ಪುಂಡಾಟ ಮಾಡಿದ್ರೆ ಗಡಿಪಾರು ಗ್ಯಾರಂಟಿ; ಚಾಮರಾಜನಗರದಲ್ಲಿ ರೌಡಿಗಳಿಗೆ ಎಸ್ಪಿ ಖಡಕ್ ಎಚ್ಚರಿಕೆ
ಚಾಮರಾಜನಗರ, ಡಿಸೆಂಬರ್, 02: ಚಾಮರಾಜನಗರದ ಎಸ್ಪಿ ಕಚೇರಿಯಲ್ಲಿ ಭಾನುವಾರ (ಡಿಸೆಂಬರ್ 1) ಮಧ್ಯಾಹ್ನ 3 ಗಂಟೆಗೆ ರೌಡಿ ಪರೇಡ್ ನಡೆಸಲಾಯಿತು. ಈ ವೇಳೆ ಎಸ್ಪಿ ಡಾ. ಬಿ.ಟಿ.ಕವಿತಾ ಅವರು ಕೊಳ್ಳೇಗಾಲ ಮತ್ತು ಚಾಮರಾಜನಗರ ಉಪ ವಿಭಾಗದ ಠಾಣೆಗಳ ವ್ಯಾಪ್ತಿಯ 150ಕ್ಕೂ ಅಧಿಕ ಮಂದಿ ರೌಡಿಗಳ ವಿಚಾರಣೆ ನಡೆಸಿದರು.
ಸನ್ನಡತೆಯಿಂದ ಇದ್ದರೇ ರೌಡಿಶೀಟ್ನಿಂದ ತೆಗೆಯುತ್ತೇವೆ. ಪುಂಡಾಟ ಬಿಡಬೇಕು, ಇಲ್ಲದಿದ್ದರೇ ಗಡಿಪಾರು ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಸೂಚಿಸಿದ ದಿನದಂದು ಬಂದು ಸಹಿ ಮಾಡಬೇಕು, ಪದೇಪದೇ ಗೈರಾಗುತ್ತಿದ್ದರೇ ರೌಡಿಶೀಟ್ನಿಂದ ತೆಗೆಯುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.
ಇಬ್ಬರ ಬಂಧನ: ಅಕ್ರಮವಾಗಿ ಕೇರಳ ಲಾಟರಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ನಲ್ಲಿ ನಡೆದಿದೆ. ಹಾಗಾದರೆ ಎಷ್ಟು ಲಾಟರಿಗಳು ಹಾಗೂ ಇದರ ಮೌಲ್ಯ ಎಷ್ಟು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ನಿವಾಸಿ ವೆಂಕಟೇಶ್ ಹಾಗೂ ಹಂಗಳದ ನಾಗರಾಜು ಬಂಧಿತ ಆರೋಪಿಗಳು. ಕೇರಳದಿಂದ ಅಕ್ರಮವಾಗಿ ಲಾಟರಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಗುಂಡ್ಲುಪೇಟೆ ಪೊಲೀಸರು 2,14,610 ಮೌಲ್ಯದ 5,319 ಲಾಟರಿ ಟಿಕೆಟ್ಗಳು ಹಾಗೂ ಬಂಧಿತರ ಬಳಿಯಿದ್ದ 1,500 ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಇನ್ನೂ ಈ ಬಗ್ಗೆ ಇಬ್ಬರ ವಿರುದ್ಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಹಂದಿ ಮಾಂಸ ಸಂಗ್ರಹ: ತೋಟದ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸ ಶೇಖರಣೆ ಮಾಡಿದ್ದ ನಾಲ್ವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹಾಗಾದರೆ ಈ ಘಟನೆ ನಡೆದಿದ್ದು ಎಲ್ಲಿ ಹಾಗೂ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ತಮಿಳುನಾಡು ಮೂಲದ ಕಾರ್ತಿಕ್ ಪೆರುಮಾಳ್, ತಂಗರಾಜು ಪೆರುಮಾಳ್, ಮಾದೈಯನ್ ಪಳನಿ, ಗೋಪಿನಾಥಂ ಗ್ರಾಮದ ತಂಗರಾಜು ಬಂಧಿತ ಆರೋಪಿಗಳಾಗಿದ್ದಾರೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಉಪ ವಿಭಾಗದ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಅರಣ್ಯ ಅಧಿಕಾರಿ ಕಾಂತರಾಜು ಎಸ್.ಚೌಹಾಣ್ ಹಾಗೂ ಸಿಬ್ಬಂದಿ ಗಸ್ತಿನಲ್ಲಿದ್ದರು. ಈ ವೇಳೆ ಪೊನ್ನಾಚಿ ಗ್ರಾಮದ ಪಿ.ಕೆ.ಬಸವರಾಜು ಅವರ ತೋಟದ ಮನೆಯಲ್ಲಿ ಕಾಡು ಹಂದಿಯನ್ನು ಬೇಟೆಯಾಡಿ ಮಾಂಸ ಕತ್ತರಿಸಿ ಸಂಗ್ರಹಿಸಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮಲೆ ಮಹದೇಶ್ವರ ವನ್ಯಜೀವಿ ಉಪ ವಿಭಾಗದ ಎಸಿಎಫ್ ಶಿವರಾಮು ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳು ಹಾಗೂ ಹಂದಿ ಮಾಂಸವನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications