R. Dhruvanarayana: ಹೆಗ್ಗವಾಡಿ ಗ್ರಾಮದಲ್ಲಿ ಆರ್.ಧ್ರುವನಾರಾಯಣ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ
ಚಾಮರಾಜನಗರ, ಮಾರ್ಚ್, 12: ಚಾಮರಾಜನಗರದ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಪಾರ್ಥೀವ ಶರೀರವನ್ನು ಚಾಮರಾಜನಗರಕ್ಕೆ ರಾತ್ರಿ 12:30ರ ಸುಮಾರಿಗೆ ತಲುಪಿತು. ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ್ದ ಕಾರ್ಯಕರ್ತರು, ಅಭಿಮಾನಿಗಳು ಭಜನೆ, ಹಾಡುಗಳ ಮೂಲಕ ದುಃಖವನ್ನು ತೋಡಿಕೊಂಡರು.
ಶನಿವಾರ (ಮಾರ್ಚ್ 11)ರಂದು ಮಧ್ಯಾಹ್ನ 2 ಗಂಟೆ ಹೊತ್ತಿಗೆ ಪಾರ್ಥೀವ ಶರೀರವನ್ನು ತರಬೇಕೆಂದು ಕೊಂಡಿದ್ದರು. ಆದರೆ ಸಾವಿರಾರು ಮಂದಿ ಮೈಸೂರಿನಲ್ಲಿ ಅಂತಿಮ ದರ್ಶನ ಪಡೆಯಲು ಆಗಮಿಸಿದ್ದರಿಂದ ರಾತ್ರಿ 12:30ರ ಸುಮಾರಿಗೆ ಚಾಮರಾಜನಗರಕ್ಕೆ ತಲುಪಿತು. ಮುತ್ತಿಗೆ, ಬದನಗುಪ್ಪೆ, ಬೆಂಡರವಾಡಿ ಸೇರಿದಂತೆ ದಾರಿಯುದ್ದಕ್ಕೂ ತನ್ನ ನೆಚ್ಚಿನ ನಾಯಕನಿಗೆ ಗ್ರಾಮಸ್ಥರು ಅಂತಿಮ ನಮನ ಸಲ್ಲಿಸಿದರು. ಇನ್ನು ಅಂತಿಮ ನಮನ ಸಲ್ಲಿಸಲು ಸಾವಿರಾರು ಮಂದಿ ಮಧ್ಯರಾತ್ರಿ ತನಕವೂ ಕಾದು ಕೊನೆಯ ದರ್ಶನ ಪಡೆದರು.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಿಂದ ಆರಂಭವಾದ ಮೆರವಣಿಗೆ, ಸತ್ತಿ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿಗೆ ತಲುಪಿ ಪಕ್ಷದ ವತಿಯಿಂದ ನಮನ ಸಲ್ಲಿಸಿ ಹರವೆ ಗ್ರಾಮದ ಮಾರ್ಗವಾಗಿ ಸ್ವಗ್ರಾಮ ಹೆಗ್ಗವಾಡಿ ತಲುಪಿತು. ಅಂತಿಮ ಯಾತ್ರೆಯಲ್ಲಿ ಧ್ರುವನಾರಾಯಣ ಪುತ್ರ ದರ್ಶನ್, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಮತ್ತಿತರರು ಇದ್ದರು.
ಚಾಮರಾಜನಗರ ಜಿಲ್ಲೆಯಾದ್ಯಂತ ಧ್ರುವನಾರಾಯಣ ಅವರ ಕೌಟೌಟ್ ಅಳವಡಿಸಿ ಮೌನಾಚರಣೆ ಮಾಡಿರುವ ಅಭಿಮಾನಿಗಳು ಅಶೃತರ್ಪಣ ಅರ್ಪಿಸಿದ್ದಾರೆ. ಹೆಗ್ಗವಾಡಿ ಗ್ರಾಮದಲ್ಲಿ ಭಾನುವಾರ ಮಧ್ಯಾನ (ಮಾರ್ಚ್ 12) ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಧ್ರುವನಾರಾಯಣ
ಹಳೇ ಮೈಸೂರು ಭಾಗದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನಂತರದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿರುವುದು ಕಾಂಗ್ರೆಸ್ ಪಕ್ಷದ ಮೇಲೆ ಭಾರೀ ಪರಿಣಾಮ ಬೀರಲಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದ ಆರ್.ಧ್ರುವನಾರಾಯಣ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕಾಗಿ ತರಲೇ ಬೇಕೆಂಬ ಹಠಕ್ಕೆ ಬಿದ್ದಿದ್ದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಶ್ರೀನಿವಾಸ ಪ್ರಸಾದ್ ಅವರ ಎದುರು ಚಾಮರಾಜನಗರದಲ್ಲಿ ಸೋಲು ಕಂಡಿದ್ದ ಅವರು ಆ ನಂತರ ಅವರು ಸುಮ್ಮನೆ ಕೂರಲಿಲ್ಲ. ಪಕ್ಷದ ಸಂಘಟನೆಗಾಗಿ ಹಗಲಿರುಳು ಶ್ರಮಿಸತೊಡಗಿದ್ದರು.
ಅದರಲ್ಲೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಪ್ರತಿ ಹಳ್ಳಿಗಳಿಂದ ಆರಂಭವಾಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಇಳಿದರು. ಸ್ಥಳೀಯ ನಾಯಕರನ್ನು ಭೇಟಿ ಮಾಡಿ ಸಭೆಗಳನ್ನು ನಡೆಸಲು ಆರಂಭಿಸಿದರು. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ನಾಯಕರು ಸಂಘಟನೆಯಿಂದ ದೂರವುಳಿದಿದ್ದ ಕಾಲದಲ್ಲಿ ಏಕಾಂಗಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಕೀರ್ತಿ ಅವರಿಗೆ ಸಲ್ಲುತ್ತದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications