ಚಾಮರಾಜನಗರದಲ್ಲಿ ಗುತ್ತಿಗೆ ನೌಕರರಿಗೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಚಾಮರಾಜನಗರ, ಅಕ್ಟೋಬರ್.25: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು ಗುರುವಾರ (ಅ.25) ಚಾಮರಾಜನಗರದಲ್ಲಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರ ನಗರ ಘಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಿಬಿಐ ಪ್ರಕರಣ: ಕಾಂಗ್ರೆಸ್ ನಿಂದ ಅ.26 ರಂದು ಬೃಹತ್ ಪ್ರತಿಭಟನೆ
ಪ್ರತಿಭಟನಕಾರರು ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಜೋಡಿ ರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನ ತಲುಪಿ ಮನವಿ ಪತ್ರ ಸಲ್ಲಿಸಿದರು.
ನಟಿ ಸನ್ನಿ ಲಿಯೋನ್ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು
ಗುತ್ತಿಗೆ ನೌಕರರಿಗೆ ಸೇವಾಭದ್ರತೆ ಒದಗಿಸಬೇಕು, ಸಮಾನ ವೇತನ ನೀಡಬೇಕು, ವೇತನ ಶ್ರೇಣಿ ನೀಡಲು ಹರಿಯಣ ಮಾದರಿಯಲ್ಲಿ HR ಪಾಲಿಸಿ ರಚಿಸಬೇಕು. ಕಾನೂನು ತೊಡಕುಗಳನ್ನು ಇಲ್ಲವಾಗಿಸಲು ಸಂಸತ್ತಿನಲ್ಲಿ ನಿರ್ಣಯ ಕೈಗೊಂಡು ಖಾಯಮಾತಿ ಮಾಡಲು ಕ್ರಮಕೈಗೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.
ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ
ಪ್ರತಿಭಟನೆಯಲ್ಲಿ ಹೇಮಂತ್ ಕುಮಾರ್, ಚಂದನ್, ಶೇಖರ್, ದುಶ್ಯಂತ್, ಡಾ.ಹೇಮಕುಮಾರ್, ವಿಜಯ, ಅನುಪಮ, ನಾಗವೇಣಿ, ಗುರುಪಾದಸ್ವಾಮಿ, ಗಣೇಶ ಪ್ರಸಾದ್, ಸುರೇಶ್ ಸೇರಿದಂತೆ ನೂರಾರು ನೌಕರರು ಭಾಗವಹಿಸಿದ್ದರು.