ಹನೂರು: ಕೋಳಿ ಮಾಡಿದ ರಂಪಾಟ, 7 ದಿನಗಳಿಂದ ಶಾಲೆಗೆ ಹೋಗದ ಮಕ್ಕಳು.!
ಚಾಮರಾಜನಗರ, ನವೆಂಬರ್, 29: ಕೋಳಿ ಮಾಡಿದ ಎಡವಟ್ಟು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ 1 ವಾರದಿಂದ ಶಾಲೆಗೆ ಮಕ್ಕಳು ತೆರಳದಿರುವ ಘಟನೆ ಹನೂರು ತಾಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ.
ಕಳೆದ ಗುರುವಾರ ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಸೂಕ್ತ ರಕ್ಷಣೆ ಕೊಡುವ ತನಕ ಮಕ್ಕಳು ಶಾಲೆಗೆ ಕಳುಹಿಸಲ್ಲ ಎಂದು ಪಟ್ಟು ಹಿಡಿದಿರುವುದರಿಂದ 1 ವಾರದಿಂದ ಮಕ್ಕಳು ಶಾಲೆಗೆ ಬಂದಿಲ್ಲ. ಬಿಇಒ, ತಾಲೂಕು ಇಒ ಬಂದರೂ ಕೂಡ ಪಾಲಕರು ಪಟ್ಟು ಸಡಿಲಿಸಿಲ್ಲ. ಸೂಕ್ತ ರಕ್ಷಣೆ ಇಲ್ಲದಿರುವುದರಿಂದ ನಾವು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಾಲಕರು ತಿಳಿಸಿದ್ದು, ಅದರಂತೆಯೇ ಮಕ್ಕಳು ಶಾಲೆಯತ್ತ ಮುಖ ಮಾಡಿ 1 ವಾರವಾಗಿದೆ.

ಶಾಲೆಯ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ವಿನಾಃಕಾರಣ ಹಸು ಕರುಗಳನ್ನು ಕಟ್ಟುತ್ತಿದ್ದು, ಜೊತೆಗೆ ಕೋಳಿಗಳನ್ನು ಮೇಯಲು ಬಿಡುತ್ತಿರುವ ಪರಿಣಾಮ ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಶಾಲಾ ಸುತ್ತಲೂ ಕಾಂಪೌಂಡ್ ಕಟ್ಟಬೇಕು, ಶಾಲಾ ಸಮಯದಲ್ಲಿ ಖಾಸಗಿ ವ್ಯಕ್ತಿಗಳು ಶಾಲಾ ಆವರಣ ಪ್ರವೇಶಕ್ಕೆ ನಿರ್ಬಂಧ ಹೇರಬೇಕೆಂದು ಪಾಲಕರ ಒತ್ತಾಯವಾಗಿದೆ. ಹೀಗೆ ಕೋಳಿ ಕುಕ್ಕಿದ ಘಟನೆಯಿಂದ ಬರೋಬ್ಬರಿ 1 ವಾರ ಶಾಲೆಯಿಂದ ಮಕ್ಕಳು ಹೊರಗುಳಿಯುವಂತಾಗಿದೆ.
ಶಾಲೆಗೆ ಬೀಗ ಜಡಿದು ಪೋಷಕರ ಆಕ್ರೋಶ
ಇತ್ತೀಚೆಗಷ್ಟೇ ಶಾಲೆಗೆ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೇ ಕೋಳಿಯೊಂದು ಬಾಲಕಿಯನ್ನು ಕುಕ್ಕಿದ ಘಟನೆ ಹನೂರು ತಾಲೂಕಿನ ಪೆದ್ದನಪಾಳ್ಯ ಎಂಬ ಗ್ರಾಮದಲ್ಲಿ ನಡೆದಿದ್ದು, ಪಾಲಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದರು.
ಗುರುವಾರ ಪೆದ್ದನ ಪಾಳ್ಯ ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ್ದು, ಗುರುವಾರದಂದೇ ಶಾಲೆಗೆ ಬೀಗ ಜಡಿದು ಮಕ್ಕಳನ್ನು ಪಾಲಕರು ಮನೆಗೆ ಕರೆದೊಯ್ದಿದ್ದರು. ಇಂದು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸದೇ ಪಾಲಕರು ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆ ವಿರುದ್ಧ ಪ್ರತಿಭಟಿಸಿ ಅಕ್ರೋಶ ಹೊರಹಾಕಿದ್ದರು.
ಶಾಲೆಯ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ವಿನಾಕಾರಣ ಹಸು ಕರುಗಳನ್ನು ಕಟ್ಟುತ್ತಿದ್ದು, ಜೊತೆಗೆ ಕೋಳಿಗಳನ್ನು ಮೇಯಲು ಬಿಡುತ್ತಿರುವ ಪರಿಣಾಮ ಈ ಘಟನೆ ನಡೆದಿದೆ. ಇಲಾಖೆ ಸರಿಯಾದ ರೀತಿ ವ್ಯವಸ್ಥೆ ಮಾಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ. ಸದ್ಯ, ಅಧಿಕಾರಿಗಳು ಇಂದು ಶಾಲೆಗೆ ಭೇಟಿ ಕೊಟ್ಟು ಪಾಲಕರ ಮನವೊಲಿಸುವ ಕೆಲಸವನ್ನು ಮಾಡುತ್ತಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications