ವಾಹನ ಸಂಚಾರಕ್ಕೆ ಅಡಚಣೆಯಾದ ರಸ್ತೆಯಲ್ಲಿನ ಒಕ್ಕಣೆ
ಚಾಮರಾಜನಗರ, ನವೆಂಬರ್ 29 : ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ರೈತರ ಅನುಕೂಲಕ್ಕಾಗಿ ಕಣಗಳನ್ನು ನಿರ್ಮಿಸಿಕೊಟ್ಟಿದ್ದರೂ ಕೂಡ ಬಹಳಷ್ಟು ಕಡೆಗಳಲ್ಲಿ ರಸ್ತೆಗಳಲ್ಲೇ ಒಕ್ಕಣೆ ಮಾಡುತ್ತಿರುವುದು ಇದೀಗ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಕಂಡು ಬರುತ್ತಿರುವ ದೃಶ್ಯವಾಗಿದೆ.
ಈಗಾಗಲೇ ರಸ್ತೆಯಲ್ಲಿ ಹುರುಳಿಯ ಒಕ್ಕಣೆ ಮಾಡುವುದರಿಂದ ಬಳ್ಳಿಗಳು ವಾಹನಗಳ ಚಕ್ರಕ್ಕೆ ಸಿಲುಕಿ ಅಪಾಯಗಳು ಸಂಭವಿಸಿದ್ದರೂ ಆ ಬಗ್ಗೆ ತಲೆಕೆಡಿಸಿಕೊಳ್ಳದೆ ಮುಂದುವರೆಸುತ್ತಿರುವುದರಿಂದ ಅದರ ಮೇಲೆಯೇ ವಾಹನವನ್ನು ಚಲಾಯಿಸಿಕೊಂಡು ಹೋಗುವುದು ಚಾಲಕರಿಗೆ ಅನಿವಾರ್ಯವಾಗಿದೆ.

ಈಗಾಗಲೇ ಹುರುಳಿ ಕಟಾವಿಗೆ ಬಂದಿರುವ ಕಾರಣ ಬಹುತೇಕ ಕಡೆಗಳಲ್ಲಿ ರೈತರು ಬಳ್ಳಿಯನ್ನು ಕಟಾವು ಮಾಡಿ ತಂದು ರಸ್ತೆಗೆ ಹಾಕುತ್ತಿದ್ದಾರೆ. ವಾಹನಗಳು ಅದರ ಮೇಲೆ ತೆರಳುವುದರಿಂದ ಒಕ್ಕಣೆಯಾಗುತ್ತಿದೆ. ಆ ನಂತರ ಬಳ್ಳಿಯನ್ನು ಬೇರ್ಪಡಿಸಿ ತೆಗೆದು ಹುರುಳಿ ಕಾಳುಗಳನ್ನು ಒಟ್ಟು ಸೇರಿಸಿ ಚೀಲಗಳಲ್ಲಿ ತುಂಬಿಸಿಕೊಂಡು ಹೋಗುತ್ತಾರೆ. ಇದೆಲ್ಲವೂ ರಸ್ತೆಯಲ್ಲಿಯೇ ನಡೆಯುವುದರಿಂದಾಗಿ ವಾಹನಗಳು ತೆರಳುವುದಕ್ಕೆ ಅನಾನುಕೂಲವಾಗುತ್ತಿದೆ.
ಕಳೆದ ಕೆಲವು ವರ್ಷಗಳಿಂದ ಈ ವ್ಯಾಪ್ತಿಯಲ್ಲಿ ಸರಿಯಾಗಿ ಮಳೆಯಾಗದೆ ಬರ ಕಾಣಿಸಿಕೊಂಡಿದ್ದರಿಂದ ರೈತರು ಯಾವುದೇ ಬೆಳೆಯನ್ನು ಬೆಳೆದಿರಲಿಲ್ಲ. ಆದರೆ ಈ ಬಾರಿ ಹಿಂಗಾರು ಮಳೆ ಸುರಿದ ಕಾರಣ ಬಹಳಷ್ಟು ರೈತರು ಹುರುಳಿ ಬೆಳೆಯನ್ನು ಬೆಳೆದಿದ್ದಾರೆ.
ಇದೀಗ ಅದು ಕಟಾವಿಗೆ ಬಂದಿರುವುದರಿಂದ ಕೆಲವರು ತಮ್ಮ ಕಣಗಳಲ್ಲಿ ಹಾಕಿ ಒಕ್ಕಣೆ ಮಾಡಿದರೆ ಒಂದಷ್ಟು ಮಂದಿಗೆ ರಸ್ತೆಗೆ ಹಾಕಿ ಒಕ್ಕಣೆ ಮಾಡುತ್ತಿದ್ದಾರೆ. ರಸ್ತೆಯಲ್ಲಿ ಒಕ್ಕಣೆ ಮಾಡಬಾರದು ಎಂಬ ಎಚ್ಚರಿಕೆ ನೀಡಿದ್ದರೂ ಅದನ್ನು ರೈತರು ಪಾಲಿಸದೆ ಇರುವುದರಿಂದ ರಸ್ತೆಯಲ್ಲಿ ಓಡಾಡುವ ವಾಹನಗಳಿಗೆ ತೊಂದರೆಯಾಗುತ್ತಿದೆ.

ಕೃಷಿ ಇಲಾಖೆಯು ಎಲ್ಲ ಗ್ರಾಮಗಳಲ್ಲಿಯೂ ಸಾಮೂಹಿಕ ಒಕ್ಕಣೆ ಕಣ ಹಾಗೂ ವೈಯುಕ್ತಿಕ ಕಣ ನಿರ್ಮಿಸಲು ಹೆಚ್ಚಿನ ಯೋಜನೆ ರೂಪಿಸದ ಪರಿಣಾಮವಾಗಿ ಒಕ್ಕಣೆ ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ತಮ್ಮ ಜಮೀನುಗಳಲ್ಲಿ ಕಣಗಳನ್ನು ನಿರ್ಮಿಸಿಕೊಳ್ಳಲು ಮುಂದಾಗದ ಬಹುತೇಕ ರೈತರು ತಮ್ಮ ಬೆಳೆಗಳನ್ನು ರಸ್ತೆಯ ನಡುವೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯಿಂದ ಹೊಂಗಹಳ್ಳಿವರೆಗೂ ಕಿರಿದಾದ ರಸ್ತೆಯ ಮೇಲೆಯೇ ಹುರುಳಿಬಳ್ಳಿ ಹರಡುತ್ತಿದ್ದು ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ಗಾಳಿಬಂದಾಗ ಕಾಳನ್ನು ರಸ್ತೆಯ ಬದಿಯಲ್ಲಿಯೇ ತೂರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಇನ್ನು ಲಘುವಾಹನಗಳ ಚಕ್ರಗಳಿಗೆ ಹುರುಳಿಯ ಬಳ್ಳಿಗಳು ಸುತ್ತಿಕೊಂಡು ವಾಹನಗಳು ನಿಂತುಕೊಳ್ಳುತ್ತಿವೆ. ಇನ್ನೊಂದೆಡೆ ದ್ವಿಚಕ್ರ ಸವಾರರು ಆಯತಪ್ಪಿ ಬಿದ್ದು ಪೆಟ್ಟು ಮಾಡಿಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ರೈತರಿಗೆ ಒಕ್ಕಣೆ ಮಾಡಲು ಬದಲಿ ವ್ಯವಸ್ಥೆ ಮಾಡಿಕೊಡುವ ಮೂಲಕ ರಸ್ತೆಯಲ್ಲಿ ನಡೆಸುವ ಒಕ್ಕಣೆಯನ್ನು ತಪ್ಪಿಸಬೇಕಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications