ಚಾಮರಾಜನಗರದಲ್ಲಿ ಮದ್ಯ ಖರೀದಿಗೆ ಮುಗಿಬಿದ್ದ ಪಾನಪ್ರಿಯರು!
ಚಾಮರಾಜನಗರ, ಜುಲೈ 5: ಸುಪ್ರೀಂಕೋರ್ಟ್ ಆದೇಶದಿಂದ ಹೆದ್ದಾರಿ ಬದಿಯಲ್ಲಿದ್ದ ಮದ್ಯದಂಗಡಿಗಳ ಬಾಗಿಲು ಮುಚ್ಚಿದ ಪರಿಣಾಮವಾಗಿ ಗುಂಡ್ಲುಪೇಟೆಯ ಬೇಗೂರಿನ ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಸಗಟು ಮಾರಾಟ ಮಳಿಗೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ.
ತಾಲೂಕಿನಲ್ಲಿ ಹೆದ್ದಾರಿ ಬದಿಯಲ್ಲಿದ್ದ 24 ಮಳಿಗೆಗಳನ್ನು ಮುಚ್ಚಿದ ಪರಿಣಾಮವಾಗಿ ಬೇಗೂರು ಹಾಗೂ ಬೊಮ್ಮಲಾಪುರದಲ್ಲಿರುವ ಮದ್ಯದಂಗಡಿಗಳಲ್ಲಿ ಭರ್ಜರಿ ವಹಿವಾಟು ನಡೆಯುತ್ತಿದೆ. ಕೇಂದ್ರಸ್ಥಾನದಲ್ಲಿರುವ ಬೇಗೂರಿನ ಎಂಎಸ್ಐಎಲ್ ಸಗಟು ಮಾರಾಟ ಮಳಿಗೆಯಲ್ಲಿ ಗರಿಷ್ಠ ಮಾರಾಟ ಬೆಲೆಗೆ ಉತ್ಪನ್ನಗಳು ದೊರೆಯುವುದರಿಂದ ಮದ್ಯ ಪ್ರಿಯರು ಇಲ್ಲಿ ಖರೀದಿಸಲು ಮುಗಿಬೀಳುತ್ತಿದ್ದಾರೆ.

ಇಲ್ಲಿಗೆ ತಾಲೂಕಿನವರಲ್ಲದೆ, ನಂಜನಗೂಡು ಹಾಗೂ ಹೆಗ್ಗಡದೇವನಕೋಟೆ ತಾಲೂಕಿನ ವಿವಿಧ ಗ್ರಾಮಗಳಿಂದಲೂ ಜನರು ದ್ವಿಚಕ್ರ ವಾಹನ, ಆಟೋ ಹಾಗೂ ಕಾರುಗಳಲ್ಲಿ ಬಂದು ಮುಗಿಬಿದ್ದು ಮದ್ಯ ಖರೀದಿಸುತ್ತಿದ್ದಾರೆ. ಇದರಿಂದ ಮಳಿಗೆಯ ಮುಂದೆ ಖರೀದಿದಾರರು ಸಾಲುಗಟ್ಟಿ ನಿಲ್ಲುತ್ತಿದ್ದು, ಸಾರ್ವಜನಿಕರು ತಿರುಗಾಡಲೂ ಸಾಧ್ಯವಿಲ್ಲದಂತಾಗಿದೆ.

ಬೆಳಗ್ಗೆ 10 ಗಂಟೆಗೆ ಬಾಗಿಲು ತೆರೆಯುವ ಮಳಿಗೆಯಲ್ಲಿ ಒಂದು ಕ್ಷಣವೂ ಬಿಡುವಿಲ್ಲದಂತೆ ಮದ್ಯಮಾರಾಟ ಮಾಡಲಾಗುತ್ತಿದ್ದು, ಹಿಂದೆ ದಿನವಹಿ 80 ಸಾವಿರ ರೂಪಾಯಿ ವಹಿವಾಟು ನಡೆಸುತ್ತಿದ್ದ ಮಳಿಗೆಯಲ್ಲಿ ಸದ್ಯ 2.5 ಲಕ್ಷ ರೂಪಾಯಿಗೂ ಹೆಚ್ಚಿನ ಮಾಲು ಮಾರಾಟವಾಗುತ್ತಿದೆ. ತಡರಾತ್ರಿ 10 ಗಂಟೆಯಾದರೂ ಬಾಗಿಲು ಮುಚ್ಚಲು ಅವಕಾಶ ನೀಡದೆ ಖರೀದಿ ಮಾಡಲು ಗ್ರಾಹಕರು ಮುಗಿ ಬೀಳುತ್ತಿರುವುದು ಕಂಡುಬರುತ್ತಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications