ಬರದಿಂದ ತತ್ತರಿಸಿದ್ದ ಚಾಮರಾಜನಗರಕ್ಕೆ ವರವಾದ ಹಿಂಗಾರು
ಚಾಮರಾಜನಗರ, ಅಕ್ಟೋಬರ್ 15: ಜಿಲ್ಲೆಯಾದ್ಯಂತ ಹಿಂಗಾರು ಮಳೆ ಅಬ್ಬರಿಸಿದ್ದರಿಂದ ಒಂದಷ್ಟು ಸಂಕಷ್ಟಗಳ ನಡುವೆಯೂ ಬರಿದಾಗಿದ್ದ ಜಲಾಶಯ, ಕೆರೆಕಟ್ಟೆಗಳು ತುಂಬಿರುವುದು ಜನತೆಯಲ್ಲಿ ಹರ್ಷ ಮೂಡಿಸಿದೆ.
ಇಲ್ಲಿನ ಬಹುತೇಕ ಜಲಾಶಯ, ಕೆರೆಕಟ್ಟೆಗಳು ಕಳೆದ ಕೆಲವು ವರ್ಷಗಳಿಂದ ಭರ್ತಿಯೇ ಆಗಿರಲಿಲ್ಲ. ಹೀಗಾಗಿ ಬೇಸಿಗೆ ಬಂತೆಂದರೆ ಕೃಷಿ ಮಾಡುವುದಿರಲಿ ಕುಡಿಯಲು ನೀರಿಲ್ಲದೆ ಜನ ಜಾನುವಾರು ಪರಿತಪಿಸುವಂತಾಗಿತ್ತು.
ಆದರೆ, ಈ ಬಾರಿ ಸುರಿದ ಮಳೆ ಜಿಲ್ಲೆಯಲ್ಲಿ ಜೀವಜಲವನ್ನು ವೃದ್ಧಿ ಮಾಡಿದೆ. ಕೆರೆಕಟ್ಟೆಗಳು ಭರ್ತಿಯಾಗಿದ್ದು ಮಾತ್ರವಲ್ಲದೆ ಕೋಡಿ ಹರಿದ ಪರಿಣಾಮ ಅಂತರ್ಜಲ ಹೆಚ್ಚಿದೆ. ಈಗಾಗಲೇ ನೂರಾರು ಅಡಿ ಕೊಳವೆ ಬಾವಿ ಕೊರೆಯಿಸಿದರೂ ನೀರು ಸಿಗದೆ ಅಂತರ್ಜಲ ಕುಸಿತಗೊಂಡಿತ್ತು. ಈಗ ಉತ್ತಮವಾಗಿ ಮಳೆ ಬಂದಿರುವುದರಿಂದ ಅಂತರ್ಜಲ ಹೆಚ್ಚಾಗಲಿದೆ ಎಂಬ ವಿಶ್ವಾಸ ರೈತರದ್ದಾಗಿದೆ.

ಜಾನುವಾರುಗಳಿಗೆ ಭರಪೂರ ಮೇವು
ಇನ್ನು ಮಳೆಯಿಲ್ಲದೆ ಬರಡಾದ ಕಾರಣ ಜಾನುವಾರುಗಳಿಗೆ ಮೇವು ಒದಗಿಸಲಾಗದೆ ಪರದಾಡುತ್ತಿದ್ದ ರೈತರು ಈಗ ನೆಮ್ಮದಿಯುಸಿರು ಬಿಟ್ಟಿದ್ದಾರೆ. ಜಾನುವಾರುಗಳಿಗೆ ಭರಪೂರ ಮೇವು ಎಲ್ಲೆಲ್ಲೂ ಸಿಗುತ್ತಿದೆ.

ಪ್ರಾಣಿಗಳಿಲ್ಲ ನೀರಿನ ಸಮಸ್ಯೆ
ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಮಳೆಯಾಗಿದ್ದರಿಂದ ಅರಣ್ಯದೊಳಗೆ ಇರುವ ಕೆರೆಗಳು ಭರ್ತಿಯಾಗಿದ್ದು, ಪ್ರಾಣಿಗಳಿಗೆ ಸಮರ್ಪಕ ನೀರು ಸಿಗುವಂತಾಗಿದೆ. ಅಲ್ಲದೆ ಬೇಸಿಗೆಯಲ್ಲಿ ಉಂಟಾಗುವ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿದಂತಾಗಿದೆ.

ಹೂಗ್ಯಂ ಜಲಾಶಯ ಭರ್ತಿ
ಕರ್ನಾಟಕ ತಮಿಳುನಾಡು ಗಡಿಯಲ್ಲಿರುವ ಕೊಳ್ಳೇಗಾಲ ತಾಲೂಕಿನ ಹನೂರು ಸಮೀಪದ ಹೂಗ್ಯಂ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು ಅಲ್ಲಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರತೊಡಗಿದೆ. ಇದರಿಂದ ರೈತರ ಜಮೀನಿಗೆ ನೀರು ನುಗ್ಗಿ ಬೆಳೆಗಳಿಗೆ ಒಂದಷ್ಟು ತೊಂದರೆಯಾಗಿದೆ.

7 ವರ್ಷಗಳ ಬಳಿಕ ತುಂಬಿದ ಸುವರ್ಣಾವತಿ
ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ಮಾರ್ಗ ಮಧ್ಯೆ ಬಂಡೆಗಳು ಉರುಳಿದ್ದು, ಭೂ ಕುಸಿತ ಉಂಟಾಗಿದೆ. ಹನೂರು ಸಮೀಪದ ಉಡುತೊರೆ ಹಳ್ಳ ಸಂಪೂರ್ಣವಾಗಿ ಭರ್ತಿಯಾಗಿದೆ. ಜಿಲ್ಲೆಯ ಜೀವನಾಡಿಯಾದ ಸುವರ್ಣಾವತಿ ಜಲಾಶಯ ಏಳು ವರ್ಷಗಳ ಬಳಿಕ ತುಂಬಿದೆ.

ಬೇಸಿಗೆಯಲ್ಲಿ ನೀರಿಗಿಲ್ಲ ಸಂಕಷ್ಟ
ಹಾಗೆಯೇ ಚಿಕ್ಕಹೊಳೆ ಜಲಾಶಯವೂ ಭರ್ತಿಯಾಗಿದ್ದು, ಹೆಚ್ಚುವರಿ ನೀರು ಹರಿದು ಹೋಗುತ್ತಿದೆ. ಒಟ್ಟಾರೆಯಾಗಿ ಹೇಳುವುದಾದರೆ ಮಳೆಯಿಂದಾಗಿ ಇದೀಗ ಒಂದಷ್ಟು ತೊಂದರೆಯಾದರೂ ಮುಂದಿನ ಬೇಸಿಗೆಯಲ್ಲಿ ರೈತರು ಅನುಭವಿಸುತ್ತಿದ್ದ ನೀರಿನ ಸಂಕಷ್ಟ ನೀಗಲಿದೆ ಎಂಬುದರಲ್ಲಿ ಎರಡು ಮಾತಿಲ್ಲ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications