ಚಾಮರಾಜನಗರ: ಮನೆ ಮಾಲೀಕನನ್ನು ಹತ್ಯೆ ಮಾಡಿದ ಶ್ರೀಗಂಧ ಕಳ್ಳರು
ಚಾಮರಾಜನಗರ, ಅಕ್ಟೋಬರ್ 5: ಶ್ರೀಗಂಧದ ಮರ ಕದ್ದೊಯ್ಯಲು ಬಂದ ದುಷ್ಕರ್ಮಿಗಳು ಮನೆಯ ಮಾಲೀಕನನ್ನೇ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಸಮೀಪದ ಚಂದಕವಾಡಿಯಲ್ಲಿ ನಡೆದಿದೆ.
ಜನನಿಬಿಡ ಪ್ರದೇಶದಲ್ಲೇ ನಡೆದಿರುವ ಈ ಘಟನೆಯಿಂದ ಗ್ರಾಮದ ಜನತೆ ಬೆಚ್ಚಿಬಿದ್ದಿದ್ದಾರೆ. ಹತ್ಯೆಗೀಡಾದವರನ್ನು ಚಂದಕವಾಡಿ ಗ್ರಾಮದ ಶಿವಬಸಪ್ಪ (80) ಎಂದು ಗುರ್ತಿಸಲಾಗಿದ್ದು, ಮನೆಯ ಅನತಿ ದೂರದಲ್ಲೇ ಇವರ ಶವ ಪತ್ತೆಯಾಗಿದೆ.
ಶಿವಬಸಪ್ಪ ಪ್ರತಿದಿನ ಮನೆಯ ಹೊರಗೆ ಜಗುಲಿಯಲ್ಲಿ ಮಲಗುವುದು ವಾಡಿಕೆ. ಮನೆ ಮುಂದೆ ಬೆಳೆದು ನಿಂತಿದ್ದ ಶ್ರೀಗಂಧ ಮರ ಹಾಗೂ ಮನೆಯ ಮುಂಭಾಗವೇ ಇರುವ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿರುವ ದನಕರುಗಳ ರಕ್ಷಣೆಗೆಂದೇ ಅವರು ಮನೆಯ ಹೊರಗೆ ಮಲಗುತ್ತಿದ್ದರು. ಈ ನಡುವೆ ಲಕ್ಷಾಂತರ ರುಪಾಯಿ ಬೆಲೆ ಬಾಳುವ ಶ್ರೀಗಂಧ ಮರದ ಮೇಲೆ ಕಣ್ಣು ಹಾಕಿದ ಖದೀಮರು ಅದನ್ನು ಕದ್ದೊಯ್ಯಲು ಹೊಂಚು ಹಾಕಿದ್ದರು.

ಕುತ್ತಿಗೆಗೆ ಟವೆಲ್ ಬಿಗಿದು ಹತ್ಯೆ
ನಿನ್ನೆ ಮಧ್ಯರಾತ್ರಿ ಶ್ರೀಗಂಧದ ಮರ ಕಡಿದು ಕದ್ದೊಯ್ಯಲು ಬಂದ ಕಳ್ಳರಿಗೆ ಮನೆಯ ಹೊರಗೆ ಮಾಲೀಕ ಶಿವಬಸಪ್ಪ ಮಲಗಿರುವುದು ಕಂಡುಬಂದಿದೆ. ತಕ್ಷಣವೇ ಶಿವಬಸಪ್ಪ ಅವರ ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಅನತಿ ದೂರಕ್ಕೆ ಎತ್ತೊಯ್ದಿದ್ದಾರೆ. ಬಳಿಕ ಕುತ್ತಿಗೆಗೆ ಟವೆಲ್ ಬಿಗಿದು ಹತ್ಯೆ ಮಾಡಿದ್ದಾರೆ. ಇದಕ್ಕೂ ಮೊದಲು ಮನೆಯೊಳಗೆ ಇರುವವರು ಯಾರೂ ಹೊರ ಬಾರದಂತೆ ಮನೆಯ ಬಾಗಿಲಿಗೆ ಚಿಲಕ ಹಾಕಿದ್ದಾರೆ.

ತಂದೆಗಾಗಿ ಗ್ರಾಮಸ್ಥರೊಡನೆ ಹುಡುಕಾಟ
ಶಿವಬಸಪ್ಪ ಅವರನ್ನು ಹತ್ಯೆ ಮಾಡಿದ ನಂತರ ಮನೆ ಬಳಿ ಬಂದ ಖದೀಮರು ಶ್ರೀಗಂಧದ ಮರವನ್ನು ಕೊಯ್ಯಲು ಆರಂಭಿಸಿದ್ದಾರೆ. ಈ ಶಬ್ಧ ಕೇಳಿ ಮನೆಯೊಳಗೆ ಮಲಗಿದ್ದ ಶಿವಬಸಪ್ಪ ಅವರ ಪುತ್ರ ಶಿವಕುಮಾರ್ ಮತ್ತಿತರರು ಚಿಲಕ ಮುರಿದು ಹೊರಬಂದಿದ್ದಾರೆ. ಪ್ರಯಾಸಪಟ್ಟು ಮನೆಯಿಂದ ಹೊರ ಬರುತ್ತಿದ್ದಂತೆ ಮನೆಯ ಮುಂಭಾಗ ಮರ ಕೊಯ್ಯುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ. ಬಳಿಕ ತಮ್ಮ ತಂದೆ ಕಾಣದೆ ಇದ್ದಾಗ ಶಿವಕುಮಾರ್ ಕೂಗಿಕೊಂಡು ಗ್ರಾಮಸ್ಥರೊಡನೆ ಹುಡುಕಾಟ ನಡೆಸಿದಾಗ ಮನೆಯ ಅನತಿ ದೂರದಲ್ಲಿ ಶಿವಬಸಪ್ಪ ಅವರ ಶವ ಪತ್ತೆಯಾಗಿದೆ.

ಪಕ್ಕದ ಗ್ರಾಮದ ವ್ಯಕ್ತಿಗಳ ಮೇಲೆ ಅನುಮಾನ
ಪಕ್ಕದ ಗ್ರಾಮ ಕೋಡಿಮೋಳೆಯ ವ್ಯಕ್ತಿಗಳಿಬ್ಬರು ಈ ಶ್ರೀಗಂಧದ ಮರವನ್ನು ಖರೀದಿಗೆ ಕೊಡುವಂತೆ ಆಗಾಗ ಒತ್ತಾಯ ಮಾಡುತ್ತಿದ್ದರು ಎನ್ನಲಾಗಿದೆ. ಅವರೇ ಈ ಕೃತ್ಯ ಎಸಗಿರಬಹುದು ಎಂದು ಸಹ ಶಂಕಿಸಲಾಗಿದೆ. ಜನನಿಬಿಡ ಪ್ರದೇಶದಲ್ಲೇ ನಡೆದಿರುವ ಈ ಘಟನೆಯಿಂದ ಗ್ರಾಮದ ಜನತೆ ಬೆಚ್ಚಿಬಿದ್ದಿದ್ದಾರೆ. ಕೇವಲ ಒಂದು ಶ್ರೀಗಂದ ಮರಕ್ಕಾಗಿ ನಡೆದಿರುವ ಈ ಹತ್ಯೆಯಿಂದ ಜನರು ಭಯಭೀತರಾಗಿದ್ದಾರೆ.
Recommended Video

ಇನ್ಸ್ ಪೆಕ್ಟರ್ ನೇತೃತ್ವದ ತಂಡ ರಚನೆ
ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಖರೀದಿಗೆ ಮರ ಕೊಡುವಂತೆ ಒತ್ತಾಯ ಮಾಡುತ್ತಿದ್ದವರ ಮೇಲೆ ಶಂಕೆ ಇದ್ದು, ಪ್ರಕರಣದ ತನಿಖೆಗೆ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ನಂಜಪ್ಪ ಅವರ ನೇತೃತ್ವದ ತಂಡ ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಮರಾಜನಗರದ ರಾಮಸಮುದ್ರ ಪೂರ್ವ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಲೆ ಪಾತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
-
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications