ಗುಂಡ್ಲುಪೇಟೆ: ಮಳೆಗೆ ಧರೆಗುರುಳುತ್ತಿರುವ ಕಟ್ಟಡಗಳು!
ಚಾಮರಾಜನಗರ, ಸೆಪ್ಟೆಂಬರ್ 12: ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಗೆ ಹಳೆಯ ಶಿಥಿಲಾವಸ್ಥೆಯಲ್ಲಿರುವ ಮನೆ ಮತ್ತು ಕಟ್ಟಡಗಳು ಕುಸಿದು ಬೀಳುತ್ತಿದ್ದರೆ ಮತ್ತೊಂದೆಡೆ ನೀರು ಸಂಗ್ರಹಕ್ಕಾಗಿ ನಿರ್ಮಿಸಿದ್ದ ಚೆಕ್ ಡ್ಯಾಂಗೂ ಹಾನಿಯಾಗಿದೆ ಇದರಿಂದಾಗಿ ಜನ ಆತಂಕಗೊಂಡಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ ತಾಲೂಕು ಪಂಚಾಯಿತಿಗೆ ಸೇರಿದ ಹಳೆಯ ಕಟ್ಟಡಕ್ಕೆ ಹೊಂದಿಕೊಂಡಿದ್ದ ಜೀಪ್ ಗ್ಯಾರೇಜಿನ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ತಾಪಂ ಇಒ ಅವರಿಗೆ ಸೇರಿದ ಜೀಪ್ ಜಖಂಗೊಂಡಿದೆ.

ಜೀಪ್ ಮೇಲೆ ಕಟ್ಟಡದ ಅವಶೇಷಗಳು ಬಿದ್ದಿದ್ದರಿಂದ ಜೆಸಿಬಿ ಬಳಸಿ ಅದನ್ನು ಹೊರತೆಗೆಯಲಾಗಿದೆ. ಇದರಿಂದ ಪಕ್ಕದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ, ಹಿಂದುಳಿದ ವರ್ಗ ಹಾಗೂ ಅಂಗವಿಕಲರ ಕಚೇರಿಗಳಿಗೂ ಹಾನಿಯಾಗಿದೆ.

ಚೆಕ್ ಡ್ಯಾಂ ಕುಸಿತ
ಮತ್ತೊಂದೆಡೆ ಚಿಕ್ಕತುಪ್ಪೂರು ಗ್ರಾಮದ ಮಾದಯ್ಯನಕಟ್ಟೆಗೆ ನೀರು ಹರಿದು ಬರುವ ಅಡ್ಡಹಳ್ಳದ ಸಮೀಪ ಕೃಷಿ ಇಲಾಖೆಯು ಜಲಾನಯನ ಯೋಜನೆಯಡಿ ನಿರ್ಮಿಸಿದ್ದ ಚೆಕ್ಡ್ಯಾಂ ನೀರಿನ ರಭಸಕ್ಕೆ ಕುಸಿದು ಬಿದ್ದಿದೆ.

ಈ ಚೆಕ್ ಡ್ಯಾಂ ಕುಸಿಯಲು ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಗ್ರಾಮಕ್ಕೆ ನೀರು ಸರಬರಾಜು ಮಾಡುವ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಸುವ ಸಲುವಾಗಿ ಕೆಲ ತಿಂಗಳ ಹಿಂದೆ ಈ ಚೆಕ್ ಡ್ಯಾಂ ನಿರ್ಮಿಸಲಾಗಿತ್ತು. ಇದಕ್ಕೆ ಸ್ಥಳೀಯವಾಗಿ ಲಭ್ಯವಿದ್ದ ಮರಳು, ಮಣ್ಣು, ನಿಗದಿತ ಪ್ರಮಾಣದಲ್ಲಿ ಸಿಮೆಂಟ್ ಬಳಕೆ ಮಾಡದೆ ತರಾತುರಿಯಲ್ಲಿ ನಿರ್ಮಿಸಿದ್ದರಿಂದ ಮಳೆಗೆ ನೀರು ಸಂಗ್ರಹವಾಗುತ್ತಿದ್ದಂತೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಇದರ ನಿರ್ಮಾಣಕ್ಕೆ 3.2 ಲಕ್ಷ ರೂ. ಖರ್ಚಾಗಿತ್ತು ಎಂದು ಹೇಳಲಾಗಿದೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications