Get Updates
Get notified of breaking news, exclusive insights, and must-see stories!

Pre Monsoon Rain: ಪೂರ್ವ ಮುಂಗಾರು ಮಳೆಯಿಂದ ಚಾಮರಾಜನಗರ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಜೀವಕಳೆ-ಪಟ್ಟಿ ಇಲ್ಲಿದೆ

ಚಾಮರಾಜನಗರ, ಮೇ, 22: ಈಗಾಗಲೇ ರಾಜ್ಯದ್ಯಂತ ಮಳೆರಾಯನ ಆರ್ಭಟ ಮುಂದುವರೆದಿದ್ದು, ಬಿಸಿಲಿಗೆ ಬತ್ತಿಹೋಗಿದ್ದ ಜಲಮೂಲಗಳಿಗೆ ಇದೀಗ ಜೀವಕಳೆ ಬಂದಂತಾಗಿದೆ. ಹಾಗೆಯೇ ಭಾರಿ ಮಳೆಯಿಂದ ಗಡಿಜಿಲ್ಲೆಯ ಚಾಮರಾಜನಗರದಲ್ಲಿ ತುಂಬಿದ ಪ್ರಮುಖ ಕೆರೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.

ಚಾಮರಾಜನಗರ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಚಾಮರಾಜನಗರ, ಗುಂಡ್ಲುಪೇಟೆ, ಹನೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಲೇ ಇದೆ. ಇನ್ನು ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕಾಡಿನಲ್ಲೂ ಕೂಡ ಹಲವು ಹಳ್ಳ-ಕೊಳ್ಳಗಳಿಗೆ ಜೀವಕಳೆ ಬರುತ್ತಿದೆ.

Pre-monsoon rains Chamarajanagar district s Major lakes filled

ಅದರಲ್ಲೂ ನಿನ್ನೆ (ಮೇ 21) ಸಂಜೆ ವೇಳೆಗೆ ಗುಂಡ್ಲುಪೇಟೆ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಬಂಡೀಪುರ ಕಾಡಂಚಿನ ಜಕ್ಕಹಳ್ಳಿ, ಮಂಗಲ ಗ್ರಾಮದಲ್ಲಿ ಎರಡು ಗಂಟೆಗೂ ಅಧಿಕ ಕಾಲ ಜೋರು ಮಳೆಯಾಗಿದೆ.

ಹೀಗೆ ಅಬ್ಬರದ ಮಳೆ ಸುರಿಯುತ್ತಿರುವ ಹಿನ್ನೆಲೆ ಬಂಡೀಪುರ ಕಾಡಂಚಿನ ಬೇರಂಬಾಡಿ ಕೆಂಪು ಸಾಗರ ಕೆರೆ, ಹಂಗಳ ಹಿರೀಕೆರೆ, ಬರಗಿ ಕೆರೆ, ಮುಂಟೀಪುರ ಕೆರೆ ಸೇರಿದಂತೆ ವಿವಿಧ ಕೆರೆ-ಕಟ್ಟೆಗಳಿಗೆ ನೀರು ಹರಿದು ಬರುತ್ತಿದೆ. ಇದರಿಂದ ಸಣ್ಣಪುಟ್ಟ ಹಲವು ಕೆರೆಗಳು ತುಂಬಿದೆ. ಸಣ್ಣಪುಟ್ಟ ಹಳ್ಳ-ಕೊಳ್ಳಗಳು ಕೂಡ ಮಳೆ ನೀರಿನಿಂದ ಉಕ್ಕಿ ಹರಿದಿವೆ.

ವೆಂಕಟಯ್ಯನಛತ್ರ, ಹೊಸೂರು ಚಿಕ್ಕಹೋಳೆ ಹಾಗೂ ಬಿಸಲವಾಡಿ ಗ್ರಾಮಗಳಲ್ಲಿ ಕಾಲುವೆಗಳು ನದಿಯಂತಾಗಿದ್ದು, ಚನ್ನಪ್ಪನಪುರ-ಅಮಚವಾಡಿ ಸಂಪರ್ಕ ರಸ್ತೆಯಲ್ಲಿ ಇರುವ ಹೆಬ್ಬಾಳ ಶನೇಶ್ವರ ದೇವಸ್ಥಾನದ ಬಳಿ ರಸ್ತೆ ಸಂಪೂರ್ಣ ಮುಳುಗಡೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+