ಆಕ್ಸಿಜನ್ ದುರಂತ ಪ್ರಕರಣದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇಮಕ

ಬೆಂಗಳೂರು, ಮೇ 5: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಚಾಮರಾಜನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಕೊರೊನಾ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್‌, ದುರಂತದ ಕುರಿತು ಹೈಕೋರ್ಟ್​ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಪ್ರಕರಣದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಹೈಕೋರ್ಟ್‌ ಆದೇಶದ ಪ್ರಕಾರ, ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರ ಏಕಸದಸ್ಯ ಆಯೋಗದ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ತಿಳಿಸಿದೆ. ಅಲ್ಲದೆ, ಈ ಪ್ರಕರಣದ ಕುರಿತು ತನಿಖೆ ನಡೆಸಿ, ಒಂದು ತಿಂಗಳೊಳಗೆ ವರದಿ ನೀಡಲು ಸೂಚಿಸಲಾಗಿದೆ.

Retired High Court Judge To Probe Charamarajanagar Oxygen Tragedy Case

ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇಂದಿನ ಹೈಕೋರ್ಟ್​ ಆದೇಶ ಬಿಸಿ ತುಪ್ಪದಂತಾಗಿದೆ.

Retired High Court Judge To Probe Charamarajanagar Oxygen Tragedy Case

ಚಾಮರಾಜನಗರ ದುರಂತವನ್ನು ನ್ಯಾಯಾಂಗ ತನಿಖೆಗೆ ವಹಿಸಲು ವಿಪಕ್ಷಗಳು ಒತ್ತಾಯಿಸಿದಾಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದರು. ಅಲ್ಲದೆ ಐಎಎಸ್​ ಅಧಿಕಾರಿ ಶಿವಯೋಗಿ ಕಳಸದ್ ನೇತೃತ್ವದಲ್ಲಿ ಈ ಪ್ರಕರಣದ ವಿಚಾರಣೆಗೆ ಆದೇಶಿಸಿದ್ದರು. ಇದೀಗ ಹೈಕೋರ್ಟ್​ ಕೂಡ ನ್ಯಾಯಾಂಗ ತನಿಖೆಗೆ ಆದೇಶಿಸಿರುವುದು ರಾಜ್ಯ ಸರ್ಕಾರದ ನಿಲುವಿಗೆ ಹಿನ್ನಡೆ ಆದಂತಾಗಿದೆ.

Recommended Video

      ಭಾರತದ ವೈದ್ಯಕೀಯ ಮತ್ತು ಫಾರ್ಮಾ ಕ್ಷೇತ್ರಗಳ ಬಲವರ್ಧನೆಗೆ ವಿದೇಶಿ ಹೂಡಿಕೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+