ಚಾಮರಾಜನಗರ: ಮನೆ ಕೊಡಿಸುವ ನೆಪದಲ್ಲಿ ಮಹಿಳೆಯ ಅತ್ಯಾಚಾರ, ವಿಡಿಯೋ ಮಾಡಿ ವಿಕೃತಿ ಮೆರೆದ ಗ್ರಾ.ಪಂ. ಅಧ್ಯಕ್ಷೆ ಮಗ
ಚಾಮರಾಜನಗರ, ಮೇ, 28: ಪಂಚಾಯಿತಿಯಿಂದ ಮನೆ ಕೊಡಿಸುವುದಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುತ್ರ ಅತ್ಯಾಚಾರ ಎಸಗಿ, ವೀಡಿಯೋ ಸೆರೆ ಹಿಡಿದ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.
ಇನ್ನು ಸಂಬಂಧ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುತ್ರ ವೈದೇಶ್, ಬಸಮ್ಮಣ್ಣಿ ಹಾಗೂ ಶಿವಮ್ಮಣ್ಣಿ ಎಂಬವರ ವಿರುದ್ಧ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

25 ವರ್ಷದ ವಿವಾಹಿತೆಯೊಬ್ಬಳು ಮನೆಗಾಗಿ ಅರ್ಜಿ ಸಲ್ಲಿಸಿದ್ದ ವೇಳೆ, ಮನೆ ಕಟ್ಟಿಕೊಡುವ ಆಸೆ ತೋರಿಸಿ ವೈದೇಶ್ ಆಕೆಯನ್ನು ಅತ್ಯಾಚಾರ ಎಸಗಿ, ಖಾಸಗಿ ಫೋಟೋ ಸೆರೆ ಹಿಡಿದಿದ್ದಾನೆ. ಅದಾದ ಬಳಿಕ, ಅದನ್ನು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿರುವುದಾಗಿ ಮಹಿಳೆ ದೂರು ಕೊಟ್ಟು ಮೂವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.ಸದ್ಯ, ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಮದ್ಯ ಕಳವು: ಶುಕ್ರವಾರ (ಮೇ 11) ತಡರಾತ್ರಿ ಸುಮಾರು 32,000 ರೂಪಾಯಿ ಬೆಲೆ ಬಾಳುವ ಮದ್ಯವನ್ನು ಕಳ್ಳನೋರ್ವ ಕಳವು ಮಾಡಿರುವ ಘಟನೆ ಹನೂರು ಪಟ್ಟಣದ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ನಡೆದಿದೆ.
ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಬಾರ್ ಹಿಂಭಾಗದ ಶೆಲ್ಟರ್ ಒಡೆದು ಒಳನುಗ್ಗಿರುವ ಕಳ್ಳ ಸಾವಿರಾರು ರೂಪಾಯಿ ಮೌಲ್ಯದ ವಿವಿಧ ಕಂಪನಿಯ ಮಧ್ಯವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾನೆ.
ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಕಳ್ಳತನ ದೂರು ದಾಖಲಾಗುತ್ತಿದ್ದಂತೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಿಹಾನ ಬೇಗಮ್ ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ ಆಗಮಿಸಿದ್ದ ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಿಸಿ ಟಿವಿಯಲ್ಲಿ ಯುವಕನೋರ್ವ ಓಡಾಡಿ ಬಾಕ್ಸ್ ಹೊತ್ತೊಯ್ಯುವುದು ಸೆರೆಯಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications