ವನವಾಸದ ವೇಳೆ ಗಡಿಜಿಲ್ಲೆಯ ಈ ಭಾಗದಲ್ಲಿ ಶ್ರೀರಾಮ ಸಂಚಾರ-ಮಾಹಿತಿ ತಿಳಿಯಿರಿ
ಚಾಮರಾಜನಗರ, ಜನವರಿ, 21: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾನೆ ಆಗುತ್ತಿದ್ದು, ಗಡಿಜಿಲ್ಲೆ ಚಾಮರಾಜನಗರದಲ್ಲೂ ಕೂಡ ರಾಮ ಸಂಚಾರ ನಡೆಸಿದ ಹಲವು ಸ್ಥಳಗಳಿವೆ. ವನವಾಸದ ಸಂದರ್ಭದಲ್ಲಿ ಇಲ್ಲಿನ ಹಲವು ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದರ ಬಗ್ಗೆ ಪ್ರತೀತಿ, ಪುರಾಣಗಳಲ್ಲಿ ಉಲ್ಲೇಖವಿದೆ.
ರಾಮನ ಪಾದವೇ ಮಂದಿರವಾಗಿ, ದೇವರ ಹೆಜ್ಜೆ ಗುರುತನ್ನು ಶ್ರದ್ಧಾ ಭಕ್ತಿಯಿಂದ ನಿತ್ಯ ಪೂಜಿಸುವ ಸ್ಥಳವೊಂದಿದೆ. ಇಲ್ಲಿ ಪಾದದ ಗುರುತಿಗೆ ನಮಸ್ಕರಿಸಿ ಬೇಡಿಕೊಂಡರೆ ಇಷ್ಟಾರ್ಥ ಸಿದ್ಧಿಸಲಿದೆ ಎಂಬ ನಂಬಿಕೆ ಭಕ್ತರದ್ದಾಗಿದೆ. ತಮಿಳುನಾಡಿನ ತಾಳವಾಡಿ ತಾಲೂಕಿನ ರಾಮಪುರ ಸಮೀಪದ ಅರಣ್ಯದ ನಡುವೆ ರಾಮರಪಾದ ಎಂಬ ದೇಗುಲವಿದೆ.

ವನವಾಸ ಸಮಯದಲ್ಲಿ ಶ್ರೀರಾಮ ಒಂದು ದಿನ ಇಲ್ಲಿ ಬಂದು ತಂಗಿದ್ದು, ಹೊರಡುವ ವೇಳೆ ಎದುರಾದ 'ತಲ' ಎಂಬ ರಾಕ್ಷಸನನ್ನು ಸಂಹರಿಸಲು ಹೂಡಿದ ಬಾಣ ಆತನ ತಲೆಯನ್ನು ಹಾದು ಹೋಗುವಾಗ ಅಡ್ಡ ಸಿಕ್ಕ ಬೆಟ್ಟವನ್ನು ಸೀಳಿದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ. ಪುರಾಣದಲ್ಲಿ ಉಲ್ಲೇಖವಾದಂತೆ ಇಲ್ಲಿನ ಬೆಟ್ಟದ ಮಧ್ಯದ ಭಾಗ ಕತ್ತರಿಸಿದಂತಿದೆ. ಬಿಲ್ಲು ಹೂಡುವಾಗ ನೆಲಕ್ಕೆ ಮಂಡಿಯೂರಿದ ಕುರುಹಾಗಿ ಇಂದಿಗೂ ಅಲ್ಲಿ ಕಪ್ಪು ಶಿಲೆಯೊಂದರಲ್ಲಿ ಕುಳಿ ಬಿದ್ದಿದೆ. ಈ ಕುಳಿಯನ್ನು ರಾಮನ ಪಾದವೆಂದು ನಿತ್ಯ ಅಗ್ರಪೂಜೆ ಸಲ್ಲಿಸಲಾಗುತ್ತದೆ.
ಶನಿವಾರ ಮತ್ತು ವಿಶೇಷ ದಿನಗಳಲ್ಲಿ ಇಲ್ಲಿ ಪೂಜೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ರಾಮ ಭಕ್ತರು ಆಗಮಿಸುತ್ತಾರೆ. ವಿಶೇಷವೆಂದರೆ, ರಾಮ-ಸೀತೆಯ ಪ್ರತಿಮೆಗೆ ಪೂಜೆ ಸಲ್ಲಿಸಿ ಕಾರ್ಯ ಸಿದ್ದಿಗಾಗಿ ಬೇಡಿದರೆ ಆತ ಇಷ್ಟಾರ್ಥ ಸಿದ್ಧಿಸುತ್ತಾನೆ ಎನ್ನುವುದು ನಂಬಿಕೆ. ಮಕ್ಕಳಾಗದೆ ಇರುವವರು ಕೂಡ ಇಲ್ಲಿಗೆ ಬಂದು ಸಂತಾನ ಭಾಗ್ಯಕ್ಕಾಗಿ ಬೇಡಿಕೊಳ್ಳುತ್ತಾರೆ ಎನ್ನುತ್ತಾರೆ ಭಕ್ತರು.
ದಶರಥನಿಗೆ ಪಿಂಡ ಪ್ರಧಾನ ಮಾಡಿದ ಪುತ್ರರು: ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಸಮೀಪದ ಪಟ್ಟಶೆಟ್ಟಿ ದೊಡ್ಡಿ ಸಮೀಪದಲ್ಲಿ ಗವಿರಾಯಸ್ವಾಮಿ ಎಂಬ ಕ್ಷೇತ್ರವಿದ್ದು, ಶ್ರೀರಾಮ ಹಾಗೂ ಲಕ್ಷ್ಮಣ ಇಲ್ಲಿ ಬೇಟಿ ಕೊಟ್ಟಿದ್ದರು ಎಂಬ ನಂಬಿಕೆ ಇದೆ. ಶ್ರೀರಾಮನು ವನವಾಸದ ಸಂದರ್ಭದಲ್ಲಿ ತಂದೆ ದಶರಥ ಮಹಾರಾಜರಿಗೆ ಪಿಂಡ ಪ್ರಧಾನಕ್ಕೆ ಆಯ್ಕೆ ಮಾಡಿಕೊಂಡು ಪಿಂಡಪ್ರಧಾನ ಮಾಡಿದ ಕ್ಷೇತ್ರವೆಂಬ ಹೆಗ್ಗಳಿಕೆ ಇದೆ.
ರಾಮ, ಲಕ್ಷ್ಮಣರು ವನವಾಸ ಮುಗಿಸಿ ಬರುವ ವೇಳೆ ತಮ್ಮ ತಂದೆಯವರಿಗಾಗಿ ಪಿಂಡ ಪ್ರಧಾನಕ್ಕಾಗಿ ಈ ಕ್ಷೇತ್ರ ಆಯ್ಕೆ ಮಾಡಿಕೊಂಡರೆಂಬ ನಂಬಿಕೆ ಇದೆ. ಲಕ್ಷ್ಮಣ ಬಿಲ್ಲು ಬಾಣವನ್ನು ಸೇತುವೆ ಸಮೀಪ ಬಂದು ಕೆಳಗಿಟ್ಟ ವೇಳೆ ಇದನ್ನು ಗಮನಿಸಿ ಅಚ್ಚರಿಗೊಂಡ ಶ್ರೀರಾಮ ಇಲ್ಲಿನ ಮಣ್ಣಿಗೆ ನಮಸ್ಕರಿಸಿ ಪರೀಕ್ಷಿಸಿದ ವೇಳೆ ಇಲ್ಲಿ ವಿಶೇಷ ಶಕ್ತಿಯಿದೆ. ಇಲ್ಲಿ ದಹನ ಮಾಡುವ ವೇಳೆ ತಲೆ ಹೋಳಾಗುವ ಪದ್ದತಿಯಿದೆ ಎಂದು ತಿಳಿದು ರಂಗನಾಥಸ್ವಾಮಿಯ ಗುಡ್ಡದ ಸಮೀಪ ಮೂರು ಕಡೆಗಳಲ್ಲಿ ಪಿಂಡ ಪ್ರದಾನ ಮಾಡುತ್ತಾರೆ.
ಪಿಂಡ ಪ್ರಧಾನ ಮಾಡಿದ ಸ್ಥಳವನ್ನು ಪ್ರೇತ ಪವ೯ತ ಎನ್ನಲಾಗುತ್ತಿದ್ದು, ಕ್ರಮೇಣ ಇದು ರಾಮ ಪಿಂಡ ಪ್ರದಾನ ಮಾಡಿದ ರಾಮಕ್ಷೇತ್ರ ಎಂಬ ಖ್ಯಾತಿಗೆ ಒಳಗಾಗಿದೆ.
ಬಿಳಿಗಿರಿ ಬನವೇ ಗಜಾರಣ್ಯ, ಚಂಪಕಾರಣ್ಯ: ಪುರಾಣಗಳಲ್ಲಿ ಮತ್ತು ರಾಮಾಯಣದಲ್ಲಿ ಉಲ್ಲೇಖವಾಗುವ ಗಜಾರಣ್ಯ ಮತ್ತು ಚಂಪಕಾರಣ್ಯ ಎಂಬುದು ಬಿಳಿಗಿರಿರಂಗನಾಥ ಅರಣ್ಯ ಪ್ರದೇಶ ಎನ್ನಲಾಗಿದ್ದು, ಸೀತೆಯನ್ನು ಅರಸುತ್ತ ಶ್ರೀರಾಮ, ಲಕ್ಷಣರು ಈ ಅರಣ್ಯದ ಮೂಲಕವೇ ಹಾದುಹೋದರು ಎಂಬ ನಂಬಿಕೆ ಇದೆ. ದೊಡ್ಡಸಂಪಿಗೆ ಮರದ ಬಳಿ ಹರಿಯುವ ಭಾರ್ಗವಿ ನದಿಯೂ ಕೂಡ ಪವಿತ್ರ ಜಲ ಎಂಬ ಭಾವನೆ ಇದೆ.
ಒಟ್ಟಿನಲ್ಲಿ ಲಂಕೆಯತ್ತ ಶ್ರೀರಾಮ ಪ್ರಯಾಣ ಮಾಡುವ ವೇಳೆ ಗಡಿಜಿಲ್ಲೆಯ ಹಲವು ಸ್ಥಳಗಳಿಗೆ ರಾಮನ ನಂಟಿದ್ದು, ಈಗಲೂ ಸಹಸ್ರಾರು ಭಕ್ತರು ತಮ್ಮ ಇಷ್ಟಾರ್ಥಗಳ ಸಿದ್ಧಿಗೆ ಈ ಸ್ಥಳಗಳಿಗೆ ಎಡತಾಕುತ್ತಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications