ಕಾಡಾನೆ ಹಾವಳಿ ತಡೆಗೆ ಬಿಆರ್ಟಿಯಲ್ಲಿ ರೈಲ್ವೆ ಕಂಬಿ ಬೇಲಿ ನಿರ್ಮಾಣ!
ಚಾಮರಾಜನಗರ, ಜುಲೈ 29: ಬಿಳಿಗಿರಿರಂಗನಬೆಟ್ಟ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಅರಣ್ಯದಿಂದ ನೇರವಾಗಿ ನಾಡಿಗೆ ಬರುತ್ತಿರುವ ಕಾಡಾನೆಗಳು ಎಲ್ಲೆಂದರಲ್ಲಿ ನಿರ್ಬಯವಾಗಿ ಓಡಾಡುತ್ತಿರುವುದರಿಂದ ಈ ಭಾಗದ ಅದರಲ್ಲೂ ಕಾಡಂಚಿನಲ್ಲಿ ಜೀವನ ಸಾಗಿಸುತ್ತಿರುವ ಜನರು ಭಯಭೀತರಾಗಿದ್ದು, ಕಾಡಾನೆಗಳು ನಾಡಿಗೆ ಬರದಂತೆ ತಡೆಗಟ್ಟಬೇಕೆಂಬ ಒತ್ತಾಯಗಳು ಕೇಳಿಬರುತ್ತಲೇ ಇದ್ದವು.
ಈ ನಡುವೆ ಬಿಳಿಗಿರಿರಂಗನಬೆಟ್ಟದಿಂದ ಕಾಡಾನೆಗಳು ನಾಡಿಗೆ ಬರದಂತೆ ತಡೆಗಟ್ಟುವ ಸಲುವಾಗಿ ಹೊಸ ಕ್ರಮಗಳಿಗೆ ಅರಣ್ಯ ಇಲಾಖೆ ಮುಂದಾಗಿದ್ದು, ಈ ಭಾಗದ ಅರಣ್ಯದಂಚಿನಲ್ಲಿ ರೈಲ್ವೆ ಕಂಬಿಯಿಂದ ಬೇಲಿ ನಿರ್ಮಾಣಕ್ಕೆ ಮುಂದಾಗಿದೆ. ಇದು ಈ ಭಾಗದ ಕಾಡಂಚಿನ ಜನರಲ್ಲಿ ತುಸು ನೆಮ್ಮದಿಯನ್ನು ತಂದಿದೆ. ಕೆಲ ದಿನಗಳ ಹಿಂದೆ ಈ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ನಡೆಸಿ ಸಾಯಿಸಿತ್ತಲ್ಲದೆ, ಜತೆಗಿದ್ದ ಪುತ್ರನನ್ನು ಗಂಭೀರವಾಗಿ ಗಾಯಗೊಳಿಸಿತ್ತು.
ಮತ್ತೊಂದೆಡೆ ಬಿಳಿಗಿರಿರಂಗನ ಬೆಟ್ಟದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೂ ನುಗ್ಗಿದ ಕಾಡಾನೆ ಭಯದ ವಾತಾವರಣವನ್ನು ಸೃಷ್ಟಿಸಿತ್ತು. ವಸತಿ ಶಾಲೆಯ ತಂತಿ ಬೇಲಿಯನ್ನು ಕಿತ್ತು ಒಳನುಗ್ಗಿದ ಕಾಡಾನೆ ಎಲ್ಲೆಂದರಲ್ಲಿ ಓಡಾಡಿತ್ತು. ಇದನ್ನು ನೋಡಿದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಭಯಭೀತರಾಗಿದ್ದರು. ಹೀಗಾಗಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಏರ್ ಗನ್, ಪಟಾಕಿ ಸಿಡಿಸುವ ಮೂಲಕ ಕಾರ್ಯಾಚರಣೆ ಮಾಡಿ ಕಾಡಾನೆಯನ್ನು ಶಾಲೆಯಿಂದ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಕಾಡಿಗೆ ಅಟ್ಟಲಾಗಿತ್ತು.

ಸಾಕಷ್ಟು ಮೃತಪಟ್ಟ ಉದಾಹರಣೆ
ಈ ಘಟನೆ ಬಳಿಕ ಈ ವ್ಯಾಪ್ತಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನವರು ಕಾಡಂಚಿನಲ್ಲಿ ವಾಸಿಸುತ್ತಿದ್ದು, ಕಾಡಿನ ಮೂಲಕವೇ ಹಾದು ಹೋಗಬೇಕಾಗಿದೆ. ಹೀಗಾಗಿ ಕಾಡಾನೆಗಳ ದಾಳಿಗೆ ಬಹುಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಇದುವರೆಗೆ ಬಹಳಷ್ಟು ಮಂದಿ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಆದ್ದರಿಂದ ಈ ಭಾಗದಲ್ಲಿ ಕಾಡಿನಿಂದ ನಾಡಿಗೆ ಬರಬಹುದಾದ ಅರಣ್ಯ ಪ್ರದೇಶದ ಅಂಚಿನಲ್ಲಿ ರೈಲ್ವೆ ಕಂಬಿಗಳ ಬೇಲಿ ನಿರ್ಮಾಣ ಮಾಡಲು ಕಳೆದ ಆರು ತಿಂಗಳ ಹಿಂದೆಯೇ ತೀರ್ಮಾನ ಕೈಗೊಂಡು ಕಾಮಗಾರಿ ಆರಂಭಿಸಿತ್ತು.

ರೈಲ್ವೆ ಕಂಬಿಯ ತಡೆ ಬೇಲಿ ಕೊಂಚ ನೆಮ್ಮದಿ
ಈಗಾಗಲೇ ಬಂಡೀಪುರ, ನಾಗರಹೊಳೆ ಉದ್ಯಾನದಲ್ಲಿ ರೈಲ್ವೆ ಕಂಬಿಗಳ ಬೇಲಿಯನ್ನು ನಿರ್ಮಿಸಲಾಗಿದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ರೈಲ್ವೆ ಕಂಬಿಗಳ ಕೊರತೆಯಿದ್ದು ಅದರ ಬದಲಿಗೆ ರೋಪ್ ಬ್ಯಾರಿಯರ್ ನಿರ್ಮಿಸಲು ಮುಂದಾಗಿದ್ದು, ಸದ್ಯ ನಾಗರಹೊಳೆ ಉದ್ಯಾನದಲ್ಲಿ 4.5ಕಿ.ಮೀ. ನಷ್ಟು ರೋಪ್ ಬ್ಯಾರಿಯರ್ ಬೇಲಿಯನ್ನು ಅಳವಡಿಸಲಾಗಿದೆ. ಆದರೆ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್ ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ರೈಲ್ವೆ ಕಂಬಿಯ ತಡೆ ಬೇಲಿ ನಿರ್ಮಾಣ ಮಾಡಲಾಗುತ್ತಿದೆ.
ಈ ವ್ಯಾಪ್ತಿಯ ಪ್ರದೇಶದ ಜನರು ಮೊದಲಿಗೆ ಕಾಡಾನೆಗಳು ನಾಡಿಗೆ ಬರದಂತೆ ಮಾಡಿ, ಅದಕ್ಕಾಗಿ ಏನು ಕ್ರಮ ಕೈಗೊಂಡರೂ ಅದನ್ನು ಸ್ವಾಗತಿಸುವ ಮಟ್ಟಿಗೆ ಬಂದು ತಲುಪಿದ್ದಾರೆ. ಹೀಗಾಗಿ ರೈಲ್ವೆ ಕಂಬಿಯ ಬೇಲಿಯನ್ನು ನಿರ್ಮಾಣ ಮಾಡುತ್ತಿರುವುದರಿಂದ ಕೊಂಚ ಮಟ್ಟಿಗೆ ಕಾಡಂಚಿನ ಜನರು ನೆಮ್ಮದಿಯುಸಿರು ಬಿಡುವಂತಾಗಿದೆ.

ಕಾಡಾನೆ ದಾಳಿ ನಿಯಂತ್ರಣ
ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್ ಟಿ) ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ವನ್ಯಜೀವಿ ವಲಯದ ಕೆ.ಗುಡಿ ವಿಭಾಗದ ಬೆಲ್ಲತ್ತ ಬೀಟ್ ನಲ್ಲಿ 2.25 ಕಿ.ಮೀ ಉದ್ದದ ರೈಲ್ವೆ ಕಂಬಿ ತಡೆ ಬೇಲಿ ನಿರ್ಮಾಣ ಮಾಡಲಾಗಿದೆ. ಬೆಲ್ಲತ್ತ ಅಣೆಕಟ್ಟಿನಿಂದ ಮಗಲಿಮುಂಟಿ ಕಾಲು ದಾರಿವರೆಗೆ 1.20 ಕಿ.ಮೀ ಹಾಗೂ ಮಗಲಿಮುಂಟಿ ಕಾಲುದಾರಿಯಿಂದ ಸೋಲಾರ್ ಶೆಡ್ ವರೆಗೆ 1.25 ಕಿಮೀ ಉದ್ದಕ್ಕೆ ರೈಲ್ವೆ ಕಂಬಿಯ ತಡೆ ಬೇಲಿ ನಿರ್ಮಿಸಲಾಗಿದೆ.
ಈಗಾಗಲೇ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಕಾವೇರಿ ವನ್ಯಧಾಮಗಳಲ್ಲಿ ಈಗಾಗಲೇ ರೈಲ್ವೆ ಕಂಬಿ ತಡೆ ಬೇಲಿಗಳನ್ನು ನಿರ್ಮಿಸಲಾಗಿದೆ. ಪರಿಣಾಮ ಕಾಡಾನೆಗಳು ಅರಣ್ಯ ದಾಟಿ ಬಂದು ರೈತರ ಜಮೀನಿಗೆ ನುಗ್ಗುವುದು ಮತ್ತು ಜನರ ಮೇಲೆ ದಾಳಿ ಮಾಡುವುದು ಕಡಿಮೆಯಾಗಿದೆ.

ಅಣೆಕಟ್ಟು ಇರುವುದರಿಂದ ಆನೆಗಳ ಓಡಾಟ
ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದುವರೆಗೆ ರೈಲ್ವೆ ಕಂಬಿ ಬೇಲಿಯ ಪ್ರಯೋಗ ನಡೆದಿರಲಿಲ್ಲ. ಕಂದಕ, ಸೌರ ಬೇಲಿ, ಕಾಂಕ್ರಿಟ್ ತಡೆ ಬೇಲಿಗಳನ್ನು ನಿರ್ಮಿಸಿ ಕಾಡಾನೆಗಳು ನಾಡಿಗೆ ಬರುವುದನ್ನು ತಡೆಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ ಅದರಿಂದ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಹಾಗಾಗಿಯೇ ಈ ಹಿಂದೆ ಸೌರ ಬೇಲಿಯಿದ್ದ ಸ್ಥಳದಲ್ಲಿಯೇ ರೈಲ್ವೆ ಕಂಬಿಗಳ ಬೇಲಿಯನ್ನು ನಿರ್ಮಿಸಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಟಿ ಹುಲಿ ಸಂರಕ್ಷಿತ ಪ್ರದೇಶದ ಡಿಸಿಎಫ್ ಡಾ.ಜಿ.ಸಂತೋಷ್ ಕುಮಾರ್ ಅವರು, ಬೆಲ್ಲತ್ತ ಬೀಟ್ ನಲ್ಲಿ ಅಣೆಕಟ್ಟು ಇರುವುದರಿಂದ ಆನೆಗಳ ಓಡಾಟ ಅಲ್ಲಿ ಹೆಚ್ಚಾಗಿದೆ. ನೀರು ಕುಡಿಯಲು ಬರುವ ಕಾಡಾನೆಗಳು ಸ್ಥಳೀಯ ರೈತರ ಜಮೀನುಗಳಿಗೂ ದಾಳಿ ಮಾಡುತ್ತಿವೆ. ಇದರಿಂದಾಗಿ ರೈತರು ಹಾಗೂ ಅರಣ್ಯ ಇಲಾಖೆಯ ನಡುವೆ ಸಂಘರ್ಷ ನಡೆಯುತ್ತಿತ್ತು. ಇದನ್ನು ತಪ್ಪಿಸುವ ಸಲುವಾಗಿ ಆರು ತಿಂಗಳ ಹಿಂದೆ ರೈಲು ಕಂಬಿ ಬೇಲಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಸದ್ಯ 2.10 ಮೀಟರ್ ಎತ್ತರದ ಸದೃಢವಾದ ಬೇಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈಗಾಗಲೇ ಕಾಡಾನೆಗಳ ಭಯದಲ್ಲಿ ಜೀವನ ಸಾಗಿಸುತ್ತಿರುವ ಕಾಡಂಚಿನ ಜನರಿಗೆ ರೈಲ್ವೆ ಕಂಬಿಯ ಬೇಲಿ ನಿರ್ಮಾಣವಾದ ಬಳಿಕ ನೆಮ್ಮದಿ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications