ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್: ಹೇಳಿದ್ಯಾರು?
ಚಾಮರಾಜನಗರ, ಏಪ್ರಿಲ್, 19: ಕರ್ನಾಟಕಕ್ಕೆ ಮೋದಿ ಕೊಟ್ಟ ಕೊಡುಗೆ ಚೊಂಬು ಎಂಬ ಕಾಂಗ್ರೆಸ್ ಜಾಹಿರಾತಿಗೆ ರಾಜ್ಯದ ಬಿಜೆಪಿ ನಾಯಕರು ಆಕ್ರೊಶ ಹೊರಹಾಕಿದ್ದಾರೆ. ಇದೀಗ ಕಾಂಗ್ರೆಸ್ ಸರ್ಕಾರವೇ ಚೊಂಬುಗಳ ಸರ್ಕಾರ ಎಂದು ಎಸ್. ಸುರೇಶ್ ಕುಮಾರ್ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಚೊಂಬಿನ ಜಾಹಿರಾತು ಸಂಬಂಧ ಚಾಮರಾಜನಗರದಲ್ಲಿ ಮಾಧ್ಯಮವರೊಂದಿಗೆ ಅವರು ಮಾತನಾಡಿ, ಸಿಎಂ ಗೆ ಚೊಂಬು ಕೊಡಲು ಡಿಸಿಎಂ ಕಾಯುತ್ತಿದ್ದಾರೆ. ಡಿಸಿಎಂಗೆ ಚೊಂಬು ಕೊಡಲು ಸಿಎಂ ಕಾಯುತ್ತಿದ್ದಾರೆ. ಇವರಿಬ್ಬರಿಗೂ ಚೊಂಬು ಕೊಡಲು ಜನ ಕಾಯುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು.

ಚೊಂಬುಗಳ ಸರ್ಕಾರ ಎಂದರೆ ಅದು ಕಾಂಗ್ರೆಸ್, ಕಳೆದ 10 ತಿಂಗಳುಗಳಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹಣವನ್ನು ಬಿಡುಗಡೆ ಮಾಡದಿರುವುದು ನಾಗರಿಕರಿಗೆ ನೀವು ಕೊಟ್ಟಿರುವ ಚೊಂಬು ಅಲ್ಲವೇ? ನಿರುದ್ಯೋಗಿ ಯುವಕರಿಗೆ 2,000 ರೂಪಾಯಿ ಕೊಡುತ್ತೇವೆಂದು ಭರವಸೆ ನೀಡಿ ಮತ ಪಡೆದು ಕಳೆದ 10 ತಿಂಗಳಲ್ಲಿ ಒಬ್ಬರಿಗೂ ನಿರುದ್ಯೋಗ ಭತ್ಯೆ ನೀಡದೆ ಚೊಂಬು ನೀಡಿರುವುದು ನೀವಲ್ಲವೇ? ಎಂದು ಪ್ರಶ್ನಿಸುವ ಮೂಲಕ ವಾಗ್ದಾಳಿ ನಡೆಸಿದರು.
ಹಿಂದಿನ ಬಿಜೆಪಿ ಸರ್ಕಾರ ರಾಜ್ಯದ ಪ್ರತಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷಕ್ಕೆ 4,000 ರೂಪಾಯಿ ಪ್ರಧಾನಮಂತ್ರಿ ಕಿಸಾನ್ ಸನ್ಮಾನ ಯೋಜನೆಯಡಿ ನೀಡಿ ತನ್ನ ಕಾಳಜಿ ತೋರಿತ್ತು. ಏನೂ ಕಾರಣ ನೀಡದೆ ಅದನ್ನು ನಿಲ್ಲಿಸಿ ಈ ಅನ್ನದಾತರಿಗೆ ಚೊಂಬು ನೀಡಿರುವುದು ನೀವೇ ಅಲ್ಲವೇ? ಹೀಗೆ ದೇಶದ ಚೊಂಬುಗಳ ಸರದಾರ ನೀವೇ ಆಗಿರುವಾಗ ಬೇರೆಯವರಿಗೆ ಯಾಕೆ ಆ ಪ್ರಶಸ್ತಿ? ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದರು.
ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಅವರು, ಈ ಕೊಲೆ ನಿಜಕ್ಕೂ ದುರಂತದ ಘಟನೆ. ನಾನು ಸಿಸಿಟಿವಿಯನ್ನು ನೋಡಿದ್ದೇನೆ, ಚಾಕು ಇರಿದಾಗ ಈ ಹುಡುಗಿಯ ನೋವು ಹೇಗಿರಬಹುದು? ಅದನ್ನು ನೋಡಿದ ತಂದೆ ಮತ್ತು ತಾಯಿಗೆ ಹೇಗೆ ಸಂಕಟ ಅಗಿರಬಹುದು. ಈ ಬಗ್ಗೆ ಯಾವ ದಾಕ್ಷಿಣ್ಯ ಇಟ್ಟುಕೊಳ್ಳದೇ ಮುಕ್ತವಾಗಿ ವಿಚಾರಣೆ ನಡೆಸಬೇಕು, ಒಂದೊಂದು ಜೀವವೂ ಕೂಡ ಅಮೂಲ್ಯ. ಈ ರೀತಿಯ ದುರುಳರಿಗೆ ಕಠಿಣ ಶಿಕ್ಷೆಯಾಗಬೇಕು, ಸರ್ಕಾರ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಅಭ್ಯರ್ಥಿ ಬಾಲರಾಜ್ಗೆ ಇಲ್ಲಿ ಒಳ್ಳೆ ಬೆಂಬಲ ಇದೆ. ಬಾಲರಾಜ್ ಓರ್ವ ಸರಳ ಮತ್ತು ಸಜ್ಜನ ರಾಜಕಾರಣಿ. ಅತೀ ಹೆಚ್ಚಿನ ಮತಗಳ ಅಂತರದಲ್ಲಿ ಬಿಜೆಪಿ ಗೆಲ್ಲುವುದು ಖಚಿತ. ಮೋದಿ ಆಡಳಿತವನ್ನು ಜನ ಬಯಸಿದ್ದಾರೆ. ಹಾಗಾಗಿ ಈ ಬಾರಿಯು ಬಾಲರಾಜ್ ಗೆಲುವು ದಾಖಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications