ಚಾಮರಾಜನಗರ: 450 ವರ್ಷಗಳ ಪುರಾತನ ದರ್ಗಾದಲ್ಲಿ ಗಂಧದ ಉರುಸ್ ಸಂಭ್ರಮ, ಎಲ್ಲಾ ಧರ್ಮಗಳ ಭಕ್ತರ ಆಗಮನ
ಚಾಮರಾಜನಗರ, ಸೆಪ್ಟೆಂಬರ್, 14:450 ವರ್ಷಗಳ ಪುರಾತನವಾದ ಸೂಫಿ ಸಂತರ ದರ್ಗಾದಲ್ಲಿ ಇಂದು ಮುಸ್ಲಿಂರು ಸಂಭ್ರಮದಿಂದ ಗಂಧದ ಉರುಸ್ ನಡೆಸಿದರು.
ಚಾಮರಾಜನಗರದ ರಾಮಸಮುದ್ರದ ಸಮೀಪದ ಕುನ್ನೀರುಕಟ್ಟೆತಯಲ್ಲಿರುವ ಹಜರತ್ ದಿಲ್ಬರ್ ಷಾ ಖಾದ್ರಿ ಅವರ ದರ್ಗಾದಲ್ಲಿ ಗಂಧದ ಉರುಸ್ ನಡೆಸಲಾಯಿತು. ತಮಿಳುನಾಡು, ಬೆಂಗಳೂರು ಸೇರಿದಂತೆ ದೂರದ ಊರುಗಳಿಂದಲೂ ಇಲ್ಲಿ ಭಕ್ತರು ಬಂದು ಹರಕೆ ತೀರಿಸಿದರು.

ಸುಮಾರು 450 ವರ್ಷಗಳ ಇತಿಹಾಸವಿರುವ ಈ ದರ್ಗಾದಲ್ಲಿ ಏನೆ ಹರಕೆ ಕಟ್ಟಿಕೊಂಡರೂ ಈಡೇರುವ ನಂಬಿಕೆ ಹಿನ್ನೆಲೆ ಸಾವಿರಾರು ಮಂದಿ ಭಕ್ತರು ಆಗಾಗ್ಗೆ ಭೇಟಿ ಕೊಟ್ಟು ಪ್ರಾರ್ಥನೆ ಸಲ್ಲಿಸುತ್ತಾರೆ.
300 ಬಸ್ಗಳನ್ನು ನೀಡುವಂತೆ ಮನವಿ
ಈ ಬಾರಿ ಶಕ್ತಿ ಯೋಜನೆ ಪರಿಣಾಮ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಓಡಾವವರ ಸಂಖ್ಯೆ ಹಿಂದಿನ ವರ್ಷಕ್ಕಿಂತ ಹೆಚ್ಚಾಗಿದೆ. ಹಾಗಾಗಿ ದಸರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ನೀಡುವಂತೆ ಸಾರಿಗೆ ಇಲಾಖೆ ಜೊತೆ ಮಾತುಕತೆ ನಡೆಯುತ್ತಿದೆ.
ಶಕ್ತಿ ಯೋಜನೆಯಿಂದ ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ ಮುಂದಿನ ತಿಂಗಳು ದಸರಾ ಮಹೋತ್ಸವ ಇರುವುದರಿಂದ ಹೆಚ್ಚಿನ ಸಂಖ್ಯೆ ಈ ಬಾರಿ ಪ್ರವಾಸಿಗರು ಬರುವ ಸಾಧ್ಯತೆ ಇದೆ. ಚಾಮುಂಡಿಬೆಟ್ಟಕ್ಕೆ ಉತ್ತರ ಕರ್ನಾಟಕದಿಂದಲೂ ಮಹಿಳೆಯರು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೈಸೂರು ವಿಭಾಗ ಸಾರಿಗೆ ಇಲಾಖೆಗೆ ಈ ಬಾರಿ ದಸರಾಗೆ 300 ಬಸ್ಗಳನ್ನು ನೀಡುವಂತೆ ಮನವಿ ಮಾಡಿದೆ.
ಸದ್ಯ ಮೈಸೂರು ಜಿಲ್ಲೆಯಲ್ಲಿ 980 ಬಸ್ ಗಳು ಓಡಾಡುತ್ತಿವೆ. ನಿತ್ಯ 3.75 ಲಕ್ಷಜನ ಪ್ರಯಾಣಿಸುತ್ತಿದ್ದಾರೆ. ಪ್ರತಿದಿನ 1.63 ಕೋಟಿ ಆದಾಯ ಸಂಗ್ರಹವಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 9 ಡಿಪೋ ಕಾರ್ಯ ನಿರ್ವಹಿಸುತ್ತಿದ್ದು, ಈ ಬಾರಿ ಬಿಎಂಟಿಸಿಯಿಂದಲೂ ಬಸ್ ನೀಡುವಂತೆ ಮೈಸೂರು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಶ್ರಾವಣ ಮಾಸದ ಜೊತೆಗೆ ಅಕ್ಟೋಬರ್ನಲ್ಲಿ ದಸರಾ ನಂತರ ಹಬ್ಬಗಳು ಮತ್ತು ಮದುವೆ ಸೀಸನ್ಗಳು ಆರಂಭವಾಗಲಿದೆ. ಇದರೊಂದಿಗೆ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ.
ದಸರಾಕ್ಕೆ ಇನ್ನೂ ಸಮಯ ಇರುವುದರಿಂದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯು ಹೆಚ್ಚುವರಿ 300 ಬಸ್ಗಳನ್ನು ಬಿಡುವ ಬಗ್ಗೆ ಯಾವುದೇ ನಿರ್ದೇಶನಗಳನ್ನು ನೀಡಿಲ್ಲ. ನಾವು ನೆರೆಯ ವಿಭಾಗಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೆಎಸ್ಆರ್ಟಿಸಿ ಮೈಸೂರು ವಿಭಾಗೀಯ ನಿಯಂತ್ರಕ ಜಿ. ಶ್ರೀನಿವಾಸ್ ತಿಳಿಸಿದ್ದಾರೆ.
ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ಆದಾಯ ದ್ವಿಗುಣಗೊಂಡಿದೆ. ಮೈಸೂರು ವಿಭಾಗದಲ್ಲಿ ಈ ಮೊದಲು ಸತ್ಯ 1.30 ಕೋಟಿ ರೂ. ಆದಾಯ ಬರುತ್ತಿತ್ತು. ಆದರೆ, ಶಕ್ತಿ ಯೋಜನೆ ಬಳಿಕ ನಿತ್ಯ 1.6.4 ಕೋಟಿ ರೂ. ಆದಾಯ ಸಂಗ್ರಹವಾಗುತ್ತಿದೆ. ಚಾಮುಂಡಿಬೆಟ್ಟ ಮಹದೇಶ್ವರ ಬೆಟ್ಟ ನಂಜನಗೂಡಿಗೆ ಆಗಮಿಸುವ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ.
ಮೈಸೂರು ವಿಭಾಗವು ಮಂಡ್ಯ ಮತ್ತು ಚಾಮರಾಜನಗರ ವಿಭಾಗಗಳಿಂದ 240 ಹೆಚ್ಚುವರಿ ಬಸ್ ಗಳನ್ನು ಪಡೆಯಲಾಗುತ್ತಿತ್ತು. ಇವು ಆಯ್ದ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಆದರೆ, ಈ ವರ್ಷ, ಶಕ್ತಿ ಯೋಜನೆ ಪ್ರಾರಂಭವಾದ ಕಾರಣ ನಿರೀಕ್ಷೆಗಿಂತ ಹೆಚ್ಚಿನ ರಶ್ ಇರುತ್ತದೆ. ಹಾಗಾಗಿ ವಿಭಾಗ 300 ಹೆಚ್ಚುವರಿ ಬಸ್ಗಳನ್ನು ನಿಯೋಜಿಸಲು ಯೋಚಿಸುತ್ತಿದ್ದು, ಬೆಂಗಳೂರಿಗೆ ಅಧಿಕ ಟ್ರಿಪ್ ಅವಶ್ಯಕತೆ ಇದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications