ಚಾಮರಾಜನಗರ: ಬಂಡೀಪುರ ಕಾಳ್ಗಿಚ್ಚು ತಡೆಗೆ ಬೆಂಕಿ ರೇಖೆ ನಿರ್ಮಾಣ
ಚಾಮರಾಜನಗರ, ಜನವರಿ 05: ಬೇಸಿಗೆ ಬರುತ್ತಿದ್ದಂತೆಯೇ ಬಂಡೀಪುರ ಅಭಯಾರಣ್ಯದಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗುವುದು ಮಾಮೂಲಿಯಾಗಿದ್ದು, ಅದರ ತಡೆಗೆ ಅರಣ್ಯ ಇಲಾಖೆ ಈಗಿನಿಂದಲೇ ಹಲವು ಕ್ರಮಗಳನ್ನು ಕೈಗೊಂಡಿದೆ.
ಬಂಡೀಪುರದಲ್ಲಿ ಹಾದು ಹೋಗಿರುವ ರಸ್ತೆಯ ಎರಡು ಬದಿಯಲ್ಲೂ ಒಣ ಎಲೆಗಳನ್ನು ತೆರವುಗೊಳಿಸಿ ಬೆಂಕಿ ರೇಖೆಗಳನ್ನು ನಿರ್ಮಿಸಲಾಗುತ್ತಿದೆ.
ಬೆಂಕಿ ಬಿದ್ದಾಗ ತೆಗೆದುಕೊಳ್ಳುವ ಕ್ರಮಗಳ ಮಾಹಿತಿ ಪಡೆದು ಬೆಂಕಿ ನಂದಿಸಲು ಬಳಸುವ ಉಪಕರಣಗಳ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಜತೆಗೆ ರಸ್ತೆಯ ಇಕ್ಕೆಲಗಳಲ್ಲಿ ಅರಣ್ಯ ಸಿಬ್ಬಂದಿಗಳು ಸ್ಪ್ರೇಯರ್ ಮೂಲಕ ಬೆಂಕಿ ನಂದಿಸುವ ಕಾರ್ಯವನ್ನು ಪ್ರಾಯೋಗಿಕವಾಗಿ ಮಾಡುತ್ತಿದ್ದಾರೆ. ಈ ಬಾರಿ ಲಂಟಾನ ಎಂಬ ಸಸ್ಯ ಒಣಗಿ ನಿಂತಿರುವ ಕಾರಣ ಹೆಚ್ಚಿನ ಕಾಳಜಿಯನ್ನು ವಹಿಸಲಾಗುತ್ತಿದೆ.
ಈಗಾಗಲೇ ಪಿಸಿಸಿಎಫ್ ಪುನತಿ ಶ್ರೀಧರ್ ಅವರು ಭೇಟಿ ನೀಡಿ ಒಣಗಿ ನಿಂತಿರುವ ಹುಲ್ಲಿಗೆ ಬೆಂಕಿ ಬಿದ್ದು ಆಗುವ ಅನಾಹುತ ತಪ್ಪಿಸಲು ಬೆಂಕಿ ರೇಖೆ ನಿರ್ಮಾಣ ಕಾರ್ಯ ನಡೆಸುವ ವಿಧಾನವನ್ನು ಪ್ರಾಯೋಗಿಕ ಪರೀಕ್ಷೆಯನ್ನು ವೀಕ್ಷಿಸಿದರು.

ನಂತರ ಮಾತನಾಡಿ ಬಂಡೀಪುರದ ಅರಣ್ಯ ವ್ಯಾಪ್ತಿಯಲ್ಲಿ ಈಗಾಗಲೇ ಲಂಟಾನ ಹಾಗೂ ಹುಲ್ಲು ಒಣಗಿ ನಿಂತಿದೆ. ಅರಣ್ಯ ಇಲಾಖೆಯ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಕಿಯಿಂದ ಅರಣ್ಯ ಸಂರಕ್ಷಿಸಲು ಬೆಂಕಿ ರೇಖೆ ನಿರ್ಮಾಣ ಮಾಡಲಾಗುತ್ತಿದೆ. ಅರಣ್ಯ ವ್ಯಾಪ್ತಿಯಲ್ಲಿ ಸಂಚರಿಸುವ ಪ್ರವಾಸಿಗರಿಗೆ ಪ್ಲಾಸ್ಟಿಕ್ ಇನ್ನಿತರ ವಸ್ತುಗಳನ್ನು ಅರಣ್ಯದೊಳಗೆ ಬಿಸಾಡದಂತೆ ಅರಿವು ಮೂಡಿಸಲು ತಿಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಂಡೀಪುರ ಸಿಎಫ್ ಓ ಅಂಬಾಡಿ ಮಾಧವ್, ಎಸಿಎಫ್ ರವಿಕುಮಾರ್, ಪರಮೇಶ್, ಆರ್ಎಫ್ಓ ನವೀನಕುಮಾರ್, ಪುಟ್ಟಸ್ವಾಮಿ, ಶೈಲೇಂದ್ರಕುಮಾರ್, ಸಂದೀಪ್, ಸುನೀಲಕುಮಾರ್, ಸಿಬ್ಬಂದಿ ಇದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications