ಮಲೆಮಹದೇಶ್ವರ ಬೆಟ್ಟದಲ್ಲಿ 27 ದಿನಕ್ಕೆ 1.70 ಕೋಟಿ ರೂ. ಸಂಗ್ರಹ!
ಚಾಮರಾಜನಗರ, ಜುಲೈ 15: ರಾಜ್ಯದ ಪ್ರಮುಖ ಮತ್ತು ಹೆಚ್ಚು ಆದಾಯ ಹೊಂದಿರುವ ದೇವಾಲಯಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೋಟ್ಯಂತರ ರೂ ನಗದು, ಕೆ.ಜಿಗಟ್ಟಲೇ ಬೆಳ್ಳಿ ಸಂಗ್ರಹವಾಗಿದೆ.
ಗುರುವಾರ ಬೆಳಗ್ಗೆಯಿಂದ ಸಂಜೆವರೆಗೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಕೇವಲ 27 ದಿನಗಳಲ್ಲಿ 1,70,65,814 ರೂ. ಸಂಗ್ರಹವಾಗಿದೆ. ಇದರಲ್ಲಿ ನಾಣ್ಯಗಳೇ 9 ಲಕ್ಷದಷ್ಟಿದೆ. ಇದರೊಂದಿಗೆ 80 ಗ್ರಾಂ ಚಿನ್ನ ಹಾಗೂ 1.4 ಕೆಜಿ ಬೆಳ್ಳಿಯನ್ನು ಏಳುಮಲೆ ಒಡೆಯನಿಗೆ ಭಕ್ತರು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದಾರೆ.
ಮಲೆಮಹದೇಶ್ವರ ಬೆಟ್ಟದಲ್ಲಿ ವಿವಿಧ ಸೇವೆ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ವಾರಾಂತ್ಯ ಮತ್ತು ಸೋಮವಾರದಂದು ಭಕ್ತರ ದಂಡೇ ಹರಿದು ಬಂದು ಕೇವಲ ಚಿನ್ನದ ರಥ, ಲಡ್ಡು ಮಾರಾಟ ಹಾಗೂ ಇತರ ಸೇವೆಗಳಿಂದಲೇ ದಿನವೊಂದಕ್ಕೆ ಲಕ್ಷಾಂತರ ರೂ. ಹೆಚ್ಚು ಆದಾಯ ಬರುತ್ತಿದೆ.

ಹುಂಡಿ ಎಣಿಕೆ ವೇಳೆ ಹಣ ಕದ್ದ ಆರೋಪ
ಇನ್ನು ಹುಂಡಿ ಎಣಿಕೆಯ ವೇಳೆ ಹಣ ಕದ್ದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ನಿವಾಸಿಯಾದ ಪುದೂರು ಗ್ರಾಮದ ಪನೀರ್ ಸೆಲ್ವಂ ಬಂಧಿತ ಆರೋಪಿ. ಈತ ಪ್ರಾಧಿಕಾರದ ಡಿ ಗ್ರೂಪ್ ನೌಕರನೆಂದು ತಿಳಿದುಬಂದಿದೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನೌಕರರು ಭಾಗವಹಿಸಿದ್ದು, ಇದರಲ್ಲಿ ಪನೀರ್ ಸೆಲ್ವಂ ಕೂಡ ಇದ್ದನು. ಎಣಿಕೆಯ ವೇಳೆ ಸಂಗ್ರಹವಾದ ಹಣವನ್ನು ಜೋಡಿಸಿ ಟೇಬಲ್ನಲ್ಲಿ ಇಡಲಾಗಿತ್ತು. ಆದರೆ ಎಣಿಕೆ ಕಾರ್ಯದಲ್ಲಿ ಪನೀರ್ ಸೆಲ್ವಂನ ವರ್ತನೆಯ ಮೇಲೆ ಅನುಮಾನ ವ್ಯಕ್ತವಾಯಿತು. ಈ ಬಗ್ಗೆ ಆತನನ್ನು ಪರಿಶೀಲಿಸಿದಾಗ ಜೇಬಿನಲ್ಲಿ 500ರೂನ 80 ನೋಟುಗಳುಳ್ಳ 40 ಸಾವಿರ ರೂ ಇತ್ತು. ಈ ಬಗ್ಗೆ ಅಧಿಕಾರಿಗಳು ವಿಚಾರಿಸಲಾಗಿ ಆತ ಎಟಿಎಂನಿಂದ 20 ಸಾವಿರ ರೂ ಹಾಗೂ ಬೇರೆ ವ್ಯಕ್ತಿಯಿಂದ 20 ಸಾವಿರ ರೂ ಪಡೆದಿರುವುದಾಗಿ ತಿಳಿಸಿದ್ದಾನೆ.

ಆದರೆ, ಹುಂಡಿ ಎಣಿಕೆಯಲ್ಲಿ ಭಾಗವಹಿಸುವವರು ಹಣವನ್ನು ಹೊಂದುವಂತಿಲ್ಲ ಎಂಬ ನಿಯಮವಿದೆ. ಹಾಗಿದ್ದರೂ ಹಣವನ್ನು ಹೊಂದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದ್ದರಿಂದ ಪ್ರಾಧಿಕಾರದ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಆತನನ್ನ ಬಂಧಿಸಲಾಗಿದೆ. ಈ ಸಂಬಂಧ ಮಲೆಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications