NEET Examination: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕನ್ನಡಪರ ಹೋರಾಟಗಾರರಿಂದ ರಾಷ್ಟ್ರಪತಿಗೆ ಮನವಿ
ಚಾಮರಾಜನಗರ, ಜೂನ್, 11: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆಸಲಾಗುತ್ತಿರುವ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆಯಾ ರಾಜ್ಯಗಳಿಗೆ ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡಪರ ಹೋರಾಟಗಾರರು ನಗರದ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಲಕ್ಷ್ಮೀ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದ ಪರೀಕ್ಷೆಗಳು ಆಯಾ ರಾಜ್ಯ ಸಂಬಂಧಪಟ್ಟದ್ದಾಗಿದ್ದವು. ಕಳೆದ ದಶಕದಿಂದ ಕೇಂದ್ರ ಸರ್ಕಾರವು ನೀಟ್ ಎಂಬ ಹೆಸರಿನಲ್ಲಿ ವೈದ್ಯಕೀಯ ಶಿಕ್ಷಣ ಪರೀಕ್ಷೆಗಳನ್ನು ದೇಶಾದ್ಯಂತ ನಡೆಸುತ್ತಿರುವುದು ಸರಿಯಷ್ಟೆ. ಆದರೆ ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಭಾರಿ ತಾಂತ್ರಿಕ ದೋಷವಾಗಿ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ದೂರಿದ್ದಾರೆ.

ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿರುವ ಶಂಕೆ ಇದೆ. ಮತ್ತು ಇದು ಇದೇ ರೀತಿ ಮುಂದುವರೆದರೆ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಆಗಲಿದೆ. ಮತ್ತು ಅವರು ಶಾಶ್ವತವಾಗಿ ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ಹೊರಗುಳಿಯಲಿದ್ದಾರೆ. ಈಗಾಗಲೇ ಈ ನೀಟ್ ಪರೀಕ್ಷೆಯನ್ನು ಕರ್ನಾಟಕ, ತಮಿಳುನಾಡು ರಾಜ್ಯವು ಸೇರಿದಂತೆ ಹಲವಾರು ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.
ಆದ್ದರಿಂದ ರಾಷ್ಟ್ರಪತಿಗಳಾದ ತಾವು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಈ ಪರೀಕ್ಷೆಗಳನ್ನು ನಡೆಸಲು ಆಯಾ ರಾಜ್ಯಗಳಿಗೆ ಅಧಿಕಾರ ನೀಡಬೇಕು ಇದಕ್ಕೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ಗು.ಪುರುಷೋತ್ತಮ, ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ರಾಜಪ್ಪ, ಲಿಂಗರಾಜು ಸೇರಿದಂತೆ ಮತ್ತಿತರರು ಹಾಜರಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications