Ram Mandir inauguration: ಚಾಮರಾಜನಗರದೆಲ್ಲೆಡೆ ಸಂಭ್ರಮಾಚರಣೆ ಬಲು ಜೋರು
ಚಾಮರಾಜನಗರ, ಜನವರಿ, 22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗುತ್ತಿರುವ ಹಿನ್ನೆಲೆ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು, ದೇಗುಲಗಳ ಆವರಣ ಕೇಸರಿ ಧ್ವಜಗಳಿಂದ ಅಲಂಕೃತಗೊಂಡಿವೆ.
ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಆಗುತ್ತಿರುವ ಶುಭ ದಿನದಲ್ಲಿ ಚಾಮರಾಜನಗರ ರಾಮ ಭಕ್ತರ ಸಂಭ್ರಮ ಜೋರಾಗಿದೆ. ಅಲ್ಲದೆ ವಿಶೇಷ ಪೂಜೆ, ಹೋಮ ಹವನಗಳು ಕೂಡ ನಡೆಯುತ್ತಿವೆ.

ಚಾಮರಾಜನಗರದ ಶಂಕರಪುರ ಬಡಾವಣೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಹಬ್ಬದ ಸಡಗರ ಸೃಷ್ಟಿಯಾಗಿದ್ದು, ಶ್ರೀ ರಾಮತಾರಕ ಮಹಾ ಮಂತ್ರ ಜಪ ಸಾಂಗತಾ ಯಜ್ಞಯನ್ನು ಶ್ರೀ ಚಂದ್ರಶೇಖರ ಭಾರತೀ ಸೇವಾ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿದೆ.
ನೂರಾರು ಮಂದಿ ರಾಮ ಭಕ್ತರು ಈ ಯಜ್ಞದಲ್ಲಿ ಪಾಲ್ಗೊಂಡಿದ್ದಾರೆ. ಜೊತೆಗೆ ರಾಮಮಂದಿರದಲ್ಲಿ ಅಯೋಧ್ಯೆ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಎಲ್ಸಿಡಿ ಸ್ಕ್ರೀನ್ ಮೂಲಕ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.
ಚಾಮರಾಜೇಶ್ವರ ದೇಗುಲ ಮುಂಭಾಗ ಇಂದು ರಾಮ ಮಂದಿರ, ರಾಮನ ಚಿತ್ರ ಬಿಡುಸುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ನೂರಾರು ಚಿಣ್ಣರು ತಮ್ಮ ಕಲ್ಪನೆಯ ಬಾಲರಾಮ, ಶ್ರೀರಾಮಚಂದ್ರ ಹಾಗೂ ರಾಮ ಮಂದಿರದ ಚಿತ್ರಗಳನ್ನು ಬಿಡಿಸಿದ್ದಾರೆ.
5 ತಿಂಗಳ ಮಗುವಿಗೆ ನಾಮಕರಣ
ಸೋಮವಾರವಾದ ಇಂದು (ಜನವರಿ 22) ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಇಡೀ ದೇಶಾದ್ಯಂತ ಸಂಭ್ರಮಾಚರಣೆಯ ಮುಗಿಲು ಮುಟ್ಟಿದೆ. ವಿಶೇಷ ಪೂಜೆ, ಭಜನೆ, ಮಂತ್ರ ಪಠಣ, ಪ್ರಸಾದ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಳು ನಡೆಯುತ್ತಿವೆ. ಅದರಂತೆಯೇ ಕೋಟೆ ನಾಡು ಚಿತ್ರದುರ್ಗದಲ್ಲಿಲೂ ವಿಶೇಷ ಕಾರ್ಯಕ್ರಮವೊಂದು ನಡೆಯಿತು. ಶ್ರೀ ರಾಮಮಂದಿರ ಉದ್ಘಾಟನೆ ಅಂಗವಾಗಿ ಮಗುವಿಗೆ ಇಂದೇ ನಾಮಕರಣ ಮಾಡಲಾಗಿದೆ.
ಹೌದು ಚಿತ್ರದುರ್ಗ ಗಾಂಧಿನಗರದ ಸಾಗರ್ ಅವರು ಭಾವನಾ ಎಂಬುವರೊಂದಿಗೆ ಮದುವೆಯಾಗಿದೆ. ಮದುವೆಯ ನಂತರ ಭಾವನಾ ಅವರು 2023, ಸೆಪ್ಟೆಂಬರ್ 22ರಂದು ಗುಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇಂದಿಗೆ ಮಗುವಿಗೆ 5 ತಿಂಗಳು ತುಂಬಿದ್ದು, ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಮಗುವಿಗೆ "ಶ್ರೀರಾಮ್" ಎಂದು ನಾಮಕರಣ ಮಾಡಿದ್ದಾರೆ.
ತಂದೆ ಸಾಗರ್ ಮೆಡಿಕಲ್ ರೆಪ್ರೆಸೆಂಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪತ್ನಿ ಭಾವನಾ ಗೃಹಿಣಿಯಾಗಿದ್ದಾರೆ ಎನ್ನಲಾಗಿದೆ. ಇವರಿಬ್ಬರೂ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ತನ್ನ ಪುತ್ರನಿಗೆ ಅಯೋಧ್ಯೆ ರಾಮಮಂದಿರ ಪೂಜೆ ಸಮಯದಲ್ಲಿ ಮಗುವಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಮಾಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇನ್ನು ಈ ಬಗ್ಗೆ ಒನ್ ಇಂಡಿಯಾ ನ್ಯೂಸ್ ಜೊತೆ ಮಾತನಾಡಿ ಖುಷಿ ಹಂಚಿಕೊಂಡಿರುವ ತಾಯಿ ಭವನಾ "ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇದು ಒಳ್ಳೆಯ ದಿನ ಆಗಿರುವುದರಿಂದ ಕುಟುಂಬದ ಸದಸ್ಯರು ಸೇರೀ ಮಗುವಿನ ಹೆಸರಿನ ಬಗ್ಗೆ ತಿರ್ಮಾನ ಮಾಡಲಾಯಿತು", ಎಂದರು.
ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಜರುಗಿದ ಸಮಯದಲ್ಲಿ ಮಗನಿಗೆ ಶ್ರೀರಾಮ್ ಎಂದು ನಾಮಕರಣ ಮಾಡಲಾಯಿತು. ಮನೆಯಲ್ಲಿ ಸತ್ಯನಾರಾಯಣ ಪೂಜೆ ನಡೆಸಿ ನಾಮಕರಣ ಮಾಡಲಾಯಿತು. ಇದರಿಂದ ಮನೆಯಲ್ಲಿ ಎಲ್ಲರೂ ಖುಷಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications