ಸದ್ಯದಲ್ಲೇ ಮುಜರಾಯಿ ವಶಕ್ಕೆ ಕಿಚ್ಚಗುತ್ತಿ ಮಾರಮ್ಮ ದೇವಸ್ಥಾನ
ಚಾಮರಾಜನಗರ, ಡಿಸೆಂಬರ್ 16: ಕಿಚ್ಚಗುತ್ತಿ ಮಾರಮ್ಮ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಒಳಪಡಿಸಲು ಚಿಂತನೆ ನಡೆಸಲಾಗುತ್ತಿದೆ. ಸುಳ್ವಾಡಿ ಗ್ರಾಮದ ದೇವಸ್ಥಾನದಲ್ಲಿ ಪೂಜಾರಿಗಳ ಎರಡು ಬಣ ಹಾಗೂ ಟ್ರಸ್ಟ್ ನಲ್ಲೂ ಎರಡು ಬಣಗಳಿದ್ದವು. ಆದರೆ ಸ್ಪಷ್ಟವಾಗಿ ಯಾರು ಕೃತ್ಯಕ್ಕೆ ಕಾರಣ ಎಂದು ಗೊತ್ತಿಲ್ಲ ಎಂದು ಹನೂರು ಶಾಸಕ ನರೇಂದ್ರ ತಿಳಿಸಿದರು.
ಜಂಟಿ ಸುದ್ದಿಗೋಷ್ಠಿ ನಡೆಸಿ ಮಾರಮ್ಮ ದೇಗುಲದಲ್ಲಿ ವಿಷಪ್ರಸಾದ ಪ್ರಕರಣ ಕುರಿತು ಮಾತನಾಡಿದ ಶಾಸಕ ನರೇಂದ್ರ, ದೇವಾಸ್ಥಾನವನ್ನು ಮುಜರಾಯಿ ಇಲಾಖೆಗೆ ಒಳಪಡಿಸಲು ಚಿಂತನೆ ನಡೆಸಲಾಗುತ್ತಿದೆ. ಸುಳ್ವಾಡಿ ಗ್ರಾಮದ ದೇವಸ್ಥಾನದಲ್ಲಿ ಪೂಜಾರಿ ಗಳ ಎರಡು ಬಣ ಹಾಗೂ ಟ್ರಸ್ಟ್ ನಲ್ಲೂ ಎರಡು ಬಣಗಳಿದ್ದವು.
ಈ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಪಡೆಯುವ ಚಿಂತನೆ ಆಗುತ್ತಿದೆ. ಸರ್ಕಾರಕ್ಕೆ ಈ ಬಗ್ಗೆ ಒತ್ತಾಯಿಸುತ್ತೇನೆ ಎಂದು ಆಗ್ರಹಿಸಿದರು. ಪ್ರಸಾದದಲ್ಲಿ ವಿಷ ಹಾಕಿರುವವರು ಯಾರೆಂದು ತನಿಖೆಯ ನಂತರವಷ್ಟೇ ಗೊತ್ತಾಗಲಿದೆ. 13ಜನ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು.

ಅಂದು ಮಾಲೆ ಹಾಕಿಕೊಂಡ ಎರಡು ಗುಂಪುಗಳ ಪೈಕಿ ಮೊದಲು ಬಂದ ಗುಂಪು ಪ್ರಸಾದ ಸ್ವೀಕರಿಸಿದ್ದಾರೆ. ಪ್ರಸಾದದಲ್ಲಿ ವಾಸನೆ ಬಂದರು ಕೆಲವರು ದೇವರ ಪ್ರಸಾದ ಕೆಳಗೆ ಬೀಸಾಡಬಾರದೆಂದು ತಿಂದಿದ್ದಾರೆ ಎಂದರು. ಸುಳ್ವಾಡಿ ಗ್ರಾಮದ ವಿಷಾಹಾರ ಸೇವನೆ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ ಟಿ ದೇವೇಗೌಡ ಅವರು ಮೈಸೂರಿನ ಅಪೋಲೋ ಬಿಜಿಎಸ್ ಮತ್ತು ಜೆ ಎಸ್ ಎಸ್ ಆಸ್ಪತ್ರೆಗಳಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications