ಸುಳ್ವಾಡಿ ವಿಷ ಪ್ರಸಾದ ದುರಂತ: ಇಮ್ಮಡಿ ಮಹದೇವಸ್ವಾಮಿಗೆ ಮಠದಿಂದ ಕೊಕ್?

ಚಾಮರಾಜನಗರ, ಆಗಸ್ಟ್ 30: ಸುಳ್ವಾಡಿ ವಿಷ ಪ್ರಸಾದ ದುರಂತದಲ್ಲಿ ಜೈಲುಪಾಲಾದ ಮಹದೇಶ್ವರ ಬೆಟ್ಟದ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹಾದೇವಸ್ವಾಮಿ ಜಾಗಕ್ಕೆ ಬೇರೆಯವರನ್ನು ನಿಯೋಜಿಸುವ ಸಂಬಂಧ ಮಠದಲ್ಲಿ ಚರ್ಚೆ ನಡೆದಿದೆ.

ಮಠದ ಹಿರಿಯ ಸ್ವಾಮೀಜಿ ಗುರುಸ್ವಾಮಿ ಅವರಿಗೆ ವಯಸ್ಸಾದ ಕಾರಣ ಹಾಗೂ ಅನಾರೋಗ್ಯಕ್ಕೆ ತುತ್ತಾದ ಹಿನ್ನೆಲೆ ಸಾಲೂರು ಬೃಹನ್ಮಠದಲ್ಲಿ ಪೂಜಾ ಕೈಂಕರ್ಯ ನಿರ್ವಹಣೆಗಾಗಿ ಸ್ವಾಮೀಜಿಯನ್ನು ನಿಯೋಜಿಸಬೇಕು ಎಂಬ ಮಾತು ಕೇಳಿ ಬಂದಿದೆ. ಈ ವಿಚಾರವಾಗಿ ಗುಂಡೇಗಾಲ ಮಠದಲ್ಲಿ ಪೂರ್ವಭಾವಿ ಸಭೆ ನಡೆದು ಉತ್ತರಾಧಿಕಾರಿ ನಿಯೋಜಿಸುವ ಬಗ್ಗೆ ತೀರ್ಮಾನ ಸಹ ಕೈಗೊಂಡಿರುವುದಾಗಿ ತಿಳಿದುಬಂದಿದೆ.

Salur mutt devotees are decided to kick out Immadi mahadevswami from seer place

ಸಾಲೂರು ಮಠದಲ್ಲಿ ಲಿಂಗಾಯತ ಸಮುದಾಯದ ಮುಖಂಡರು, ಭಕ್ತರು ಹಾಗೂ ಬೇಡಗಂಪಣ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಸಭೆ ನಡೆದಿದ್ದು, ಇಮ್ಮಡಿ ಮಹಾದೇವ ಸ್ವಾಮೀಜಿ ವಿಷ ಪ್ರಸಾದದ ದುರಂತದ ಪ್ರಮುಖ ಆರೋಪಿಯಾಗಿ ಜೈಲುವಾಸದಲ್ಲಿರುವುದರಿಂದ ಮಠದ ಧಾರ್ಮಿಕ ಕಾರ್ಯಕ್ಕೆ ಅನರ್ಹರಾಗಿರುತ್ತಾರೆ. ಹಾಗಾಗಿ ಮಠದ ಎಲ್ಲ ಜವಾಬ್ದಾರಿಗಳನ್ನು ಅವರಿಂದ ಬಿಡುಗಡೆಗೊಳಿಸಬೇಕು, ಮಠದ ಧಾರ್ಮಿಕ ಕಾರ್ಯಗಳನ್ನು ನಡೆಸಲು ಇಬ್ಬರ ಬದಲಾಗಿ ಒಬ್ಬ ಸ್ವಾಮೀಜಿಯನ್ನು ನೇಮಿಸಬೇಕೆಂಬ ನಿರ್ಣಯವನ್ನೂ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಮೂಲಕ ಇಮ್ಮಡಿ ಮಹದೇವಸ್ವಾಮಿಗೆ ಮಠದಿಂದ ಕೋಕ್ ನೀಡಿರುವುದಾಗಿ ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+