Male Mahadeshwara Hill: ಮಲೆ ಮಾದಪ್ಪನ ಬೆಟ್ಟದಲ್ಲಿ ಶ್ರಾವಣ ಸಂಭ್ರಮ: 108 ಕುಂಭೋತ್ಸವ
ಚಾಮರಾಜನಗರ, ಆಗಸ್ಟ್, 05: ಇಂದು (ಆಗಸ್ಟ್ 05) ಶ್ರಾವಣ ಮೊದಲ ಸೋಮವಾರ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳ ದೇವಸ್ಥಾನಗಳಲ್ಲಿ ಭರ್ಜರಿ ಪೂಜೆ ನಡೆಯುತ್ತಿದೆ. ಹಾಗೆಯೇ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರು ಶ್ರಾವಣ ಮಾಸದ 108 ಕುಂಭೋತ್ಸವ ಸೇವೆ ಸೋಮವಾರ (ಆಗಸ್ಟ್ 05) ಭಕ್ತರು ಶ್ರದ್ಧಾಭಕ್ತಿಯಿಂದ ನೆರೆವೇರಿಸಿದರು.
ಶ್ರೀ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠಾಧ್ಯಕ್ಷರಾದ ಪಟ್ಟದ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿಗಳವರ ನೇತೃತ್ವದಲ್ಲಿ ಬೇಡಗಂಪಣ ಅರ್ಚಕರು ಮಜ್ಜನಬಾವಿಯಿಂದ 108 ಕುಂಭಗಳನ್ನು ಹೊತ್ತು ತಂದು ಹೋಮ ನೆರವೇರಿಸಿ ಸ್ವಾಮಿಗೆ ಅಭಿಷೇಕ ನೆರವೇರಿಸಿದರು.

ಜೊತೆಗೆ, 108 ಎಳನೀರುಗಳಿಂದಲೂ ಅಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ವಿಶೇಷ ಪೂಜೆ ನೆರವೇರಿತು. ದೇವಾಲಯದಲ್ಲಿ ಮೊದಲಪೂಜೆ ಆರಂಭವಾಗಿದ್ದು, ಇದರ ಜೊತೆಗೆ ದೇವಾಲಯದ ರಾಜಗೋಪುರದ ಮುಂದೆ ಮಜ್ಜನ ಬಾವಿಗೆ ತೆರಳಿ ಗಂಗೆ ಪೂಜೆ ಸೇರಿ, ವಿಶೇಷ ಪೂಜೆ ಕೈಗೊಂಡರು. ಬಳಿಕ ವಾದ್ಯಮೇಳ, ಛತ್ರಿ, ಚಾಮರದೊಂದಿದೆ 108 ಅರ್ಚಕರು ಕುಂಭ ಹೊತ್ತು ದೇವಾಲಯದ ಹೊರ ಹಾಗೂ ಒಳ ಆವರಣದಲ್ಲಿ ಮೆರವಣಿಗೆ ಮಾಡಿ ಗರ್ಭಗುಡಿ ಸುತ್ತ ಪ್ರದಕ್ಷಿಣೆ ಹಾಕಿದರು.
ಪೂಜೆ ನಡೆದ ನಂತರ ಕುಂಬಾಭಿಷೇಕ ನೆರವೇರಿತು. ಪ್ರತಿದಿನ ದೇವರಿಗೆ 12 ಕುಂಬಾಭಿಷೇಕ, ಲಕ್ಷಬಿಲ್ವಾರ್ಚನೆ ಪೂಜೆ ಸಲ್ಲಿಕೆಯಾಗಲಿದೆ. ಶ್ರಾವಣ ಮಾಸದ ಕೊನೆಯ ದಿನ ಮತ್ತೆ 108 ಕುಂಬಾಭಿಷೇಕ ಜರುಗಲಿದೆ. ದೇವಾಲಯದಲ್ಲಿ ತ್ರಿಕಾಲ ಪೂಜೆ ಪ್ರಾರಂಭವಾಗಿದ್ದು, ಬೆಳಿಗ್ಗೆ 4ರಿಂದ ಬೆಳಗ್ಗೆ 6ರವರೆಗೆ ಮೊದಲ ಪೂಜೆ, ಅಭಿಷೇಕ, ಬಿಲ್ವಾರ್ಚನೆ, ಆರತಿ, 10:30ಕ್ಕೆ ಎರಡನೇ ಪೂಜೆ, ಸಂಜೆ 6:30ರಿಂದ ರಾತ್ರಿ 8:30ರವರೆಗೆ ಮೂರನೇ ಪೂಜೆ ಜರುಗುತ್ತಿದೆ.
ಶ್ರೀ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ದಿನವಾದ ಬೇಡಗಂಪಣ ಅರ್ಚಕರಿಂದ ಶ್ರೀ ಸ್ವಾಮಿಗೆ 108 ಕುಂಭಾಭಿಷೇಕ ಪ್ರಯುಕ್ತ ಗಂಗಾಪೂಜೆ, ಗಣಪತಿಪೂಜೆ ಪುಣ್ಯಾಹ, ಪಂಚ ಕಳಶ, ನವಗ್ರಹ ಸಮೇತ ಮಹಾಮೃತ್ಯುಂಜಯ, ಅಷ್ಟದಿಕ್ಷಾಲಕರು, ಸಪ್ತ ಸಭಾ ದೇವತೆಗಳು ಕಳಸ ಉಮಾಮಹೇಶ್ವರ ಕಳಸ ಆವಾಹನೆ, ಹೋಮಹವನ ಪೂಜೆಯನ್ನು ಮಾಡಲಾಯಿತು.
ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ರಘು ಅವರ ನೇತೃತ್ವದಲ್ಲಿ, ಬೇಡಗಂಪಣ ಅರ್ಚಕರ ವತಿಯಿಂದ ಶ್ರೀ ಮಲೆ ಮಹದೇಶ್ವರ ಸ್ವಾಮಿ ಸನ್ನಿಧಾನದ ಆಗಮಿಕರಾದ ಕರವೀರಸ್ವಾಮಿ ಮತ್ತು ಗುಂಡೆಗಾಲದ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಾನಿತ್ಯದಲ್ಲಿ 108 ಕುಂಭಗಳ ಉತ್ಸವ ಮತ್ತು ಶ್ರೀ ಸ್ವಾಮಿಗೆ ಅಭಿಷೇಕಗಳೊಂದಿಗೆ ಶ್ರಾವಣ ಮಾಸದ ಪೂಜೆ ವಿಜೃಂಭಣೆಯಿಂದ ನಡೆಯಿತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications