ಗುಂಡ್ಲುಪೇಟೆಯಲ್ಲಿ ರೈತರಿಗೆ ನೆಮ್ಮದಿ ತಂದ ಮಳೆ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮಂಗಳವಾರ ಒಳ್ಳೆ ಮಳೆಯಾಗಿದೆ. ಇದರಿಂದ ರೈತರಲ್ಲಿ ಆಶಾಭಾವ ಮೂಡಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲೂ ಪ್ರಾಣಿಗಳಿಗೆ ನೀರು ದೊರಕಲು ಅನುಖೂಲವಾಗಿದೆ.
ಗುಂಡ್ಲುಪೇಟೆ, ಮಾರ್ಚ್ 21: ಬಂಡೀಪುರ ಅರಣ್ಯ ವಲಯ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಗಳವಾರ ಮಳೆ ಸುರಿದಿದ್ದು, ಬಿಸಿಲಿನಿಂದ ಬಸವಳಿದ್ದ ಜನ ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ.
ಬಂಡೀಪುರ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಒಂದಿಷ್ಟು ಮಳೆ ಬಂದಿತ್ತಾದರೂ ಮತ್ತೆ ಬಿಸಿಲಿನ ಧಗೆಯಿಂದಾಗಿ ಜನ ಬೇಸತ್ತಿದ್ದರು. ಇನ್ನು ಬಂಡೀಪುರ ಅರಣ್ಯಕ್ಕೆ ಬೆಂಕಿ ಬಿದ್ದಿದ್ದರಿಂದ ಕುರುಚಲು ಕಾಡು ಸೇರಿದಂತೆ ಮರಗಿಡಗಳು ಸುಟ್ಟು ಕರಕಲಾಗಿದ್ದವು.

ಇದೀಗ ಮಳೆ ಬಂದಿರುವುದರಿಂದ ಒಂದಷ್ಟು ವಾತಾವರಣ ತಂಪಾಗಿದೆ. ಬೆಳಗ್ಗೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುವುದರೊಂದಿಗೆ ಮಳೆಗಾಲದ ವಾತಾವರಣವನ್ನು ನಿರ್ಮಿಸಿತ್ತು. ಗುಂಡ್ಲುಪೇಟೆ ಪಟ್ಟಣ ಸೇರಿದಂತೆ ಹಂಗಳ, ದೇವರಹಳ್ಳಿ, ಶಿವಪುರ, ಅಣ್ಣೂರುಕೇರಿ, ಶಿಂಡನಪುರ, ಕಗ್ಗಳ, ತೆರಕಣಾಂಬಿ ಸುತ್ತಮುತ್ತ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.[ಬರ ಬಂದು ಬಾಗಿಲಲಿ ನಿಂತಿಹುದು ಬದುಕು ಹೇಗೆ ಪ್ರಭುವೆ?]
ಬಂಡೀಪುರ ರಾಷ್ಟ್ರೀಯ ಉದ್ಯಾನದ ಕೆಲವೆಡೆ ಮಳೆ ಬಂದಿದೆಯಾದರೂ 13ನೇ ವಲಯಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ಇದರಿಂದ ಕೆರೆಗಳಿಗೆ ನೀರು ಹರಿದು ಬಂದು, ವನ್ಯಜೀವಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಒಂದಷ್ಟು ಪರಿಹಾರ ದೊರೆತಂತಾಗಿದೆ.
ಇನ್ನು ಗೋಪಾಲಸ್ವಾಮಿ ಬೆಟ್ಟ, ಬಂಡೀಪುರ ಹಾಗೂ ಕುಂದಕೆರೆ ವಲಯಗಳಿಗೆ ಹೆಚ್ಚಿನ ಮಳೆ ಬಿದ್ದಿದ್ದು, ಕೆರೆ-ಕಟ್ಟೆಗಳಿಗೆ ನೀರು ಹರಿದು ಬರುತ್ತಿದೆ. ಇದರಿಂದ ನೀರು ಮತ್ತು ಆಹಾರ ಹುಡುಕಿಕೊಂಡು ಹೋದ ಪ್ರಾಣಿಗಳು ಮತ್ತೆ ಇತ್ತ ಬರುವಂತಾಗಿದೆ.
ಇದೇ ರೀತಿ ಮಳೆ ಬರುತ್ತಿದ್ದರೆ ರೈತರಿಗೂ ಕೃಷಿ ಚಟುವಟಿಕೆ ಆರಂಭಿಸಲು ಅನುಕೂಲವಾಗುವುದಲ್ಲದೆ, ಅರಣ್ಯದಲ್ಲಿ ಹುಲ್ಲು ಚಿಗುರಿ ಸಸ್ಯಾಹಾರಿ ಪ್ರಾಣಿಗಳಿಗೆ ಮೇವು ದೊರಕಲು ಸಾಧ್ಯವಾಗುತ್ತದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications