ಚಾಮರಾಜನಗರ: ಬಂಡೀಪುರ ಕಾಳ್ಗಿಚ್ಚು ತಡೆಗೆ ಬೆಂಕಿ ರೇಖೆ ನಿರ್ಮಾಣ
ಚಾಮರಾಜನಗರ, ಜನವರಿ 05: ಬೇಸಿಗೆ ಬರುತ್ತಿದ್ದಂತೆಯೇ ಬಂಡೀಪುರ ಅಭಯಾರಣ್ಯದಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗುವುದು ಮಾಮೂಲಿಯಾಗಿದ್ದು, ಅದರ ತಡೆಗೆ ಅರಣ್ಯ ಇಲಾಖೆ ಈಗಿನಿಂದಲೇ ಹಲವು ಕ್ರಮಗಳನ್ನು ಕೈಗೊಂಡಿದೆ.
ಬಂಡೀಪುರದಲ್ಲಿ ಹಾದು ಹೋಗಿರುವ ರಸ್ತೆಯ ಎರಡು ಬದಿಯಲ್ಲೂ ಒಣ ಎಲೆಗಳನ್ನು ತೆರವುಗೊಳಿಸಿ ಬೆಂಕಿ ರೇಖೆಗಳನ್ನು ನಿರ್ಮಿಸಲಾಗುತ್ತಿದೆ.
ಬೆಂಕಿ ಬಿದ್ದಾಗ ತೆಗೆದುಕೊಳ್ಳುವ ಕ್ರಮಗಳ ಮಾಹಿತಿ ಪಡೆದು ಬೆಂಕಿ ನಂದಿಸಲು ಬಳಸುವ ಉಪಕರಣಗಳ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಜತೆಗೆ ರಸ್ತೆಯ ಇಕ್ಕೆಲಗಳಲ್ಲಿ ಅರಣ್ಯ ಸಿಬ್ಬಂದಿಗಳು ಸ್ಪ್ರೇಯರ್ ಮೂಲಕ ಬೆಂಕಿ ನಂದಿಸುವ ಕಾರ್ಯವನ್ನು ಪ್ರಾಯೋಗಿಕವಾಗಿ ಮಾಡುತ್ತಿದ್ದಾರೆ. ಈ ಬಾರಿ ಲಂಟಾನ ಎಂಬ ಸಸ್ಯ ಒಣಗಿ ನಿಂತಿರುವ ಕಾರಣ ಹೆಚ್ಚಿನ ಕಾಳಜಿಯನ್ನು ವಹಿಸಲಾಗುತ್ತಿದೆ.
ಈಗಾಗಲೇ ಪಿಸಿಸಿಎಫ್ ಪುನತಿ ಶ್ರೀಧರ್ ಅವರು ಭೇಟಿ ನೀಡಿ ಒಣಗಿ ನಿಂತಿರುವ ಹುಲ್ಲಿಗೆ ಬೆಂಕಿ ಬಿದ್ದು ಆಗುವ ಅನಾಹುತ ತಪ್ಪಿಸಲು ಬೆಂಕಿ ರೇಖೆ ನಿರ್ಮಾಣ ಕಾರ್ಯ ನಡೆಸುವ ವಿಧಾನವನ್ನು ಪ್ರಾಯೋಗಿಕ ಪರೀಕ್ಷೆಯನ್ನು ವೀಕ್ಷಿಸಿದರು.

ನಂತರ ಮಾತನಾಡಿ ಬಂಡೀಪುರದ ಅರಣ್ಯ ವ್ಯಾಪ್ತಿಯಲ್ಲಿ ಈಗಾಗಲೇ ಲಂಟಾನ ಹಾಗೂ ಹುಲ್ಲು ಒಣಗಿ ನಿಂತಿದೆ. ಅರಣ್ಯ ಇಲಾಖೆಯ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಕಿಯಿಂದ ಅರಣ್ಯ ಸಂರಕ್ಷಿಸಲು ಬೆಂಕಿ ರೇಖೆ ನಿರ್ಮಾಣ ಮಾಡಲಾಗುತ್ತಿದೆ. ಅರಣ್ಯ ವ್ಯಾಪ್ತಿಯಲ್ಲಿ ಸಂಚರಿಸುವ ಪ್ರವಾಸಿಗರಿಗೆ ಪ್ಲಾಸ್ಟಿಕ್ ಇನ್ನಿತರ ವಸ್ತುಗಳನ್ನು ಅರಣ್ಯದೊಳಗೆ ಬಿಸಾಡದಂತೆ ಅರಿವು ಮೂಡಿಸಲು ತಿಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಂಡೀಪುರ ಸಿಎಫ್ ಓ ಅಂಬಾಡಿ ಮಾಧವ್, ಎಸಿಎಫ್ ರವಿಕುಮಾರ್, ಪರಮೇಶ್, ಆರ್ಎಫ್ಓ ನವೀನಕುಮಾರ್, ಪುಟ್ಟಸ್ವಾಮಿ, ಶೈಲೇಂದ್ರಕುಮಾರ್, ಸಂದೀಪ್, ಸುನೀಲಕುಮಾರ್, ಸಿಬ್ಬಂದಿ ಇದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications