ಮಧ್ಯಾಹ್ನವೇ ಚಾಮರಾಜನಗರದಲ್ಲಿ ಮಳೆರಾಯನ ಆರ್ಭಟ-ಏನೆಲ್ಲ ಅನಾಹುತಗಳು ಸಂಭವಿಸಿದ್ವು?-ಮಾಹಿತಿ
ಚಾಮರಾಜನಗರ, ಮೇ, 11: ಇಷ್ಟು ದಿನ ಬಿಸಿಲಿನ ಬೇಗೆಗೆ ಬಸವಳಿದಿದ್ದ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಹಾಗಯೇ ಎರಡು ದಿನ ಸಾಧಾರಣ ಮಳೆಯಾಗಿ ಬಿಡುವು ನೀಡಿದ್ದು, ಇದೀಗ ವರುಣ ಇಂದು (ಮೇ 11) ಮಧ್ಯಾಹ್ನ ಭರ್ಜರಿಯಾಗಿ ಎಂಟ್ರಿ ಕೊಟ್ಟು ಜಿಲ್ಲೆಯ ಹಲವೆಡೆ ತಂಪೆರೆದಿದ್ದಾನೆ.
ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ತಾಲೂಕಿನಾದ್ಯಂತ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಸಿಡಿಲು ಆರ್ಭಟದೊಂದಿಗೆ ಅಬ್ಬರದ ಮಳೆಯಾಗಿದ್ದು, ಇದರಿಂದ ಬಿಸಿಲಿನಿಂದ ಬಸವಳಿದಿದ್ದ ಜನರ ಮುಖದಲ್ಲಿ ಸಂತಸ ಮೂಡಿದಂತಾಗಿದೆ.

ಚಾಮರಾಜನಗರ, ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಬ್ಯಾಡಮೂಡ್ಲು, ಹೆಬ್ಬಸೂರು, ಚಂದಕವಾಡಿ, ಮರಿಯಾಲ, ಕೆಲ್ಲಂಬಳ್ಳಿ ಸುತ್ತಮುತ್ತಾ ಭರ್ಜರಿ ಮಳೆಯಾಗಿದೆ. ಮತ್ತೊಂದೆಡೆ ಬಿರುಗಾಳಿ ರಭಸಕ್ಕೆ ಚಾಮರಾಜನಗರದ ಚಾಮರಾಜೇಶ್ವರ ಉದ್ಯಾನವನದ ಭುವನೇಶ್ವರಿ ವಿಗ್ರಹದ ಬಳಿ ಬೃಹತ್ ಗಾತ್ರ ಮರವೊಂದು ಧರೆಗುರುಳಿದೆ. ಅದೃಷ್ಟವಶಾತ್ ಈ ವೇಳೆ ಉದ್ಯಾನವನದಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇನ್ನು ಹೆಬ್ಬಸೂರು, ಬ್ಯಾಡಮೂಡ್ಲು ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆಗೆ ಹೆಕ್ಟೇರ್ಗಟ್ಟಲೆ ಬಾಳೆ ಫಸಲು ನೆಲಕಚ್ಚಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಿರುಗಾಳಿ ಮಳೆಗೆ 3,000 ಬಾಳೆ ಗಿಡಗಳ ನಾಶ: ಇಂದು (ಮೇ 11) ಮಧ್ಯಾಹ್ನ ಸುರಿದ ಬಿರುಗಾಳಿ ಮಳೆಗೆ 3,000ಕ್ಕೂ ಹೆಚ್ಚು ಬಾಳೆಗಿಡಗಳು ನೆಲಕಚ್ಚಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಇಂದು (ಮೇ 11) ಮಟ ಮಟ ಮಧ್ಯಾಹ್ನವೇ ಸುರಿದ ಬಿರುಗಾಳಿ ಮಳೆಗೆ ಮೂರು ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ನೆಲಕಚ್ಚಿದ ಘಟನೆ ಚಾಮರಾಜನಗರ ತಾಲೂಕಿನ ಉತ್ತುಹಳ್ಳಿ ಗ್ರಾಮದಲ್ಲಿ ನಡೆದಿದೆ. ಇನ್ನು ಬಾಳೆ ಬೆಳೆ ನಾಶವಾದ ಹಿನ್ನೆಲೆ ರವಿ ಎಂಬುವರು ಕಣ್ಣೀರಿಟ್ಟಿದ್ದಾರೆ.
ರೈತ ರವಿ ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದರು. ಇದೀಗ ಬಿರುಗಾಳಿ ಮಳೆಗೆ ಬಾಳೆಗಿಡಗಳು ನೆಲಕಚ್ಚಿದ ಹಿನ್ನೆಲೆ 6 ತಿಂಗಳ ಶ್ರಮ ಅರ್ಧ ತಾಸಿನಲ್ಲಿ ನಾಶವಾದಂತಾಗಿದೆ. ಈ ಮೂಲಕ ರೈತ ರವಿ ಕಂಡ ಕನಸ್ಸು ಗಾಳಿ ಮಳೆಯಲ್ಲಿ ಕೊಚ್ಚಿ ಹೋದಂತಾಗಿದೆ.
ಇನ್ನು ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಬೇಕು. ಹಾಗೂ ಈ ನಷ್ಟಕ್ಕೆ ಸ್ಪಂದಿಸಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಕಣ್ಣೀರಿಡುತ್ತಾ ಮನವಿ ಮಾಡಿದ್ದಾರೆ. ಇನ್ನು ಈ ಬಾಳೆ ನಾಶದ ದೃಶ್ಯ ಡ್ರೋನ್ನಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications