ಇಂದಿರಾ ಗಾಂಧಿ ಪ್ರತಿರೂಪದಂತಿದ್ದೀರಿ ಎಂದ ಮಹಿಳೆಯನ್ನು ತಬ್ಬಿದ ಪ್ರಿಯಾಂಕ ಗಾಂಧಿ
ಚಾಮರಾಜನಗರ, ಏಪ್ರಿಲ್ 25: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಮಂಗಳವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮತ ಬೇಟೆ ನಡೆಸಿದ್ದು, ಕಾಂಗ್ರೆಸ್ ಮಹಿಳೆಯ ಕಾರ್ಯಕರ್ತೆಯರ ಜೊತೆ ಸಂವಾದ ನಡೆಸಿದ್ದಾರೆ.
ಮಹಿಳೆಯರ ಸಂವಾದದಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಕೊಕ್ಕಬೊರೆ ಗ್ರಾಮದ ಬೊಮ್ಮಮ್ಮ ಮಾತನಾಡಿ 'ನಮಗೆ ಇಷ್ಟು ವರ್ಷಗಳಾದರೂ ವಿದ್ಯುತ್ ಇಲ್ಲ, ರಸ್ತೆಯೂ ಇಲ್ಲ, ಮನೆಗಳು ಇಲ್ಲ, ಸೂಕ್ತ ಆರೋಗ್ಯ ಸೌಲಭ್ಯ ಸಿಗುತ್ತಿಲ್ಲ' ಎಂದು ಅಳಲು ತೋಡಿಕೊಂಡರು. ಇದಕ್ಕೆ, ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯಿಸಿ, ನಮ್ಮ ಸರ್ಕಾರ ಬರಲಿದೆ, ಎಲ್ಲ ಸಮಸ್ಯೆಯನ್ನು ಪರಿಹಾರ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.

ಹನೂರು ತಾಲೂಕಿನ ಹೊಸಪೋಡು ಗ್ರಾಮದ ತಿರುಮಮ್ಮ ಮಾತನಾಡಿ, ಇಂದಿರಾ ಗಾಂಧಿ ಅವರ ಕಾಲದಲ್ಲಿ ನಮಗೆ ಸೌಲಭ್ಯಗಳು ಸಿಕ್ಕಿದವು, ನೀವು ಇಂದಿರಾ ಪ್ರತಿರೂಪದಂತೆ ಇದ್ದೀರಿ, ನಮ್ಮ ಸಮಸ್ಯೆಗಳನ್ನು ಪರಿಹರಿಸಿ ಎಂದು ಹೇಳಿದ್ದಕ್ಕೆ ವೇದಿಕೆಯಿಂದ ಕೆಳಗಿಳಿದು ಬಂದ ಪ್ರಿಯಾಂಕ ಗಾಂಧಿ ತಿರುಮಮ್ಮ ಅಪ್ಪಿಕೊಂಡರು.
ಇನ್ನು, ಪ್ರಿಯಾಂಕಾ ಅಪ್ಪುಗೆ ಬಗ್ಗೆ ತಿರುಮಮ್ಮ ಮಾತನಾಡಿ, ನಮ್ಮ ಸಮಸ್ಯೆಗಳನ್ನು ಈಡೇರಿಸುವ ಭರವಸೆ ಕೊಟ್ಟಿದ್ದಾರೆ, ಕಾಂಗ್ರೆಸ್ ಇದ್ದಾಗಲೇ ನಾನು ಗ್ರಾಮ ಪಂಚಾಯತಿ ಸದಸ್ಯಳಾಗಿದ್ದೆ, ನಮ್ಮ ಮತ ಯಾವಾಗಲೂ ಕಾಂಗ್ರೆಸ್ಗೆ ಎಂದರು.
ಭದ್ರತೆ ಬಿಟ್ಟು ಜನರ ಬಳಿ ಬಂದ ಪ್ರಿಯಾಂಕ ಗಾಂಧಿ
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆಯೂ ಕಾರಿನಿಂದ ಇಳಿದು ಜನರ ಬಳಿ ತೆರಳಿದ ಪ್ರಿಯಾಂಕಾ ಗಾಂಧಿ ಹಸ್ತಲಾಘವ ಕೊಟ್ಟು, ನಮಸ್ಕಾರ ಕಾರ್ಯಕ್ರಮದ ಕೊನೆಯಲ್ಲೂ ವೇದಿಕೆಯಿಂದ ಇಳಿದು ಜನರ ಬಳಿ ಮಿಂಚಿನ ಸಂಚಾರ ನಮಾಡಿದರು. ಡೆಸಿ ಗಮನ ಸೆಳೆದರು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಇನ್ನು ಇಂದಿನ ಸಮಾವೇಶದಲ್ಲಿ 10-12 ಸಾವಿರದಷ್ಟು ಮಂದಿ ಮಹಿಳೆಯರು ಭಾಗಿಯಾಗಿದ್ದರು. ಭಾಷಣದ ಕೊನೆಯಲ್ಲಿ ಜನರ ಕೈಯಲ್ಲಿ ಜೈ ಕರ್ನಾಟಕ ಎಂದು ಹೇಳಿಸಿದ್ದು ವಿಶೇಷವಾಗಿತ್ತು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications