಸಂಘಟನೆ ಹೋರಾಟಗಾರರು ಒತ್ತಾಯಿಸಿದ್ದಾರೆ. ಈ ನಡುವೆ ಶಾಸಕರು ಕಾರ್ಯದರ್ಶಿ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಮುಂದಾಗಿದ್ದಾರೆ.
ಒಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಇವರ ಕುರ್ಚಿ ಕಾದಾಟ ಶ್ರೀಕ್ಷೇತ್ರದ ಅಭಿವೃದ್ಧಿಗೆ ಮಾರಕ ಆಗದಿರಲಿ ಎಂಬುದು ಭಕ್ತರ ಒತ್ತಾಯ ಆಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications