Shakti Scheme: ಚಾಮರಾಜನಗರ ಜಿಲ್ಲೆಯಲ್ಲಿ ಇಲ್ಲಿಯವರೆಗೂ 1 ಕೋಟಿಗೂ ಅಧಿಕ ಮಹಿಳೆಯರ ಪ್ರಯಾಣ
ಚಾಮರಾಜನಗರ, ಆಗಸ್ಟ್, 25: ಶಕ್ತಿ ಯೋಜನೆ ಜಾರಿಯಾದ ಬಳಿಕ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಯಾಣಿಸಿದ ಒಟ್ಟು ಪ್ರಯಾಣಿಕರಲ್ಲಿ ಶೇಕಡಾ 64ರಷ್ಟು ಮಂದಿ ಮಹಿಳೆಯರೇ ಪ್ರಯಾಣ ಮಾಡಿದ್ದಾರೆ.
ಶಕ್ತಿ ಯೋಜನೆಗೆ ಜಿಲ್ಲೆಯಲ್ಲಿ ಮಹಿಳೆಯರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶಕ್ತಿ ಯೋಜನೆ ಜಾರಿಯಾದ ದಿನದಿಂದ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 1,63,44,799 ಮಂದಿ ಪ್ರಯಾಣ ಮಾಡಿದ್ದಾರೆ. ಈ ಪೈಕಿ 1,05,76,930 ಮಂದಿ ಮಹಿಳೆಯರೇ ಪ್ರಯಾಣ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಪೈಕಿ ಜೂನ್ 11ರಂದು ಶಕ್ತಿ ಯೋಜನೆ ಜಾರಿಯಾಗಿದೆ. ಉದ್ಯೋಗಕ್ಕಾಗಿ ದೂರದ ನಗರ, ಪಟ್ಟಣಗಳಿಗೆ ತೆರಳುವ ಮಹಿಳೆಯರಿಗೆ, ಶಾಲಾ ಕಾಲೇಜು ವಿದ್ಯಾರ್ಥಿನಿಯರು, ಯಾತ್ರಸ್ಥಳಗಳಿಗೆ ತೆರಳುವವರು ಯೋಜನೆಯ ಫಲಾನುಭವಿಗಳಾಗಿದ್ದಾರೆ.
ಜೂನ್ 11ರಂದು ಶಕ್ತಿ ಯೋಜನೆ ಚಾಮರಾಜನಗರ ಜಿಲ್ಲೆಯಲ್ಲಿ ಆರಂಭಗೊಂಡಿತು; ಜೂನ್ ಅಂತ್ಯದವರೆಗೆ ಒಟ್ಟಾರೆ 41,93,946 ಪ್ರಯಾಣಿಕರು ಚಾಮರಾಜನಗರ ನಿಗಮದ ಬಸ್ಸುಗಳಲ್ಲಿ ಸಂಚರಿಸಿದ್ದಾರೆ. ಈ ಪೈಕಿ 24,10,918 ರಷ್ಟು ಮಹಿಳೆಯರು ಪ್ರಯಾಣಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಒಟ್ಟು 79,05,964 ಸಂಚರಿಸುವ ಪ್ರಯಾಣಿಕರಲ್ಲಿ 54,76,569 ರಷ್ಟು ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಆಗಸ್ಟ್ ತಿಂಗಳಲ್ಲಿ 42,44,889 ಪ್ರಯಾಣಿಕರು ಸಂಚರಿಸುವವರ ನಡುವೆ 26,89,443 ಮಹಿಳೆಯರು ಶಕ್ತಿ ಯೋಜನೆ ಫಲ ಪಡೆದಿದ್ದಾರೆ.
ಒಟ್ಟಾರೆ ಯೋಜನೆ ಆರಂಭಗೊಂಡ ದಿನದಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 1,63,44,799 ಪ್ರಯಾಣಿಕರು ನಿಗಮದ ಬಸ್ಸುಗಳಲ್ಲಿ ಸಂಚರಿಸಿದ್ದು, ಇವರಲ್ಲಿ 1,05,76,930 ಮಹಿಳಾ ಪ್ರಯಾಣಿಕರು ಇದ್ದು, ಶೇಕಡಾ 64.71ರಷ್ಟು ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ತಿಳಿದಿಬಂದಿದೆ.
ಇನ್ನು, ಚಾಮರಾಜನಗರ ವಿಭಾಗವು ಒಟ್ಟು 4 ಘಟಕಗಳನ್ನು ಹೊಂದಿದ್ದು, 507 ಬಸ್ಸುಗಳನ್ನು ಹೊಂದಿದೆ. ಶಕ್ತಿ ಯೋಜನೆ ಜಾರಿ ಬಂದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆಯು ಹೆಚ್ಚಿದೆ. ವಾರಾಂತ್ಯದ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವುದರಿಂದ ಬೇಡಿಕೆಗೆ ಅನುಗುಣವಾಗಿ ಬಸ್ಸುಗಳ ನಿಯೋಜನೆ ಮಾಡಲಾಗುತ್ತಿದೆ.
ಅಗತ್ಯಕ್ಕೆ ತಕ್ಕಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮವು ಬಸ್ಸುಗಳ ಕಾರ್ಯಾಚರಣೆಗೆ ಕ್ರಮ ವಹಿಸುತ್ತಿದೆ ಎಂದು ಕೆ.ಎಸ್.ಆರ್.ಟಿ.ಸಿ ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ಅವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಶಕ್ತಿ ಯೋಜನೆ ಬಳಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಅದರಲ್ಲೂ ಮಹಿಳಾ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಂಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications