ಮಹದೇಶ್ವರ ಬೆಟ್ಟದ ಸಾಲೂರು ಮಠದಲ್ಲಿ ಮತ್ತೆ ಭುಗಿಲೆದ್ದ ವಿವಾದ
ಚಾಮರಾಜನಗರ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲವನ್ನು ತಮ್ಮ ಸುಪರ್ಧಿಗೆ ಪಡೆಯುವ ಸಲುವಾಗಿ ಪ್ರಸಾದಕ್ಕೆ ವಿಷ ಬೆರೆಸಿ ಹಲವು ಭಕ್ತರ ಸಾವಿಗೆ ಕಾರಣವಾದ ಆರೋಪದಡಿ ಮಹದೇಶ್ವರಬೆಟ್ಟದ ಸಾಲೂರು ಮಠದ ಕಿರಿಯ ಇಮ್ಮಡಿ ಮಹದೇವಸ್ವಾಮಿ ಜೈಲ್ ಸೇರಿದ ಬಳಿಕ ಸಾಲೂರು ಮಠ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ.
ಇಷ್ಟಕ್ಕೂ ಮಹದೇಶ್ವರಬೆಟ್ಟದಲ್ಲಿರುವ ಸಾಲೂರು ಮಠಕ್ಕೆ ತನ್ನದೇ ಆದ ಇತಿಹಾಸ ಮತ್ತು ಪರಂಪರೆಯಿದೆ. ಆದರೆ ಕಿರಿಯ ಇಮ್ಮಡಿ ಮಹದೇವಸ್ವಾಮಿ ಅವರು ವಿಷ ಪ್ರಾಸನದಲ್ಲಿ ಆರೋಪಿಯಾಗಿ ಜೈಲ್ ಸೇರಿದ ಬಳಿಕ ಒಳ್ಳೆಯ ವಿಚಾರಕ್ಕಿಂತ ವಿವಾದಾತ್ಮಕ ವಿಚಾರಕ್ಕೆ ಹೆಚ್ಚು ಪ್ರಚಾರ ಪಡೆಯುತ್ತಿದೆ. ಈ ಹಿಂದೆ ಜೈಲ್ನಲ್ಲಿದ್ದುಕೊಂಡೇ ಇಮ್ಮಡಿ ಮಹದೇವಸ್ವಾಮಿ ಆಸ್ತಿಯನ್ನು ತನ್ನ ಹೆಸರಿನಲ್ಲಿ ಮಾಡಿಸಿಕೊಂಡ ವಿಷಯ ಬಹಿರಂಗವಾಗಿ ಭಾರೀ ಚರ್ಚೆಗೆ ಕಾರಣವಾಗಿತ್ತಲ್ಲದೆ, ಈ ಸಂಬಂಧ ಈ ಪ್ರಕರಣದಲ್ಲಿ ಶಾಮೀಲಾದ ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು.
ಜತೆಗೆ ಆಗಸ್ಟ್.೨೮ರಂದು ಮಠದಲ್ಲಿ ಹಿರಿಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಸುಳವಾಡಿ ವಿಷ ಪ್ರಸಾದ ದುರಂತದ ಪ್ರಮುಖ ಆರೋಪಿಯಾಗಿರುವ ಇಮ್ಮಡಿ ಮಹಾದೇವಸ್ವಾಮಿ ಅವರನ್ನು ಮಠದ ಸ್ವಾಮೀಜಿ ಸ್ಥಾನದಿಂದ ಉಚ್ಛಾಟಿಸಲಾಗಿತ್ತು. ಜತೆಗೆ ಮಠದ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಲಾಗಿತ್ತು.

ಆದರೆ ಇದೀಗ ಯಾರ ಗಮನಕ್ಕೂ ತಾರದೇ ಮಠದ ಹಿರಿಯ ಸ್ವಾಮೀಜಿ ಅವರು ತಮ್ಮ ಸಂಬಂಧಿಯನ್ನೇ ತನ್ನ ಉತ್ತರಾಧಿಕಾರಿ ಎಂದು ತೋರಿಸಿ, ಅವರ ಹೆಸರಿಗೆ ಮಠದ ಆಸ್ತಿಯನ್ನು ವಿಲ್ ಮಾಡಿದ್ದಾರೆ. ಈ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಕೆಲವು ಮಠದ ಭಕ್ತರು ಹಿರಿಯ ಸ್ವಾಮೀಜಿ ವಿರುದ್ಧವೇ ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ.
ಸಾಲೂರು ಮಠದ ವಿದ್ಯಾಸಂಸ್ಥೆಯಲ್ಲೇ ವಿದ್ಯಾರ್ಥಿಯಾಗಿದ್ದ ನಾಗೇಂದ್ರ ಎಂಬುವವರ ಹೆಸರಿಗೆ ಮೈಸೂರಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಕಳೆದ ಜು.೨೬ರಂದು ಹಿರಿಯ ಗುರು ಸ್ವಾಮೀಜಿ ಅವರು ವಿಲ್ ಮಾಡಿದ್ದಾರೆ. ವಿಲ್ನಲ್ಲಿ ತನಗೆ ವಯಸ್ಸಾಗಿದ್ದು, ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ತನ್ನ ಉತ್ತರಾಧಿಕಾರಿಯಾಗಿ ನಾಗೇಂದ್ರ ಅವರಿಗೆ ಪಟ್ಟ ಕಟ್ಟಬೇಕಾಗಿದೆ. ಆದ್ದರಿಂದ ಈಗಲೇ ಅವರ ಹೆಸರಿಗೆ ಮಠದ ಆಸ್ತಿಗಳನ್ನು ವಿಲ್ ಮಾಡಲಾಗುತ್ತಿದ್ದು, ನನ್ನ ನಂತರದಲ್ಲಿ ಮಠದ ಸರ್ವ ಆಸ್ತಿಗೂ ಅವರೇ ಹಕ್ಕುದಾರರಾಗಲಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಮಠದ ಧಾರ್ಮಿಕ ಅಧಿಕಾರ, ಚರ ಮತ್ತು ಸ್ಥಿರ ಆಸ್ತಿಗಳ ಅಧಿಕಾರ, ಮಲೆಮಹದೇಶ್ವರ ಶ್ರೀಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯತ್ವ ಎಲ್ಲವೂ ತನ್ನ ಉತ್ತರಾಧಿಕಾರಿ ನಾಗೇಂದ್ರ ಅವರಿಗೆ ಸೇರತಕ್ಕದ್ದು. ಒಂದು ವೇಳೆ ಉತ್ತರಾಧಿಕಾರಿಯನ್ನು ನೇಮಿಸುವ ಮುನ್ನವೇ ತಾವು ಶಿವೈಕ್ಯವಾದರೇ ಸುತ್ತೂರು ಶ್ರೀಯವರು ಮುಂದೆ ನಿಂತು ನಮ್ಮ ಉತ್ತರಾಧಿಕಾರಿಗೆ ಪಟ್ಟಾಧಿಕಾರವನ್ನು ವಹಿಸಿಕೊಡಬೇಕು ಎಂದು ವಿಲ್ನಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಮತ್ತೊಂದು ವಿಚಾರವನ್ನು ಸ್ಪಷ್ಟ ಪಡಿಸಲಾಗಿದೆ ಅದೇನೆಂದರೆ, ಮಠಕ್ಕೆ ಸೇರಿದ ಆಸ್ತಿಯನ್ನು ಪಟ್ಟಿ ಮಾಡಿ ತಾವು ಮೈಸೂರಿನಲ್ಲಿದ್ದುರಿಂದ ಮತ್ತು ಓಡಾಡಲು ತೊಂದರೆಯಾಗಿರುವ ಕಾರಣ ಮೈಸೂರಿನಲ್ಲಿ ವಿಲ್ ಮಾಡಿಸಿರುವುದಾಗಿ ಅವರು ದಾಖಲೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ ಎನ್ನಲಾಗಿದೆ.

ಆದರೆ ಉತ್ತರಾಧಿಕಾರಿ ಆಯ್ಕೆ ಸಮಿತಿಯನ್ನು ಸ್ವಾಮೀಜಿ ನೇತೃತ್ವದಲ್ಲೇ ರಚಿಸಲಾಗಿತ್ತು. ಆ ಸಮಿತಿಯಲ್ಲಿ ಹನೂರು ಕ್ಷೇತ್ರದ ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಕೊಳ್ಳೇಗಾಲದ ವೀರಶೈವ ಮುಖಂಡ ತೋಟೇಶ್, ವಕೀಲ ಶಶಿಬಿಂಬ, ಪೊನ್ನಾಚಿ ಮಹಾದೇವಸ್ವಾಮಿ, ಸೇರಿದಂತೆ ಹಲವು ಮುಖಂಡರಿದ್ದು, ಯಾರು ಉತ್ತರಾಧಿಕಾರಿಯಾಗಬೇಕು ಎಂಬುದು ಅಂತಿಮವಾಗಿರಲಿಲ್ಲ ಹೀಗಾಗಿ ಸಮಿತಿ ಮಠದ ಉತ್ತರಾಧಿಕಾರಿಯನ್ನು ಅಂತಿಮಗೊಳಿಸುವ ಮೊದಲೇ ಹಿರಿಯ ಗುರು ಸ್ವಾಮೀಜಿ ಅವರು ತಾವೇ ನಿರ್ಧಾರ ಕೈಗೊಂಡು ನಾಗೇಂದ್ರ ಎಂಬುವವರನ್ನು ಉತ್ತರಾಧಿಕಾರಿ ಎಂದು ಬಿಂಬಿಸಿ, ಯಾರ ಗಮನಕ್ಕೂ ತರದೆ ಆಸ್ತಿ ವಿಲ್ ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications