Male Mahadeshwara Hill: ಮಲೆ ಮಾದಪ್ಪನ ಬೆಟ್ಟದಲ್ಲಿ ಶ್ರಾವಣ ಸಂಭ್ರಮ: 108 ಕುಂಭೋತ್ಸವ
ಚಾಮರಾಜನಗರ, ಆಗಸ್ಟ್, 05: ಇಂದು (ಆಗಸ್ಟ್ 05) ಶ್ರಾವಣ ಮೊದಲ ಸೋಮವಾರ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳ ದೇವಸ್ಥಾನಗಳಲ್ಲಿ ಭರ್ಜರಿ ಪೂಜೆ ನಡೆಯುತ್ತಿದೆ. ಹಾಗೆಯೇ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರು ಶ್ರಾವಣ ಮಾಸದ 108 ಕುಂಭೋತ್ಸವ ಸೇವೆ ಸೋಮವಾರ (ಆಗಸ್ಟ್ 05) ಭಕ್ತರು ಶ್ರದ್ಧಾಭಕ್ತಿಯಿಂದ ನೆರೆವೇರಿಸಿದರು.
ಶ್ರೀ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠಾಧ್ಯಕ್ಷರಾದ ಪಟ್ಟದ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿಗಳವರ ನೇತೃತ್ವದಲ್ಲಿ ಬೇಡಗಂಪಣ ಅರ್ಚಕರು ಮಜ್ಜನಬಾವಿಯಿಂದ 108 ಕುಂಭಗಳನ್ನು ಹೊತ್ತು ತಂದು ಹೋಮ ನೆರವೇರಿಸಿ ಸ್ವಾಮಿಗೆ ಅಭಿಷೇಕ ನೆರವೇರಿಸಿದರು.

ಜೊತೆಗೆ, 108 ಎಳನೀರುಗಳಿಂದಲೂ ಅಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ವಿಶೇಷ ಪೂಜೆ ನೆರವೇರಿತು. ದೇವಾಲಯದಲ್ಲಿ ಮೊದಲಪೂಜೆ ಆರಂಭವಾಗಿದ್ದು, ಇದರ ಜೊತೆಗೆ ದೇವಾಲಯದ ರಾಜಗೋಪುರದ ಮುಂದೆ ಮಜ್ಜನ ಬಾವಿಗೆ ತೆರಳಿ ಗಂಗೆ ಪೂಜೆ ಸೇರಿ, ವಿಶೇಷ ಪೂಜೆ ಕೈಗೊಂಡರು. ಬಳಿಕ ವಾದ್ಯಮೇಳ, ಛತ್ರಿ, ಚಾಮರದೊಂದಿದೆ 108 ಅರ್ಚಕರು ಕುಂಭ ಹೊತ್ತು ದೇವಾಲಯದ ಹೊರ ಹಾಗೂ ಒಳ ಆವರಣದಲ್ಲಿ ಮೆರವಣಿಗೆ ಮಾಡಿ ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದರು.
ಪೂಜೆ ನಡೆದ ನಂತರ ಕುಂಬಾಭಿಷೇಕ ನೆರವೇರಿತು. ಪ್ರತಿದಿನ ದೇವರಿಗೆ 12 ಕುಂಬಾಭಿಷೇಕ, ಲಕ್ಷಬಿಲ್ವಾರ್ಚನೆ ಪೂಜೆ ಸಲ್ಲಿಕೆಯಾಗಲಿದೆ. ಶ್ರಾವಣ ಮಾಸದ ಕೊನೆಯ ದಿನ ಮತ್ತೆ 108 ಕುಂಬಾಭಿಷೇಕ ಜರುಗಲಿದೆ. ದೇವಾಲಯದಲ್ಲಿ ತ್ರಿಕಾಲ ಪೂಜೆ ಪ್ರಾರಂಭವಾಗಿದ್ದು, ಬೆಳಿಗ್ಗೆ 4ರಿಂದ ಬೆಳಗ್ಗೆ 6ರವರೆಗೆ ಮೊದಲ ಪೂಜೆ, ಅಭಿಷೇಕ, ಬಿಲ್ವಾರ್ಚನೆ, ಆರತಿ, 10:30ಕ್ಕೆ ಎರಡನೇ ಪೂಜೆ, ಸಂಜೆ 6:30ರಿಂದ ರಾತ್ರಿ 8:30ರವರೆಗೆ ಮೂರನೇ ಪೂಜೆ ಜರುಗುತ್ತಿದೆ.
ಶ್ರೀ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ದಿನವಾದ ಬೇಡಗಂಪಣ ಅರ್ಚಕರಿಂದ ಶ್ರೀ ಸ್ವಾಮಿಗೆ 108 ಕುಂಭಾಭಿಷೇಕ ಪ್ರಯುಕ್ತ ಗಂಗಾಪೂಜೆ, ಗಣಪತಿಪೂಜೆ ಪುಣ್ಯಾಹ, ಪಂಚ ಕಳಶ, ನವಗ್ರಹ ಸಮೇತ ಮಹಾಮೃತ್ಯುಂಜಯ, ಅಷ್ಟದಿಕ್ಷಾಲಕರು, ಸಪ್ತ ಸಭಾ ದೇವತೆಗಳು ಕಳಸ ಉಮಾಮಹೇಶ್ವರ ಕಳಸ ಆವಾಹನೆ, ಹೋಮಹವನ ಪೂಜೆಯನ್ನು ಮಾಡಲಾಯಿತು.
ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ರಘು ಅವರ ನೇತೃತ್ವದಲ್ಲಿ, ಬೇಡಗಂಪಣ ಅರ್ಚಕರ ವತಿಯಿಂದ ಶ್ರೀ ಮಲೆ ಮಹದೇಶ್ವರ ಸ್ವಾಮಿ ಸನ್ನಿಧಾನದ ಆಗಮಿಕರಾದ ಕರವೀರಸ್ವಾಮಿ ಮತ್ತು ಗುಂಡೆಗಾಲದ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಾನಿತ್ಯದಲ್ಲಿ 108 ಕುಂಭಗಳ ಉತ್ಸವ ಮತ್ತು ಶ್ರೀ ಸ್ವಾಮಿಗೆ ಅಭಿಷೇಕಗಳೊಂದಿಗೆ ಶ್ರಾವಣ ಮಾಸದ ಪೂಜೆ ವಿಜೃಂಭಣೆಯಿಂದ ನಡೆಯಿತು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications