ಸುಳ್ವಾಡಿ ವಿಷ ಪ್ರಸಾದ ದುರಂತ: ಇಮ್ಮಡಿ ಮಹದೇವಸ್ವಾಮಿಗೆ ಮಠದಿಂದ ಕೊಕ್?
ಚಾಮರಾಜನಗರ, ಆಗಸ್ಟ್ 30: ಸುಳ್ವಾಡಿ ವಿಷ ಪ್ರಸಾದ ದುರಂತದಲ್ಲಿ ಜೈಲುಪಾಲಾದ ಮಹದೇಶ್ವರ ಬೆಟ್ಟದ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹಾದೇವಸ್ವಾಮಿ ಜಾಗಕ್ಕೆ ಬೇರೆಯವರನ್ನು ನಿಯೋಜಿಸುವ ಸಂಬಂಧ ಮಠದಲ್ಲಿ ಚರ್ಚೆ ನಡೆದಿದೆ.
ಮಠದ ಹಿರಿಯ ಸ್ವಾಮೀಜಿ ಗುರುಸ್ವಾಮಿ ಅವರಿಗೆ ವಯಸ್ಸಾದ ಕಾರಣ ಹಾಗೂ ಅನಾರೋಗ್ಯಕ್ಕೆ ತುತ್ತಾದ ಹಿನ್ನೆಲೆ ಸಾಲೂರು ಬೃಹನ್ಮಠದಲ್ಲಿ ಪೂಜಾ ಕೈಂಕರ್ಯ ನಿರ್ವಹಣೆಗಾಗಿ ಸ್ವಾಮೀಜಿಯನ್ನು ನಿಯೋಜಿಸಬೇಕು ಎಂಬ ಮಾತು ಕೇಳಿ ಬಂದಿದೆ. ಈ ವಿಚಾರವಾಗಿ ಗುಂಡೇಗಾಲ ಮಠದಲ್ಲಿ ಪೂರ್ವಭಾವಿ ಸಭೆ ನಡೆದು ಉತ್ತರಾಧಿಕಾರಿ ನಿಯೋಜಿಸುವ ಬಗ್ಗೆ ತೀರ್ಮಾನ ಸಹ ಕೈಗೊಂಡಿರುವುದಾಗಿ ತಿಳಿದುಬಂದಿದೆ.

ಸಾಲೂರು ಮಠದಲ್ಲಿ ಲಿಂಗಾಯತ ಸಮುದಾಯದ ಮುಖಂಡರು, ಭಕ್ತರು ಹಾಗೂ ಬೇಡಗಂಪಣ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಸಭೆ ನಡೆದಿದ್ದು, ಇಮ್ಮಡಿ ಮಹಾದೇವ ಸ್ವಾಮೀಜಿ ವಿಷ ಪ್ರಸಾದದ ದುರಂತದ ಪ್ರಮುಖ ಆರೋಪಿಯಾಗಿ ಜೈಲುವಾಸದಲ್ಲಿರುವುದರಿಂದ ಮಠದ ಧಾರ್ಮಿಕ ಕಾರ್ಯಕ್ಕೆ ಅನರ್ಹರಾಗಿರುತ್ತಾರೆ. ಹಾಗಾಗಿ ಮಠದ ಎಲ್ಲ ಜವಾಬ್ದಾರಿಗಳನ್ನು ಅವರಿಂದ ಬಿಡುಗಡೆಗೊಳಿಸಬೇಕು, ಮಠದ ಧಾರ್ಮಿಕ ಕಾರ್ಯಗಳನ್ನು ನಡೆಸಲು ಇಬ್ಬರ ಬದಲಾಗಿ ಒಬ್ಬ ಸ್ವಾಮೀಜಿಯನ್ನು ನೇಮಿಸಬೇಕೆಂಬ ನಿರ್ಣಯವನ್ನೂ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಮೂಲಕ ಇಮ್ಮಡಿ ಮಹದೇವಸ್ವಾಮಿಗೆ ಮಠದಿಂದ ಕೋಕ್ ನೀಡಿರುವುದಾಗಿ ತಿಳಿದುಬಂದಿದೆ.
-
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications