ಪ್ರಧಾನಿಗೆ ಗೌರವ ಕೊಡದ ಸಿದ್ದರಾಮಯ್ಯ ಒಬ್ಬ ಅನಾಗರಿಕ: ಶ್ರೀನಿವಾಸ ಪ್ರಸಾದ್
ಚಾಮರಾಜನಗರ, ಮೇ 6: ತನ್ನ ಉಡಾಫೆ ಮಾತಿನಿಂದಲೇ ಸಿದ್ದರಾಮಯ್ಯಗೆ ಚಾಮುಂಡೇಶ್ವರಿಯಲ್ಲಿ ಸೋಲಾಗಿದ್ದು ಎಂದು ಬಿಜೆಪಿ ಮುಖಂಡ ಮತ್ತು ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ವಿ ಶ್ರೀನಿವಾಸ ಪ್ರಸಾದ್, ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
120 ಕೋಟಿ ಜನರನ್ನು ಪ್ರತಿನಿಧಿಸುವ ಪ್ರಧಾನಮಂತ್ರಿಯವರನ್ನು ಬಹುವಚನದಲ್ಲಿ ಮಾತನಾಡಿಸಬೇಕು ಎನ್ನುವ ಕಾಮನ್ ಸೆನ್ಸ್ ಇಲ್ಲದ ಸಿದ್ದರಾಮಯ್ಯ ಒಬ್ಬ ಅನಾಗರಿಕ ಎಂದು ಶ್ರೀನಿವಾಸ ಪ್ರಸಾದ್ ಕಿಡಿಕಾರಿದ್ದಾರೆ.
ರಾಜ್ಯದ ದೋಸ್ತಿ ಸರಕಾರದಲ್ಲಿ ಸಮನ್ವಯ ಇಲ್ಲ ಎನ್ನುವುದು ಜಿ ಟಿ ದೇವೇಗೌಡ ಮತ್ತು ಸಿದ್ದರಾಮಯ್ಯನವರ ಹೇಳಿಕೆಯಿಂದ ಸಾಬೀತಾಗಿದೆ ಎಂದಿರುವ ಶ್ರೀನಿವಾಸ ಪ್ರಸಾದ್, ರಾಜ್ಯದಲ್ಲಿ ಇಪ್ಪತ್ತಕ್ಕೂ ಹೆಚ್ಚು ಸ್ಥಾನದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮತದಾನವೂ ಹೆಚ್ಚಿನ ಪ್ರಮಾಣದಲ್ಲಿ ಆಗಿದೆ, ಇದರಿಂದ ನನಗೆ ಹೆಚ್ಚಿನ ಮತ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದೇನೆ. ಇದೊಂದು ಪ್ರಯಾಸಕರವಾದ ಚುನಾವಣೆಯಾಗಿತ್ತು ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಸಿದ್ದರಾಮಯ್ಯನವರು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ಆದರೂ ಪ್ರಧಾನಿಯವರನ್ನು ಯಾವರೀತಿ ಕರೆಯಬೇಕು, ಹೇಗೆ ಮಾತನಾಡಿಸಬೇಕು ಎಂದು ಗೊತ್ತಿಲ್ಲದ ಅವರು ಒಬ್ಬ ನಾಗರೀಕನೇ ಅಲ್ಲ ಎಂದು ಶ್ರೀನಿವಾಸ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಶಿಷ್ಯನೇ ಆಗಿರುವ ಧ್ರುವನಾರಾಯಣ್, ಶ್ರೀನಿವಾಸ ಪ್ರಸಾದ್ ಅವರ ಪ್ರತಿಸ್ಪರ್ಧಿ, ಮೇ 23ರಂದು ಫಲಿತಾಂಶ ಹೊರಬೀಳಲಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications