ವಿಷವಿಕ್ಕಿದ ಆರೋಪಿಗಳಿಗೆ ಶೀಘ್ರ ಶಿಕ್ಷೆ ಪ್ರಕಟಿಸಿ : ಡಾ. ಎಸ್.ಎಲ್. ಭೈರಪ್ಪ
ಚಾಮರಾಜನಗರ, ಡಿಸೆಂಬರ್ 22 : ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಾಲಯದ ಪ್ರಸಾದಕ್ಕೆ ವಿಷ ಹಾಕಿ 17 ಜನರ ಸಾವಿಗೆ ಕಾರಣರಾದ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ವಿಳಂಬ ಮಾಡದೇ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಶೀಘ್ರವೇ ಶಿಕ್ಷೆ ಪ್ರಕಟಿಸಬೇಕಾಗಿದೆ ಎಂದು ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಹೇಳಿದ್ದಾರೆ.
ಕೊಳ್ಳೇಗಾಲದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ, ಸುಳ್ವಾಡಿ ಮಾರಮ್ಮ ದೇವಾಲಯದ ಪ್ರಸಾದಕ್ಕೆ ವಿಷ ಬೆರೆಸಿ ಅಮಾಯಕರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಿವಿಧ ಪ್ರಕರಣಗಳನ್ನು ಗಮನಿಸಿದಾಗ ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯವು ಆರೋಪಿಗೆ ಶಿಕ್ಷೆ ಪ್ರಕಟಿಸಲು ವಿಳಂಬವಾಗಿರುವುದು ಕಂಡು ಬಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಉದಾಹರಣೆಗೆ ಕಸಬ್ ಪ್ರಕರಣದಲ್ಲಿ 20 ವರ್ಷವಾದರೂ ಯಾವುದೇ ಶಿಕ್ಷೆಯಾಗಲಿಲ್ಲ. ಸುಮ್ಮನೆ ಆತನನ್ನು ಜೈಲಿನಲ್ಲಿಟ್ಟುಕೊಂಡು ಬಿರಿಯಾನಿ ನೀಡಲಾಯಿತು. ಜಿಂಕೆ ಕೊಂದ ಕೇಸ್ ಕೂಡ 22 ವರ್ಷ ನಡೆಯಿತು. ಈ ರೀತಿಯ ಹತ್ತು ಹಲವು ಪ್ರಕರಣಗಳಿವೆ ಅವುಗಳಂತೆ ಈ ಪ್ರಕರಣವೂ ಆಗದೆ ಆದಷ್ಟು ಬೇಗ ಶಿಕ್ಷೆ ಪ್ರಕಟಿಸುವಂತಾಗಬೇಕು. ವಿಳಂಬವಾದಲ್ಲಿ ಆರೋಪಿಗಳಿಗೆ ಕಾನೂನಿನ ಭಯವಿರುವುದಿಲ್ಲ ಹೀಗಾಗಿ ಸುಳ್ವಾಡಿ ದುರಂತ ಪ್ರಕರಣದ ಆರೋಪಿಗಳಿಗೆ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದರು.

ಸಾಲೂರು ಮಠದ ಇಮ್ಮಡಿ ಮಹದೇವಸ್ವಾಮಿ ಆರೋಪಿಯಾದ ತಕ್ಷಣವೇ ಇತರೇ ಮಠ ಮಾನ್ಯಗಳ ಬಗ್ಗೆ ಹಾಗೂ ಮಠಾಧೀಶರ ಬಗ್ಗೆ ಕೆಟ್ಟ ಭಾವನೆ ತಾಳುವುದು ಸರಿಯಲ್ಲ. ಈ ಸಮಾಜಕ್ಕೆ ಒಳಿತು ಮಾಡುತ್ತಿರುವ ಹಲವಾರು ಮಠಗಳಿವೆ. ಪೂಜ್ಯ ಸ್ವಾಮೀಜಿಗಳಿದ್ದಾರೆ ಎಂದು ಹೇಳಿದರು.
ದುರಂತದಲ್ಲಿ ಮೃತಪಟ್ಟವರಿಗೆ ಸರ್ಕಾರ 5 ಲಕ್ಷ ಪರಿಹಾರ ನೀಡಿದರೆ ಸಾಲದು. ಅವರ ಕುಟುಂಬ ಸೇರಿದಂತೆ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿ ಇದೀಗ ಚೇತರಿಕೆ ಕಂಡ ಕುಟುಂಬಕ್ಕೂ ಎಲ್ಲಾ ರೀತಿಯ ಸಹಾಯವನ್ನು ಸರ್ಕಾರ ಮಾಡಬೇಕು ಎಂದು ಮನವಿ ಮಾಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications