ಮಧ್ಯಾಹ್ನವೇ ಚಾಮರಾಜನಗರದಲ್ಲಿ ಮಳೆರಾಯನ ಆರ್ಭಟ-ಏನೆಲ್ಲ ಅನಾಹುತಗಳು ಸಂಭವಿಸಿದ್ವು?-ಮಾಹಿತಿ
ಚಾಮರಾಜನಗರ, ಮೇ, 11: ಇಷ್ಟು ದಿನ ಬಿಸಿಲಿನ ಬೇಗೆಗೆ ಬಸವಳಿದಿದ್ದ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಹಾಗಯೇ ಎರಡು ದಿನ ಸಾಧಾರಣ ಮಳೆಯಾಗಿ ಬಿಡುವು ನೀಡಿದ್ದು, ಇದೀಗ ವರುಣ ಇಂದು (ಮೇ 11) ಮಧ್ಯಾಹ್ನ ಭರ್ಜರಿಯಾಗಿ ಎಂಟ್ರಿ ಕೊಟ್ಟು ಜಿಲ್ಲೆಯ ಹಲವೆಡೆ ತಂಪೆರೆದಿದ್ದಾನೆ.
ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ತಾಲೂಕಿನಾದ್ಯಂತ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಸಿಡಿಲು ಆರ್ಭಟದೊಂದಿಗೆ ಅಬ್ಬರದ ಮಳೆಯಾಗಿದ್ದು, ಇದರಿಂದ ಬಿಸಿಲಿನಿಂದ ಬಸವಳಿದಿದ್ದ ಜನರ ಮುಖದಲ್ಲಿ ಸಂತಸ ಮೂಡಿದಂತಾಗಿದೆ.

ಚಾಮರಾಜನಗರ, ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಬ್ಯಾಡಮೂಡ್ಲು, ಹೆಬ್ಬಸೂರು, ಚಂದಕವಾಡಿ, ಮರಿಯಾಲ, ಕೆಲ್ಲಂಬಳ್ಳಿ ಸುತ್ತಮುತ್ತಾ ಭರ್ಜರಿ ಮಳೆಯಾಗಿದೆ. ಮತ್ತೊಂದೆಡೆ ಬಿರುಗಾಳಿ ರಭಸಕ್ಕೆ ಚಾಮರಾಜನಗರದ ಚಾಮರಾಜೇಶ್ವರ ಉದ್ಯಾನವನದ ಭುವನೇಶ್ವರಿ ವಿಗ್ರಹದ ಬಳಿ ಬೃಹತ್ ಗಾತ್ರ ಮರವೊಂದು ಧರೆಗುರುಳಿದೆ. ಅದೃಷ್ಟವಶಾತ್ ಈ ವೇಳೆ ಉದ್ಯಾನವನದಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇನ್ನು ಹೆಬ್ಬಸೂರು, ಬ್ಯಾಡಮೂಡ್ಲು ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆಗೆ ಹೆಕ್ಟೇರ್ಗಟ್ಟಲೆ ಬಾಳೆ ಫಸಲು ನೆಲಕಚ್ಚಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಿರುಗಾಳಿ ಮಳೆಗೆ 3,000 ಬಾಳೆ ಗಿಡಗಳ ನಾಶ: ಇಂದು (ಮೇ 11) ಮಧ್ಯಾಹ್ನ ಸುರಿದ ಬಿರುಗಾಳಿ ಮಳೆಗೆ 3,000ಕ್ಕೂ ಹೆಚ್ಚು ಬಾಳೆಗಿಡಗಳು ನೆಲಕಚ್ಚಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಇಂದು (ಮೇ 11) ಮಟ ಮಟ ಮಧ್ಯಾಹ್ನವೇ ಸುರಿದ ಬಿರುಗಾಳಿ ಮಳೆಗೆ ಮೂರು ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ನೆಲಕಚ್ಚಿದ ಘಟನೆ ಚಾಮರಾಜನಗರ ತಾಲೂಕಿನ ಉತ್ತುಹಳ್ಳಿ ಗ್ರಾಮದಲ್ಲಿ ನಡೆದಿದೆ. ಇನ್ನು ಬಾಳೆ ಬೆಳೆ ನಾಶವಾದ ಹಿನ್ನೆಲೆ ರವಿ ಎಂಬುವರು ಕಣ್ಣೀರಿಟ್ಟಿದ್ದಾರೆ.
ರೈತ ರವಿ ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದರು. ಇದೀಗ ಬಿರುಗಾಳಿ ಮಳೆಗೆ ಬಾಳೆಗಿಡಗಳು ನೆಲಕಚ್ಚಿದ ಹಿನ್ನೆಲೆ 6 ತಿಂಗಳ ಶ್ರಮ ಅರ್ಧ ತಾಸಿನಲ್ಲಿ ನಾಶವಾದಂತಾಗಿದೆ. ಈ ಮೂಲಕ ರೈತ ರವಿ ಕಂಡ ಕನಸ್ಸು ಗಾಳಿ ಮಳೆಯಲ್ಲಿ ಕೊಚ್ಚಿ ಹೋದಂತಾಗಿದೆ.
ಇನ್ನು ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಬೇಕು. ಹಾಗೂ ಈ ನಷ್ಟಕ್ಕೆ ಸ್ಪಂದಿಸಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಕಣ್ಣೀರಿಡುತ್ತಾ ಮನವಿ ಮಾಡಿದ್ದಾರೆ. ಇನ್ನು ಈ ಬಾಳೆ ನಾಶದ ದೃಶ್ಯ ಡ್ರೋನ್ನಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications