Pre Monsoon Rain: ಪೂರ್ವ ಮುಂಗಾರು ಮಳೆಯಿಂದ ಚಾಮರಾಜನಗರ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಜೀವಕಳೆ-ಪಟ್ಟಿ ಇಲ್ಲಿದೆ
ಚಾಮರಾಜನಗರ, ಮೇ, 22: ಈಗಾಗಲೇ ರಾಜ್ಯದ್ಯಂತ ಮಳೆರಾಯನ ಆರ್ಭಟ ಮುಂದುವರೆದಿದ್ದು, ಬಿಸಿಲಿಗೆ ಬತ್ತಿಹೋಗಿದ್ದ ಜಲಮೂಲಗಳಿಗೆ ಇದೀಗ ಜೀವಕಳೆ ಬಂದಂತಾಗಿದೆ. ಹಾಗೆಯೇ ಭಾರಿ ಮಳೆಯಿಂದ ಗಡಿಜಿಲ್ಲೆಯ ಚಾಮರಾಜನಗರದಲ್ಲಿ ತುಂಬಿದ ಪ್ರಮುಖ ಕೆರೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.
ಚಾಮರಾಜನಗರ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಚಾಮರಾಜನಗರ, ಗುಂಡ್ಲುಪೇಟೆ, ಹನೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಲೇ ಇದೆ. ಇನ್ನು ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕಾಡಿನಲ್ಲೂ ಕೂಡ ಹಲವು ಹಳ್ಳ-ಕೊಳ್ಳಗಳಿಗೆ ಜೀವಕಳೆ ಬರುತ್ತಿದೆ.

ಅದರಲ್ಲೂ ನಿನ್ನೆ (ಮೇ 21) ಸಂಜೆ ವೇಳೆಗೆ ಗುಂಡ್ಲುಪೇಟೆ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಬಂಡೀಪುರ ಕಾಡಂಚಿನ ಜಕ್ಕಹಳ್ಳಿ, ಮಂಗಲ ಗ್ರಾಮದಲ್ಲಿ ಎರಡು ಗಂಟೆಗೂ ಅಧಿಕ ಕಾಲ ಜೋರು ಮಳೆಯಾಗಿದೆ.
ಹೀಗೆ ಅಬ್ಬರದ ಮಳೆ ಸುರಿಯುತ್ತಿರುವ ಹಿನ್ನೆಲೆ ಬಂಡೀಪುರ ಕಾಡಂಚಿನ ಬೇರಂಬಾಡಿ ಕೆಂಪು ಸಾಗರ ಕೆರೆ, ಹಂಗಳ ಹಿರೀಕೆರೆ, ಬರಗಿ ಕೆರೆ, ಮುಂಟೀಪುರ ಕೆರೆ ಸೇರಿದಂತೆ ವಿವಿಧ ಕೆರೆ-ಕಟ್ಟೆಗಳಿಗೆ ನೀರು ಹರಿದು ಬರುತ್ತಿದೆ. ಇದರಿಂದ ಸಣ್ಣಪುಟ್ಟ ಹಲವು ಕೆರೆಗಳು ತುಂಬಿದೆ. ಸಣ್ಣಪುಟ್ಟ ಹಳ್ಳ-ಕೊಳ್ಳಗಳು ಕೂಡ ಮಳೆ ನೀರಿನಿಂದ ಉಕ್ಕಿ ಹರಿದಿವೆ.
ವೆಂಕಟಯ್ಯನಛತ್ರ, ಹೊಸೂರು ಚಿಕ್ಕಹೋಳೆ ಹಾಗೂ ಬಿಸಲವಾಡಿ ಗ್ರಾಮಗಳಲ್ಲಿ ಕಾಲುವೆಗಳು ನದಿಯಂತಾಗಿದ್ದು, ಚನ್ನಪ್ಪನಪುರ-ಅಮಚವಾಡಿ ಸಂಪರ್ಕ ರಸ್ತೆಯಲ್ಲಿ ಇರುವ ಹೆಬ್ಬಾಳ ಶನೇಶ್ವರ ದೇವಸ್ಥಾನದ ಬಳಿ ರಸ್ತೆ ಸಂಪೂರ್ಣ ಮುಳುಗಡೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ












Click it and Unblock the Notifications