36 ದಿನಗಳಲ್ಲಿ ಮಲೆ ಮಾದಪ್ಪನಿಗೆ ಹರಿದುಬಂತು 1.73 ಕೋಟಿ ಹಣ
ಚಾಮರಾಜನಗರ, ಸೆಪ್ಟೆಂಬರ್ 28: ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಮಾದಪ್ಪನ ಸನ್ನಿದಿಯಲ್ಲಿ ಕೇವಲ 36 ದಿನಗಳಲ್ಲಿ 1.73 ಕೋಟಿ ರೂ. ಸಂಗ್ರಹವಾಗಿದೆ.
ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಎಡಿಸಿ ಆಗಿರುವ ಕಾತ್ಯಾಯಿನಿದೇವಿ ಮೇಲ್ವಿಚಾರಣೆಯಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ 1,73,56,691 ರೂ.ಗಳನ್ನು ಅರ್ಪಿಸಿದ್ದು ನಗದು ಹಣದ ಪೈಕಿ 10 ಲಕ್ಷ ರೂ.ಗೂ ಹೆಚ್ಚು ಹಣ ನಾಣ್ಯಗಳ ರೂಪದಲ್ಲೇ ಕಾಣಿಕೆ ಸಲ್ಲಿಸಿದ್ದಾರೆ. ಇನ್ನು, ಹಣದ ಜೊತೆಗೆ 56 ಗ್ರಾಂ ಚಿನ್ನ, 2.1 ಕೆಜಿ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಮಲೆ ಮಹದೇಶ್ವರನಿಗೆ ಭಕ್ತರು ಅರ್ಪಿಸಿದ್ದಾರೆ.
ಅಪಾರ ಭಕ್ತರ ಸಮೂಹ ಹೊಂದಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾರ್ಚ್ನಲ್ಲಿ 2.83 ಕೋಟಿ ರೂ, 3.8 ಕೆಜಿ ಬೆಳ್ಳಿ, 70 ಗ್ರಾಂ ಚಿನ್ನ ಸಂಗ್ರಹವಾಗಿತ್ತು. ಏಪ್ರಿಲ್ನಲ್ಲಿ 28 ದಿನಗಳಲ್ಲಿ 2.13 ಕೋಟಿ ರೂ ನಗದು, 45 ಗ್ರಾಂ ಚಿನ್ನ, 1.9 ಕೆಜಿ ಬೆಳ್ಳಿ, ಜೂನ್ನಲ್ಲಿ 35 ದಿನಗಳಲ್ಲಿ 2 ಕೋಟಿ ರೂ ನಗದು, ಆಗಸ್ಟ್ನಲ್ಲಿ 2 ಕೋಟಿ ರೂ ಹಾಗೂ 50 ಗ್ರಾಮ್ ಚಿನ್ನ 2.3 ಕೆಜಿ ಬೆಳ್ಳಿ ಸಂಗ್ರಹವಾಗಿತ್ತು.

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ
ಅಪಘಾತದಲ್ಲಿ ಮೃತಪಟ್ಟ ಮಗನ ಕಣ್ಣುಗಳನ್ನು ದಾನ ಮಾಡುವ ಮೂಲಕ ಯುವಕನ ಕೊನೆ ಬಯಕೆ ಈಡೇರಿಸಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ
ಚಂದ್ರಶೇಖರ್ (21) ಮೃತ ದುರ್ದೈವಿ. ಹನೂರು ತಾಲ್ಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿಯಾಗಿರುವ ನಂಜುಂಡಸ್ವಾಮಿ ಅವರ ಪುತ್ರ ಚಂದ್ರಶೇಖರ್ ಡಿಪ್ಲೋಮಾ ಮುಗಿಸಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ಮೈಸೂರಿನಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚೆರಣೆಗೆ ಹೋಗಿ ಹಿಂದಿರುಗುವ ಸಮಯದಲ್ಲಿ ನಡೆದ ಅಪಘಾತದಲ್ಲಿ ಚಂದ್ರಶೇಖರ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರೇಶೇಖರ್ ಮೃತಪಟ್ಟಿದ್ದರಿಂದ ಕುಟುಂಬಸ್ಥರು ಲಯನ್ಸ್ ಕಣ್ಣಿನ ಆಸ್ಪತ್ರೆಗೆ ನೇತ್ರದಾನ ಮಾಡಿದ್ದಾರೆ.
ಮನೆ ಮಗನ ಸಾವಿನ ನೋವಿನಲ್ಲೂ ಮತ್ತೊಬ್ಬರ ಬಾಳಿಗೆ ಬೆಳಕಾಗುವ ನಿರ್ಧಾರ ತೆಗೆದುಕೊಂಡ ಕುಟುಂಬಸ್ಥರಿಗೆ ಪ್ರಶಂಸೆಯ ಪೂರವೇ ಹರಿದು ಬಂದಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications